ಬ್ರೇಕಿಂಗ್ ನ್ಯೂಸ್
30-08-20 09:09 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 30: ಕೊರೊನಾ ಲಾಕ್ ಡೌನ್ ನಿಯಂತ್ರಣವನ್ನು ಹಂತ ಹಂತವಾಗಿ ಸಡಿಲಗೊಳಿಸುತ್ತಿರುವ ಕೇಂದ್ರ ಸರಕಾರ ಅನ್ ಲಾಕ್ 4.0 ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 7ರ ನಂತರ ದೇಶಾದ್ಯಂತ ಮೆಟ್ರೊ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಕೇಂದ್ರ, ಶಾಲೆ, ಕಾಲೇಜು ಸೆಪ್ಟೆಂಬರ್ 30ರ ವರೆಗೂ ತೆರೆಯಲು ಅನುಮತಿ ನೀಡಿಲ್ಲ.

ಸೆಪ್ಟೆಂಬರ್ 21ರ ಬಳಿಕ ಸಭೆ, ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸಿ ನೂರು ಜನರಿಗೆ ಸೀಮಿತ ಆಗಿರಬೇಕು. ಇದರಂತೆ ರಾಜಕೀಯ ಸಭೆಗಳು, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ಸಿಗಲಿದೆ. ಹಾಗೆಯೇ ಹವಾನಿಯಂತ್ರಣ ರಹಿತ ಸಿನಿಮಾ ಟಾಕೀಸ್ ತೆರೆಯುವುದಕ್ಕೂ ಅವಕಾಶ ನೀಡಲಾಗಿದೆ. ಇನ್ನು ಕಂಟೈನ್ಮೆಂಟ್ ಝೋನಲ್ಲಿ ನಿರ್ಬಂಧ ಯಥಾಸ್ಥಿತಿ ಮುಂದುವರಿಯಲಿದೆ. ಉಳಿದಂತೆ ಅಗತ್ಯ ಬಿದ್ದರೆ ಹೆಚ್ಚುವರಿ ಲಾಕ್ ಡೌನ್ ಹೇರುವುದಕ್ಕೆ ರಾಜ್ಯ ಸರಕಾರಗಳಿಗೆ ಅಧಿಕಾರ ನೀಡಲಾಗಿದೆ. ಅಲ್ಲದೆ, ಅಂತಾರಾಜ್ಯ ಸಂಚಾರವನ್ನು ಸಂಪೂರ್ಣ ಮುಕ್ತಗೊಳಿಸಲಾಗಿದೆ. ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಬಾರದು, ಜೊತೆಗೆ ಪ್ರತ್ಯೇಕವಾಗಿ ಇ- ಪಾಸ್ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.

ಇನ್ನು ಶಾಲೆ, ಕಾಲೇಜನ್ನು ಸೆಪ್ಟೆಂಬರ್ 30 ರ ವರೆಗೆ ತೆರೆಯುವಂತಿಲ್ಲ. ಅನ್ ಲೈನ್ ಕ್ಲಾಸ್ ನಡೆಸುವುದಿದ್ದರೆ ಶಿಕ್ಷಣ ಸಂಸ್ಥೆಗಳು 50 ಶೇ. ಸಿಬಂದಿಯನ್ನು ಕರೆಸಿಕೊಳ್ಳಬಹುದು. ಈ ಸೌಲಭ್ಯ ಕಂಟೈನ್ಮೆಂಟ್ ವಲಯದಿಂದ ಹೊರಗಿನ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರಲಿದೆ. ಇನ್ನು 9ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು ಬೋಧನೆ, ನೋಟ್ಸ್ ವಿಚಾರದಲ್ಲಿ ಶಿಕ್ಷಕರ ಜೊತೆ ವ್ಯವಹರಿಸಲು ಶಾಲೆ ಅಥವಾ ಕಾಲೇಜಿಗೆ ತೆರಳಲು ಅವಕಾಶ ನೀಡಲಾಗಿದೆ. ಆದರೆ ಪೋಷಕರ ಪರ್ಮಿಶನ್ ಪಡೆದೇ ಶಾಲೆ, ಕಾಲೇಜಿಗೆ ತೆರಳುವಂತೆ ಸೂಚಿಸಲಾಗಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am