ಬ್ರೇಕಿಂಗ್ ನ್ಯೂಸ್
30-08-20 09:09 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 30: ಕೊರೊನಾ ಲಾಕ್ ಡೌನ್ ನಿಯಂತ್ರಣವನ್ನು ಹಂತ ಹಂತವಾಗಿ ಸಡಿಲಗೊಳಿಸುತ್ತಿರುವ ಕೇಂದ್ರ ಸರಕಾರ ಅನ್ ಲಾಕ್ 4.0 ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 7ರ ನಂತರ ದೇಶಾದ್ಯಂತ ಮೆಟ್ರೊ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಕೇಂದ್ರ, ಶಾಲೆ, ಕಾಲೇಜು ಸೆಪ್ಟೆಂಬರ್ 30ರ ವರೆಗೂ ತೆರೆಯಲು ಅನುಮತಿ ನೀಡಿಲ್ಲ.

ಸೆಪ್ಟೆಂಬರ್ 21ರ ಬಳಿಕ ಸಭೆ, ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸಿ ನೂರು ಜನರಿಗೆ ಸೀಮಿತ ಆಗಿರಬೇಕು. ಇದರಂತೆ ರಾಜಕೀಯ ಸಭೆಗಳು, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ಸಿಗಲಿದೆ. ಹಾಗೆಯೇ ಹವಾನಿಯಂತ್ರಣ ರಹಿತ ಸಿನಿಮಾ ಟಾಕೀಸ್ ತೆರೆಯುವುದಕ್ಕೂ ಅವಕಾಶ ನೀಡಲಾಗಿದೆ. ಇನ್ನು ಕಂಟೈನ್ಮೆಂಟ್ ಝೋನಲ್ಲಿ ನಿರ್ಬಂಧ ಯಥಾಸ್ಥಿತಿ ಮುಂದುವರಿಯಲಿದೆ. ಉಳಿದಂತೆ ಅಗತ್ಯ ಬಿದ್ದರೆ ಹೆಚ್ಚುವರಿ ಲಾಕ್ ಡೌನ್ ಹೇರುವುದಕ್ಕೆ ರಾಜ್ಯ ಸರಕಾರಗಳಿಗೆ ಅಧಿಕಾರ ನೀಡಲಾಗಿದೆ. ಅಲ್ಲದೆ, ಅಂತಾರಾಜ್ಯ ಸಂಚಾರವನ್ನು ಸಂಪೂರ್ಣ ಮುಕ್ತಗೊಳಿಸಲಾಗಿದೆ. ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಬಾರದು, ಜೊತೆಗೆ ಪ್ರತ್ಯೇಕವಾಗಿ ಇ- ಪಾಸ್ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.

ಇನ್ನು ಶಾಲೆ, ಕಾಲೇಜನ್ನು ಸೆಪ್ಟೆಂಬರ್ 30 ರ ವರೆಗೆ ತೆರೆಯುವಂತಿಲ್ಲ. ಅನ್ ಲೈನ್ ಕ್ಲಾಸ್ ನಡೆಸುವುದಿದ್ದರೆ ಶಿಕ್ಷಣ ಸಂಸ್ಥೆಗಳು 50 ಶೇ. ಸಿಬಂದಿಯನ್ನು ಕರೆಸಿಕೊಳ್ಳಬಹುದು. ಈ ಸೌಲಭ್ಯ ಕಂಟೈನ್ಮೆಂಟ್ ವಲಯದಿಂದ ಹೊರಗಿನ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರಲಿದೆ. ಇನ್ನು 9ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು ಬೋಧನೆ, ನೋಟ್ಸ್ ವಿಚಾರದಲ್ಲಿ ಶಿಕ್ಷಕರ ಜೊತೆ ವ್ಯವಹರಿಸಲು ಶಾಲೆ ಅಥವಾ ಕಾಲೇಜಿಗೆ ತೆರಳಲು ಅವಕಾಶ ನೀಡಲಾಗಿದೆ. ಆದರೆ ಪೋಷಕರ ಪರ್ಮಿಶನ್ ಪಡೆದೇ ಶಾಲೆ, ಕಾಲೇಜಿಗೆ ತೆರಳುವಂತೆ ಸೂಚಿಸಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm