ಬ್ರೇಕಿಂಗ್ ನ್ಯೂಸ್
30-08-20 09:09 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 30: ಕೊರೊನಾ ಲಾಕ್ ಡೌನ್ ನಿಯಂತ್ರಣವನ್ನು ಹಂತ ಹಂತವಾಗಿ ಸಡಿಲಗೊಳಿಸುತ್ತಿರುವ ಕೇಂದ್ರ ಸರಕಾರ ಅನ್ ಲಾಕ್ 4.0 ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 7ರ ನಂತರ ದೇಶಾದ್ಯಂತ ಮೆಟ್ರೊ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಕೇಂದ್ರ, ಶಾಲೆ, ಕಾಲೇಜು ಸೆಪ್ಟೆಂಬರ್ 30ರ ವರೆಗೂ ತೆರೆಯಲು ಅನುಮತಿ ನೀಡಿಲ್ಲ.

ಸೆಪ್ಟೆಂಬರ್ 21ರ ಬಳಿಕ ಸಭೆ, ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸಿ ನೂರು ಜನರಿಗೆ ಸೀಮಿತ ಆಗಿರಬೇಕು. ಇದರಂತೆ ರಾಜಕೀಯ ಸಭೆಗಳು, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ಸಿಗಲಿದೆ. ಹಾಗೆಯೇ ಹವಾನಿಯಂತ್ರಣ ರಹಿತ ಸಿನಿಮಾ ಟಾಕೀಸ್ ತೆರೆಯುವುದಕ್ಕೂ ಅವಕಾಶ ನೀಡಲಾಗಿದೆ. ಇನ್ನು ಕಂಟೈನ್ಮೆಂಟ್ ಝೋನಲ್ಲಿ ನಿರ್ಬಂಧ ಯಥಾಸ್ಥಿತಿ ಮುಂದುವರಿಯಲಿದೆ. ಉಳಿದಂತೆ ಅಗತ್ಯ ಬಿದ್ದರೆ ಹೆಚ್ಚುವರಿ ಲಾಕ್ ಡೌನ್ ಹೇರುವುದಕ್ಕೆ ರಾಜ್ಯ ಸರಕಾರಗಳಿಗೆ ಅಧಿಕಾರ ನೀಡಲಾಗಿದೆ. ಅಲ್ಲದೆ, ಅಂತಾರಾಜ್ಯ ಸಂಚಾರವನ್ನು ಸಂಪೂರ್ಣ ಮುಕ್ತಗೊಳಿಸಲಾಗಿದೆ. ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಬಾರದು, ಜೊತೆಗೆ ಪ್ರತ್ಯೇಕವಾಗಿ ಇ- ಪಾಸ್ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.

ಇನ್ನು ಶಾಲೆ, ಕಾಲೇಜನ್ನು ಸೆಪ್ಟೆಂಬರ್ 30 ರ ವರೆಗೆ ತೆರೆಯುವಂತಿಲ್ಲ. ಅನ್ ಲೈನ್ ಕ್ಲಾಸ್ ನಡೆಸುವುದಿದ್ದರೆ ಶಿಕ್ಷಣ ಸಂಸ್ಥೆಗಳು 50 ಶೇ. ಸಿಬಂದಿಯನ್ನು ಕರೆಸಿಕೊಳ್ಳಬಹುದು. ಈ ಸೌಲಭ್ಯ ಕಂಟೈನ್ಮೆಂಟ್ ವಲಯದಿಂದ ಹೊರಗಿನ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರಲಿದೆ. ಇನ್ನು 9ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು ಬೋಧನೆ, ನೋಟ್ಸ್ ವಿಚಾರದಲ್ಲಿ ಶಿಕ್ಷಕರ ಜೊತೆ ವ್ಯವಹರಿಸಲು ಶಾಲೆ ಅಥವಾ ಕಾಲೇಜಿಗೆ ತೆರಳಲು ಅವಕಾಶ ನೀಡಲಾಗಿದೆ. ಆದರೆ ಪೋಷಕರ ಪರ್ಮಿಶನ್ ಪಡೆದೇ ಶಾಲೆ, ಕಾಲೇಜಿಗೆ ತೆರಳುವಂತೆ ಸೂಚಿಸಲಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm