ಬ್ರೇಕಿಂಗ್ ನ್ಯೂಸ್
10-06-21 08:29 pm Headline Karnataka News Network ದೇಶ - ವಿದೇಶ
ಲಕ್ನೋ, ಜೂ. 10: ''ಹುಡುಗಿಯರಿಗೆ ಮೊಬೈಲ್ ಫೋನ್ ನೀಡಬಾರದು, ಅದು ಅತ್ಯಾಚಾರಗಳಿಗೆ ಕಾರಣವಾಗುತ್ತದೆ'' ಎಂಬ ವಿವಾದಾತ್ಮಕ ಹೇಳಿಕೆಯನ್ನು ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯೆ ನೀಡಿದ್ದಾರೆ. ಅಲಿಗಢ ಜಿಲ್ಲೆಯ ಮಹಿಳೆಗೆ ಸಂಬಂಧಿಸಿದ ದೂರಿನ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ ಮೀನಾ ಕುಮಾರಿ ಈ ಹೇಳಿಕೆ ನೀಡಿದ್ದಾರೆ.
ಹುಡುಗಿಯರಿಗೆ ಮೊಬೈಲ್ ಫೋನ್ ನೀಡಬಾರದು. ಹುಡುಗಿಯರು ಹುಡುಗರೊಂದಿಗೆ ಗಂಟೆಗಟ್ಟಲೆ ಫೋನ್ಗಳಲ್ಲಿ ಮಾತನಾಡುತ್ತಾರೆ. ಬಳಿಕ ಹುಡುಗರೊಂದಿಗೆ ಓಡಿಹೋಗುತ್ತಾರೆ. ಹುಡುಗಿಯರ ಫೋನ್ಗಳನ್ನು ಕೂಡಾ ಈ ಪರಿಶೀಲನೆ ಮಾಡಲಾಗುತ್ತಿಲ್ಲ. ಕುಟುಂಬ ಸದಸ್ಯರಿಗೆ ಈ ವಿಚಾರದ ಅರಿವೇ ಇರುವುದಿಲ್ಲ" ಎಂದು ಯುಪಿ ಮಹಿಳಾ ಆಯೋಗದ ಸದದ್ಯೆ ಮೀನಾ ಕುಮಾರಿ ಹೇಳಿದ್ದಾರೆ.

ಮಹಿಳೆಯರ ಮೇಲಿನ ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ಸಮಾಜವೇ ಗಂಭೀರವಾಗಿರಬೇಕು. ಪೋಷಕರು, ವಿಶೇಷವಾಗಿ ತಾಯಂದಿರು ದೊಡ್ಡ ಜವಾಬ್ದಾರಿಯನ್ನು ಹೊಂದಿದ್ದಾರೆ. ತಾಯಂದಿರು ತಮ್ಮ ಹೆಣ್ಣುಮಕ್ಕಳ ಮೇಲೆ ನಿಗಾವಹಿಸಬೇಕು. ಈ ವಿಚಾರದಲ್ಲಿ ತಾಯಂದಿರಿಗೆ ದೊಡ್ಡ ಜವಾಬ್ದಾರಿ ಇದೆ. ತಾಯಂದಿರು ತಮ್ಮ ಹೆಣ್ಣುಮಕ್ಕಳ ಬಗ್ಗೆ ಅಸಡ್ಡೆ ಹೊಂದಿದ್ದರೆ, ಮುಂದಿನ ಪರಿಣಾಮಕ್ಕೆ ತಾಯಂದಿರೇ ಜವಾಬ್ದಾರರು" ಎಂದಿದ್ದಾರೆ.
ಆದರೆ ಈ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಆಯೋಗದ ಉಪಾಧ್ಯಕ್ಷೆ ಅಂಜು ಚೌಧರಿ, ''ಹೆಣ್ಣು ಮಕ್ಕಳಿಗೆ ಮೊಬೈಲ್ ಫೋನ್ ನೀಡದಿರುವುದು ಲೈಂಗಿಕ ದೌರ್ಜನ್ಯವನ್ನು ಕೊನೆಗೊಳಿಸಲು ಇರುವ ಉಪಾಯವಲ್ಲ, ಇದು ಪರಿಹಾರವೂ ಅಲ್ಲ'' ಎಂದು ಸ್ಪಷ್ಟಪಡಿಸಿದ್ದಾರೆ.
ಜನವರಿಯಲ್ಲಿ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಚಂದ್ರಮುಖಿ ದೇವಿ ಬಾದೌನ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ತಮ್ಮ ಅಭಿಪ್ರಾಯ ನೀಡುವ ಸಂದರ್ಭ ಈ ರೀತಿಯೇ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ''ಮಹಿಳೆಯರು ಸಂಜೆ ಹೊರಗೆ ಹೋಗದಿದ್ದರೆ ಈ ಘಟನೆಯನ್ನು ತಪ್ಪಿಸಬಹುದಿತ್ತು'' ಎಂದು ಕೂಡಾ ಹೇಳಿದ್ದರು. ಈ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಚಂದ್ರಮುಖಿ ದೇವಿ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದರು.
A member of Uttar Pradesh Women's Commission has said that girls should not be given mobile phones as it leads to rape. During a Mahila Jansunwai (public hearing of women-related complaints) in Aligarh on Wednesday, the member said, “Girls talk on phones and later run away with boys….”
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm