ಬ್ರೇಕಿಂಗ್ ನ್ಯೂಸ್
11-06-21 04:28 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಜೂನ್ 11: ಬಾಂಗ್ಲಾದೇಶ ಮೂಲಕ ಅಕ್ರಮವಾಗಿ ಭಾರತಕ್ಕೆ ನುಸುಳಲು ಯತ್ನಿಸಿದ್ದ ಚೀನಾ ಮೂಲದ ಶಂಕಿತ ಗೂಢಚರನನ್ನು ಗಡಿಭದ್ರತಾ ಪಡೆಯ ಯೋಧರು ಬಂಧಿಸಿದ್ದಾರೆ. ಚೈನಾದ ಹುಬೈ ಪ್ರಾಂತದ ನಿವಾಸಿ ಹ್ಯಾನ್ ಜೂನ್ (36) ಬಂಧಿತ ವ್ಯಕ್ತಿ.
ಚೀನಾ ಪರವಾಗಿ ಭಾರತದಲ್ಲಿ ಗೂಢಚಾರಿಕೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ ಬಿಎಸ್ಎಫ್ ಪಾಲಿಗೆ ದೊಡ್ಡ ಗೆಲುವು ಎಂದು ಗಡಿಭದ್ರತಾ ಪಡೆ ಹೇಳಿಕೊಂಡಿದೆ. ಈತ ಜೂನ್ 2ರಂದು ಬಾಂಗ್ಲಾದೇಶದ ರಾಜಧಾನಿ ಢಾಕಾಕ್ಕೆ ಬಂದಿದ್ದ. ಅಲ್ಲಿ ತನ್ನ ಸ್ನೇಹಿತನ ಮನೆಯಲ್ಲಿ ಉಳಿದುಕೊಂಡಿದ್ದ. ಬಳಿಕ ಪಶ್ಚಿಮ ಬಂಗಾಳದ ಗಡಿಜಿಲ್ಲೆ ಮಾಲ್ಡಾ ಮೂಲಕ ಭಾರತ ಪ್ರವೇಶ ಮಾಡುತ್ತಿದ್ದಾಗ ಗಡಿಭದ್ರತಾ ಪಡೆಯ ಕಣ್ಣಿಗೆ ಬಿದ್ದಿದ್ದು ವಿಚಾರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ಹ್ಯಾನ್ ಜೂನ್ ವಿಚಾರಣೆ ವೇಳೆ ಆತನ ಬಳಿ ನಿಗೂಢ ರೀತಿಯ ಇಲೆಕ್ಟ್ರಾನಿಕ್ ವಸ್ತುಗಳು ಪತ್ತೆಯಾಗಿವೆ. ಹೀಗಾಗಿ ಚೀನಾದ ವ್ಯಕ್ತಿ ಭಾರತದಲ್ಲಿದ್ದುಕೊಂಡು ಗೂಢಚಾರಿಕೆ ನಡೆಸುತ್ತಿದ್ದಾನೆಯೇ ಎನ್ನುವ ಅನುಮಾನ ಉಂಟಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ನಾಲ್ಕು ಬಾರಿ ಭಾರತಕ್ಕೆ ಬಂದಿದ್ದಾಗಿ ಹ್ಯಾನ್ ಜೂನ್ ಹೇಳಿದ್ದು, ಉತ್ತರ ಪ್ರದೇಶದ ಗುರ್ ಗ್ರಾಮ್ ನಲ್ಲಿ ಸ್ಟಾರ್ ಸ್ಪ್ರಿಂಗ್ ಎನ್ನುವ ಹೆಸರಿನ ಹೊಟೇಲ್ ನಡೆಸುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾನೆ. ಉತ್ತರ ಪ್ರದೇಶದಲ್ಲಿ ಈತನ ವಿರುದ್ಧ ಮೊಕದ್ದಮೆ ದಾಖಲಾಗಿದೆ.
ಬಾಂಗ್ಲಾ ಗಡಿಭಾಗ ಮಾಲಿಕ್ ಸುಲ್ತಾನ್ ಪುರ್ ಔಟ್ ಪೋಸ್ಟ್ ಮೂಲಕ ಕಾರಿನಲ್ಲಿ ಬಂದಿದ್ದ ಚೀನಾದ ವ್ಯಕ್ತಿಯನ್ನು ನಿಲ್ಲಿಸಿ ವಿಚಾರಣೆ ನಡೆಸಲು ಯತ್ನಿಸಿದಾಗ, ಕಾರಿನಲ್ಲಿ ಎಸ್ಕೇಪ್ ಆಗಿದ್ದಾನೆ. ಕೂಡಲೇ ಸ್ಥಳೀಯ ಪೊಲೀಸರು ಬೆನ್ನಟ್ಟಿ ಹಿಡಿದಿದ್ದು, ವಿಚಾರಣೆ ನಡೆಸಿದ್ದಾರೆ. ಪಾಸ್ಪೋರ್ಟ್ ಪರಿಶೀಲನೆ ನಡೆಸಿದಾಗ ಬಿಸಿನೆಸ್ ವೀಸಾದಲ್ಲಿ ಜೂನ್ 2ರಂದು ಢಾಕಾಕ್ಕೆ ಬಂದಿದ್ದು ಗೊತ್ತಾಗಿದೆ.
ಪರಿಶೀಲನೆ ವೇಳೆ ನಾಲ್ಕು ಬಾರಿ ಭಾರತಕ್ಕೆ ಬಂದಿದ್ದು ಗೊತ್ತಾಗಿದ್ದು, ದೆಹಲಿ, ಗುರುಗ್ರಾಮ್, ಹೈದರಾಬಾದ್ ನಲ್ಲಿ ಇದ್ದುದು ತಿಳಿದುಬಂದಿದೆ. ಕೆಲವು ದಿನಗಳ ಹಿಂದೆ ಹ್ಯಾನ್ ಜೂನ್ ಜೊತೆಗೆ ಪಾರ್ಟ್ನರ್ ಆಗಿದ್ದ ಸೂನ್ ಜಿಯಾಂಗ್, ಎಟಿಎಸ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ. ಆತನ ಜೊತೆಗೆ ನಿಕಟ ನೆಟ್ವರ್ಕ್ ಹೊಂದಿದ್ದ ಕಾರಣ ಹ್ಯಾನ್ ಜೂನ್ ಹೆಸರನ್ನು ಪೊಲೀಸರಿಗೆ ತಿಳಿಸಿದ್ದ. ಇದೇ ಕಾರಣದಿಂದ ಚೀನಾದಲ್ಲಿದ್ದ ಹ್ಯಾನ್ ಜೂನ್ ಭಾರತಕ್ಕೆ ಮರಳಲು ಪಾಸ್ಪೋರ್ಟ್ ಸಿಕ್ಕಿರಲಿಲ್ಲ. ಇದರಿಂದಾಗಿ ಬಾಂಗ್ಲಾದೇಶದ ಢಾಕಾಕ್ಕೆ ಬಂದು ಭಾರತಕ್ಕೆ ಒಳನುಸುಳಿದ್ದ ಅನ್ನುವುದು ತನಿಖೆಯಲ್ಲಿ ತಿಳಿದುಬಂದಿದೆ.
The Border Security Force nabbed a Chinese intruder attempting to enter India through the Bangladesh border, who has been identified as a wanted criminal
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm