ಬ್ರೇಕಿಂಗ್ ನ್ಯೂಸ್
13-06-21 01:44 pm Headline Karnataka News Network ದೇಶ - ವಿದೇಶ
ಪ್ರತಾಪಗಢ, ಜೂನ್ 13: ಕೊರೊನಾ ಮಹಾಮಾರಿ ಇಡೀ ಜಗತ್ತಿಗೆ ಹೆಮ್ಮಾರಿಯಾಗಿ ಪರಿಣಮಿಸಿದ್ದರೆ, ಇಲ್ಲೊಂದು ಗ್ರಾಮದಲ್ಲಿ ಗ್ರಾಮಸ್ಥರೇ ಸೇರಿ ಕೊರೊನಾ ಮಾತೆಯ ಹೆಸರಲ್ಲಿ ಗುಡಿ ಕಟ್ಟಿ ಸುದ್ದಿಯಾಗಿದ್ದಾರೆ.
ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ಜೂಹಿ ಶುಕಲ್ಪುರ್ ಗ್ರಾಮದಲ್ಲಿ ಗ್ರಾಮಸ್ಥರು ಸೇರಿ ಕೊರೊನಾ ಮಾತೆಗೆ ಗುಡಿ ಕಟ್ಟಿದ್ದಾರೆ. ಲೋಕೇಶ್ ಕುಮಾರ್ ಶ್ರೀವಾಸ್ತವ ಎಂಬಾತ ಗ್ರಾಮಸ್ಥರ ಸಹಕಾರದಲ್ಲಿ ಗುಡಿ ಕಟ್ಟಿದ್ದಾನೆ. ಕೊರೊನಾ ಮಾತೆಯ ಹೆಸರಲ್ಲಿ ವಿಗ್ರಹವನ್ನೂ ಸ್ಥಾಪನೆ ಮಾಡಿದ್ದ. ಗ್ರಾಮದ ನಿವಾಸಿ ರಾಧೇಶ್ಯಾಮ್ ವರ್ಮ ಎಂಬ ಅರ್ಚಕನನ್ನು ಕೊರೊನಾ ದೇವಿಯ ಪೂಜೆಗೆ ನೇಮಕ ಮಾಡಲಾಗಿತ್ತು. ಸ್ಥಳೀಯ ಜನರು ಕೊರೊನಾ ದೇವಿಯನ್ನು ಪೂಜಿಸಿ, ಜಗತ್ತಿಗೆ ಕವಿದ ಕತ್ತಲೆಯನ್ನು ನೀಗಿಸು ಎಂದು ಪ್ರಾರ್ಥಿಸಲು ತೊಡಗಿದ್ದರು.

ಆದರೆ, ಗುಡಿ ಕಟ್ಟಿ ನಾಲ್ಕು ದಿನಗಳಾಗುವಷ್ಟರಲ್ಲಿ ಜಾಗದ ವಾರೀಸುದಾರರು ತಕರಾರು ತೆಗೆದಿದ್ದಾರೆ. ಆ ಜಾಗ ನಾಗೇಶ್ ಕುಮಾರ್ ಶ್ರೀವಾಸ್ತವ ಮತ್ತು ಜೈ ಪ್ರಕಾಶ್ ಶ್ರೀವಾಸ್ತವ ಎಂಬವರಿಗೆ ಸೇರಿದ್ದೆಂದು ಅವರು ಪೊಲೀಸ್ ದೂರು ನೀಡಿದ್ದಾರೆ. ಇಷ್ಟಾಗುತ್ತಿದ್ದಂತೆ ಗುಡಿ ಕಟ್ಟಲು ಮುಂಚೂಣಿಯಲ್ಲಿ ನಿಂತಿದ್ದ ಲೋಕೇಶ್ ಕುಮಾರ್ ನಾಪತ್ತೆಯಾಗಿದ್ದಾನೆ. ಲೋಕೇಶ್ ಇದೇ ಊರಿನ ವ್ಯಕ್ತಿಯಾಗಿದ್ದರೂ, ದೆಹಲಿ ಸಮೀಪದ ನೋಯ್ಡಾದಲ್ಲಿ ನೆಲೆಸಿದ್ದ.
ತಮ್ಮ ಜಾಗವನ್ನು ಕಬಳಿಸಲು ಗುಡಿ ಕಟ್ಟಲಾಗಿದೆ ಎಂದು ನಾಗೇಶ್ ಮತ್ತು ಸೋದರ ಪೊಲೀಸರಿಗೆ ದೂರು ನೀಡಿದ್ದರು. ವಿವಾದಿತ ಜಾಗದಲ್ಲಿ ಗುಡಿ ಕಟ್ಟಲಾಗಿತ್ತು. ಗುಡಿ ನಿರ್ಮಾಣದಲ್ಲಿ ಈ ಜಾಗಕ್ಕೆ ಸೇರಿದ ವ್ಯಕ್ತಿಗಳು ಕೂಡ ಶಾಮೀಲಾಗಿದ್ದಾರೆ. ಗುಡಿಯ ಅಕ್ರಮ ನಿರ್ಮಾಣದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಸಂಗೀಪುರ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಆದರೆ, ಅತ್ತ ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ಮತ್ತೊಂದು ಗುಂಪು ಕೊರೊನಾ ದೇವಿಯ ಗುಡಿಯನ್ನು ಒಡೆದು ಹಾಕಿದೆ.
People at Juhi Shukulpur village here built a "corona mata" temple, seeking divine grace to stay clear of the infection. However, the temple built on June 7 was demolished on Friday night.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm