ಬ್ರೇಕಿಂಗ್ ನ್ಯೂಸ್
31-08-20 10:46 am Headline Karnataka News Network ದೇಶ - ವಿದೇಶ
ಮುಂಬೈ, ಆಗಸ್ಟ್ 31: ಗಾಯನ ಲೋಕದ ಲಿವಿಂಗ್ ಲೆಜೆಂಡ್ ಲತಾ ಮಂಗೇಶ್ಕರ್ ವಾಸ ಇರುವ ಪ್ರಭುಕುಂಜ್ ಅಪಾರ್ಟ್ಮೆಂಟ್ ಅನ್ನು ಮುಂಬೈ ಮಹಾನಗರ ಪಾಲಿಕೆ ಸೀಲ್ ಡೌನ್ ಮಾಡಿದೆ. ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಇದೇ ವೇಳೆ ಲತಾ ಮಂಗೇಶ್ಕರ್ ಕುಟುಂಬದಿಂದ ಪತ್ರಿಕಾ ಹೇಳಿಕೆ ನೀಡಲಾಗಿದ್ದು ಮಂಗೇಶ್ಕರ್ ಕುಟುಂಬಕ್ಕೇನೂ ತೊಂದರೆಯಾಗಿಲ್ಲ. ಸುರಕ್ಷಿತರಾಗಿದ್ದೇವೆ. ನಮ್ಮ ಕುಟುಂಬಸ್ಥರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಮಾಹಿತಿಗಳನ್ನು ಹರಿಯ ಬಿಡಬೇಡಿ. ನಮ್ಮ ಬಿಲ್ಡಿಂಗ್ ಸೊಸೈಟಿಯವರು ಇಲ್ಲಿ ವಾಸ ಮಾಡುವ ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದಾರೆ. ಅದರಲ್ಲೂ ಹಿರಿಯ ಜೀವಗಳ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ. ದೇವರ ದಯೆ ಮತ್ತು ಅಭಿಮಾನಿಗಳ ಹಾರೈಕೆಯಿಂದ ಮಂಗೇಶ್ಕರ್ ಕುಟುಂಬ ಕ್ಷೇಮವಾಗಿದೆ ಎಂದು ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ. ವೈರಸ್ ಹರಡದಂತಿರಲು ಇಂಥ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ನಾವು ಗಣೇಶನ ಹಬ್ಬವನ್ನೂ ಅತ್ಯಂತ ಸರಳವಾಗಿ ಆಚರಿಸಿದ್ದೇವೆ ಎಂದು ಲತಾ ಮಂಗೇಶ್ಕರ್ ಕುಟುಂಬ ಹೇಳಿಕೊಂಡಿದೆ.
ಕಳೆದ ಜುಲೈನಲ್ಲಿ ಅಮಿತಾಭ್ ಬಚ್ಚನ್ ಕುಟುಂಬಕ್ಕೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಬಚ್ಚನ್ ಕುಟುಂಬಕ್ಕೆ ಸೇರಿದ ಬಂಗಲೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಆ ಬಳಿಕ ಹಿರಿಯ ನಟಿ ರೇಖಾ ವಾಸ ಇರುವ ಬಂಗಲೆಯ ಸೆಕ್ಯುರಿಟಿ ಗಾರ್ಡ್ ಗೆ ಸೋಂಕು ಬಂದಿದ್ದರಿಂದ ಬಂಗಲೆ ಸೀಲ್ ಆಗಿತ್ತು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm