ಬ್ರೇಕಿಂಗ್ ನ್ಯೂಸ್
31-08-20 10:46 am Headline Karnataka News Network ದೇಶ - ವಿದೇಶ
ಮುಂಬೈ, ಆಗಸ್ಟ್ 31: ಗಾಯನ ಲೋಕದ ಲಿವಿಂಗ್ ಲೆಜೆಂಡ್ ಲತಾ ಮಂಗೇಶ್ಕರ್ ವಾಸ ಇರುವ ಪ್ರಭುಕುಂಜ್ ಅಪಾರ್ಟ್ಮೆಂಟ್ ಅನ್ನು ಮುಂಬೈ ಮಹಾನಗರ ಪಾಲಿಕೆ ಸೀಲ್ ಡೌನ್ ಮಾಡಿದೆ. ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಇದೇ ವೇಳೆ ಲತಾ ಮಂಗೇಶ್ಕರ್ ಕುಟುಂಬದಿಂದ ಪತ್ರಿಕಾ ಹೇಳಿಕೆ ನೀಡಲಾಗಿದ್ದು ಮಂಗೇಶ್ಕರ್ ಕುಟುಂಬಕ್ಕೇನೂ ತೊಂದರೆಯಾಗಿಲ್ಲ. ಸುರಕ್ಷಿತರಾಗಿದ್ದೇವೆ. ನಮ್ಮ ಕುಟುಂಬಸ್ಥರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಮಾಹಿತಿಗಳನ್ನು ಹರಿಯ ಬಿಡಬೇಡಿ. ನಮ್ಮ ಬಿಲ್ಡಿಂಗ್ ಸೊಸೈಟಿಯವರು ಇಲ್ಲಿ ವಾಸ ಮಾಡುವ ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದಾರೆ. ಅದರಲ್ಲೂ ಹಿರಿಯ ಜೀವಗಳ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ. ದೇವರ ದಯೆ ಮತ್ತು ಅಭಿಮಾನಿಗಳ ಹಾರೈಕೆಯಿಂದ ಮಂಗೇಶ್ಕರ್ ಕುಟುಂಬ ಕ್ಷೇಮವಾಗಿದೆ ಎಂದು ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ. ವೈರಸ್ ಹರಡದಂತಿರಲು ಇಂಥ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ನಾವು ಗಣೇಶನ ಹಬ್ಬವನ್ನೂ ಅತ್ಯಂತ ಸರಳವಾಗಿ ಆಚರಿಸಿದ್ದೇವೆ ಎಂದು ಲತಾ ಮಂಗೇಶ್ಕರ್ ಕುಟುಂಬ ಹೇಳಿಕೊಂಡಿದೆ.
ಕಳೆದ ಜುಲೈನಲ್ಲಿ ಅಮಿತಾಭ್ ಬಚ್ಚನ್ ಕುಟುಂಬಕ್ಕೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಬಚ್ಚನ್ ಕುಟುಂಬಕ್ಕೆ ಸೇರಿದ ಬಂಗಲೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಆ ಬಳಿಕ ಹಿರಿಯ ನಟಿ ರೇಖಾ ವಾಸ ಇರುವ ಬಂಗಲೆಯ ಸೆಕ್ಯುರಿಟಿ ಗಾರ್ಡ್ ಗೆ ಸೋಂಕು ಬಂದಿದ್ದರಿಂದ ಬಂಗಲೆ ಸೀಲ್ ಆಗಿತ್ತು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am