ಬ್ರೇಕಿಂಗ್ ನ್ಯೂಸ್
15-06-21 04:14 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 15: ಕಳೆದ ವರ್ಷ ಚೀನಾ ಜೊತೆಗಿನ ಗಡಿ ಸಂಘರ್ಷಕ್ಕೆ ಕಾರಣವಾಗಿದ್ದ ಗ್ಯಾಲ್ವಾನ್ ಕಣಿವೆಯ ಘರ್ಷಣೆ ಮತ್ತು ದುರಂತದ ಸನ್ನಿವೇಶ ನಡೆದು ಇಂದಿಗೆ ಒಂದು ವರ್ಷ ಪೂರ್ತಿಯಾಗಿದೆ. ಚೀನಾ ಮತ್ತು ಭಾರತದ ಸೇನಾ ಯೋಧರ ನಡುವಿನ ಘರ್ಷಣೆಯಲ್ಲಿ ಕರ್ನಲ್ ಸಂತೋಷ್ ಬಾಬು ಸೇರಿ 20 ಮಂದಿ ಭಾರತೀಯ ಯೋಧರು ಪ್ರಾಣ ಕಳಕೊಂಡಿದ್ದರು.
ಗ್ಯಾಲ್ವಾನ್ ಕಣಿವೆಯ ಘರ್ಷಣೆಯಲ್ಲಿ ಭಾರತೀಯ ಯೋಧರು ಪ್ರಾಣ ಕಳಕೊಂಡಿದ್ದು ದೇಶಾದ್ಯಂತ ಚೀನಾ ವಿರುದ್ಧ ಆಕ್ರೋಶದ ಜ್ವಾಲೆ ಎದ್ದಿತ್ತು. ಚೀನಾ ವಿರುದ್ಧ ಯುದ್ಧ ಸಾರುವಂತೆಯೂ ಒತ್ತಡಗಳು ಕೇಳಿಬಂದಿದ್ದವು. ಆನಂತರ ತಿಂಗಳ ಕಾಲ ಚೀನಾ ಗಡಿಯುದ್ದಕ್ಕೂ ಯುದ್ಧ ಸನ್ನಿವೇಶ ಏರ್ಪಟ್ಟು ಲಡಾಖ್ ಪ್ರಾಂತದಲ್ಲಿ 50 ಸಾವಿರಕ್ಕೂ ಹೆಚ್ಚು ಯೋಧರನ್ನು ನಿಯೋಜನೆ ಮಾಡಲಾಗಿತ್ತು. ಆನಂತರ ಚೀನಾ ಮತ್ತು ಭಾರತದ ಸೇನಾಧಿಕಾರಿಗಳ ಮಟ್ಟದಲ್ಲಿ ಹನ್ನೊಂದು ಬಾರಿ ನಡೆದ ಮಾತುಕತೆಯ ಬಳಿಕ ಸಂಘರ್ಷದ ವಾತಾವರಣಕ್ಕೆ ತೆರೆ ಬಿದ್ದಿತ್ತು.




ಏನಾಗಿತ್ತು ಗ್ಯಾಲ್ವಾನ್ ಕಣಿವೆಯ ಸಂಘರ್ಷ ?
ಅಂದು ಎಂದಿನಂತೆ ವಾಸ್ತವ ನಿಯಂತ್ರಣ ರೇಖೆಯ ಉದ್ದಕ್ಕೂ ಯೋಧರು ಗಸ್ತು ನಿರತರಾಗಿದ್ದರು. ಭಾರತೀಯ ಯೋಧರು ಗಡಿಯಲ್ಲಿ ಗಸ್ತಿನಲ್ಲಿದ್ದಾಗ ಚೀನಾ ಯೋಧರು ಜಟಾಪಟಿಗೆ ಮುಂದಾಗಿದ್ದು ರಾತ್ರೋರಾತ್ರಿ ಆರು ಗಂಟೆಗಳ ಕಾಲ ಕಾದಾಟ ನಡೆಸಿದ್ದಾರೆ. ಆದರೆ, ನಿರಾಯುಧರಾಗಿ ಕಲ್ಲು , ಕಬ್ಬಿಣದ ರಾಡ್ ಗಳಿಂದಲೇ ಹಲ್ಲೆ, ಪ್ರತಿ ದಾಳಿಯ ಸಂಘರ್ಷ ನಡೆದಿದ್ದು, ಭಾರತದ ಕರ್ನಲ್ ಸಂತೋಷ್ ಬಾಬು ಸೇರಿ 20 ಮಂದಿ ಯೋಧರನ್ನು ಹಿಮದಂತೆ ಶೀತಲವಾಗಿದ್ದ ನದಿಗೆ ನೂಕಿ ಕ್ರೌರ್ಯ ಮೆರೆದಿದ್ದಾರೆ. ನೂರಕ್ಕೂ ಹೆಚ್ಚು ಮಂದಿ ಯೋಧರು ಚೀನಾ ಯೋಧರ ಜೊತೆ ಸಂಘರ್ಷದಲ್ಲಿ ತೊಡಗಿದ್ದರು.





ಭಾರತದ ಕಡೆಯಿಂದ ಪ್ರಮುಖವಾಗಿ 16ನೇ ಬಿಹಾರ ರೆಜಿಮೆಂಟಿನ ಯೋಧರು ಅಲ್ಲಿ ಗಸ್ತಿನಲ್ಲಿದ್ದರು. ರೆಜಿಮೆಂಟಿನ ಕಮಾಂಡಿಂಗ್ ಆಫೀಸರ್ ಆಗಿದ್ದ ಸಂತೋಷ್ ಬಾಬು ಸೇರಿ 20 ಮಂದಿ ದುರಂತದಲ್ಲಿ ಸಾವು ಕಂಡಿದ್ದರು. ಚೀನಾ ಕಡೆಯಲ್ಲಿ 43 ಯೋಧರು ಇದೇ ಸಂಘರ್ಷದಲ್ಲಿ ಸಾವನ್ನಪ್ಪಿದ್ದರು ಅನ್ನುವ ಮಾಹಿತಿಯನ್ನು ಭಾರತದ ಸೇನೆ ಹೇಳಿತ್ತು. ಆದರೆ, ಭಾರತೀಯ ಯೋಧರ ಮಾಹಿತಿಯನ್ನು ಚೀನಾ ನಿರಾಕರಿಸಿತ್ತು. ಕೇವಲ ನಾಲ್ಕು ಮಂದಿ ಯೋಧರು ಸಾವನ್ನಪ್ಪಿದ್ದಾಗಿ ಹೇಳಿ ವಾಸ್ತವ ಮರೆಮಾಚಿತ್ತು.
ಕಲ್ಲು, ಭರ್ಚಿಯನ್ನೊಳಗೊಂಡ ಮುಷ್ಟಿ ಕಾಳಗ ಚೀನಾ ಮತ್ತು ಭಾರತದ ಯೋಧರ ತಾಕತ್ತನ್ನು ಹಿಮಶಿಖರಗಳ ನಡುವೆ ಒರೆಗೆ ಹಚ್ಚಿತ್ತು. ಭಾರತೀಯ ಯೋಧರು ನಿರಾಯುಧರಾಗಿದ್ದಾಗ ಉದ್ದೇಶಪೂರ್ವಕವಾಗಿ ಈ ರೀತಿಯ ಹಲ್ಲೆ ನಡೆಸಲಾಗಿತ್ತು ಎನ್ನುವ ಆರೋಪ ಸೇನೆಯಿಂದ ಕೇಳಿಬಂದಿದ್ದರಿಂದ ಭಾರತ ಸರಕಾರ ಚೀನಾ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಚೀನಾ ಜೊತೆಗೆ ವ್ಯಾಪಾರ ಸಂಬಂಧ ಮುಂದುವರಿಸಬಾರದು, ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕೆಂಬ ಒತ್ತಾಯ ದೇಶಾದ್ಯಂತ ಮೊಳಗಿತ್ತು. ಇದರ ಮೊದಲ ಹೆಜ್ಜೆಯಾಗಿ ಚೀನಾ ಮೂಲದ ವಿವಿಧ ಮಾದರಿಯ ವಿಡಿಯೋ ಗೇಮ್ಸ್ ಏಪ್ಸ್ ಸೇರಿ 100ಕ್ಕೂ ಮಿಕ್ಕಿದ ಕಂಪನಿಗಳ ಉತ್ಪನ್ನಗಳಿಗೆ ಭಾರತ ನಿಷೇಧ ಹೇರಿತ್ತು.
One year since #Galwan!
— Capt Brijesh Chowta | ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) June 15, 2021
One year since we saw our 20 brothers hold fort for our country against Chinese aggression and attain sadgati.
The nation is indebted to you brothers. Jai Hind !#GalwanHeroes pic.twitter.com/b2mmQhUodg
June 15 marks one year of the deadly Galwan Valley clash in eastern Ladakh which resulted in the death of 20 Indian soldiers, including Commanding Officer Colonel Santosh Babu, and an unspecified number of Chinese troops.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm