ಬ್ರೇಕಿಂಗ್ ನ್ಯೂಸ್
16-06-21 12:37 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 16: ಎರಡು ವರ್ಷಗಳ ಬಳಿಕ ಕೇಂದ್ರ ಸಂಪುಟ ವಿಸ್ತರಣೆ ಪಕ್ಕಾ ಆಗಿದೆ. ಇದಕ್ಕಾಗಿ ಕಳೆದ ಐದು ದಿನಗಳಿಂದಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಕೇಂದ್ರದ ಸಂಪುಟ ಸಚಿವರು ಹಾಗೂ ಬಿಜೆಪಿ ವರಿಷ್ಠರೊಂದಿಗೆ ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದ್ದಾರೆ.
ಈಗಾಗ್ಲೇ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳ ಬಿಜೆಪಿ ಸಂಸದರೊಂದಿಗೆ ಅಮಿತ್ ಷಾ ಸಭೆ ನಡೆಸಿದ್ದಾರೆ. ಸುಮಾರು 30 ಸಂಸದರು ಸಭೆಯಲ್ಲಿ ಪಾಲ್ಗೊಂಡಿದ್ದರೆಂದು ತಿಳಿದುಬಂದಿದೆ. ಪ್ರಸ್ತುತ ಕೇಂದ್ರ ಸಂಪುಟದಲ್ಲಿ 28 ಸ್ಥಾನಗಳು ಖಾಲಿ ಇದ್ದು, ಸಂಸದರು ತಮ್ಮ ಕ್ಷೇತ್ರಗಳಲ್ಲಿ ಕೋವಿಡ್ ನಿರ್ವಹಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಲ್ಲಿ ತೋರಿದ ದಕ್ಷತೆ ಆಧರಿಸಿ ಅಂಕಗಳನ್ನು ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಕಳೆದ ಎರಡು ವರ್ಷಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ರಾಜ್ಯಗಳಿಂದ ಕೇಂದ್ರ ಸಂಪುಟದಲ್ಲಿ ಪ್ರಾತಿನಿಧ್ಯಕ್ಕೆ ಒತ್ತಡ ಹೆಚ್ಚಿದ್ದರಿಂದ ಸಂಪುಟ ವಿಸ್ತರಣೆಗೆ ಮೋದಿ ಕೈ ಹಾಕಿದ್ದಾರೆ ಎಂದು ಹೇಳಲಾಗಿದೆ. ಬಿಹಾರ ಸಿಎಂ ನಿತೀಶ್ ನೇತೃತ್ವದ ಜೆಡಿಯು ಕೇಂದ್ರ ಸಂಪುಟದಲ್ಲಿ ಸ್ಥಾನಕ್ಕಾಗಿ ಮೊದಲಿನಿಂದಲೂ ಬೇಡಿಕೆ ಇಟ್ಟಿದೆ.


ಎಲ್ಜೆಪಿ ಪಕ್ಷದಿಂದಲೂ ಕೇಂದ್ರ ಸಂಪುಟ ಸೇರಲು ಬೇಡಿಕೆಯಿದೆ. ಇತ್ತ ಮಧ್ಯಪ್ರದೇಶದಲ್ಲಿ ಬೆಂಬಲಿಗರೊಂದಿಗೆ ಬಿಜೆಪಿಗೆ ಜಿಗಿದ ಜ್ಯೋತಿರಾದಿತ್ಯ ಸಿಂಧಿಯಾಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ಗೂ ಸಂಪುಟ ಸ್ಥಾನ ಸಿಗುವ ಸಾಧ್ಯತೆಯಿದೆ. ಈ ಮಧ್ಯೆ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸಂಪುಟದ ಪುನಾರಚನೆಗೂ ಭಾರಿ ಲೆಕ್ಕಾಚಾರಗಳು ನಡೆಯುತ್ತಿವೆ. ಇತ್ತೀಚೆಗೆ ಪ್ರಧಾನಿ ಮೋದಿ ಜತೆ ಸಿಎಂ ಆದಿತ್ಯನಾಥ್ ಖುದ್ದು ಭೇಟಿ ಬಳಿಕ ಈ ಪ್ರಕ್ರಿಯೆ ಮತ್ತಷ್ಟು ವೇಗ ಪಡೆದಿದೆ.
Amit Shah had met MPs from Uttar Pradesh, Maharashtra, Rajasthan, Gujarat, and some other states on Saturday and Sunday at his residence.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm