ಬ್ರೇಕಿಂಗ್ ನ್ಯೂಸ್
31-08-20 12:36 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಆಗಸ್ಟ್ 31: ಜನಸಂಖ್ಯೆಯಲ್ಲಿ ವಿಶ್ವದಲ್ಲೇ ಎರಡೇ ಸ್ಥಾನದಲ್ಲಿರುವ ಭಾರತದಲ್ಲಿ ಕೊರೋನಾ ಸೋಂಕು ದಾಖಲೆಯ ಪ್ರಮಾಣದಲ್ಲಿ ಏರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ 80 ಸಾವಿರಕ್ಕೂ ಅಧಿಕ ಕೋವಿಡ್-19 ಪ್ರಕರಣಗಳು ರವಿವಾರ ವರದಿಯಾಗಿದ್ದು, ವಿಶ್ವದ ಯಾವುದೇ ದೇಶದಲ್ಲೂ ಒಂದೇ ದಿನ ಕೊರೊನದ ಇಷ್ಟೊಂದು ಪ್ರಕರಣಗಳು ಪತ್ತೆಯಾದ ನಿದರ್ಶನ ಇಲ್ಲ.
ಅಲ್ಪ ಇಳಿಕೆಯ ಬಳಿಕ ಪ್ರಗತಿ ದರ ಹಾಗೂ ಸೋಂಕಿತರ ಪೈಕಿ ಸಾವಿಗೀಡಾದವರ ದರ ಹೆಚ್ಚಿದೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ದರ ದುಪ್ಪಟ್ಟಾಗಿದೆ. ಶನಿವಾರ ದೇಶಾದ್ಯಂತ 80,0092 ಪ್ರಕರಣಗಳು ದೃಢಪಟ್ಟಿದ್ದು, ವಾರಾಂತ್ಯದಲ್ಲಿ ಕಡಿಮೆ ತಪಾಸಣೆ ನಡೆಯುವ ಹಿನ್ನೆಲೆಯಲ್ಲಿ ಕಡಿಮೆ ಪ್ರಕರಣಗಳು ವರದಿಯಾಗುತ್ತಿದ್ದವು. ಇದುವರೆಗೆ ವಾರಾಂತ್ಯದಲ್ಲಿ ಗರಿಷ್ಠ ಅಂದರೆ 63,851 ಪ್ರಕರಣಗಳು ಆಗಸ್ಟ್ 9ರಂದು ವರದಿಯಾಗಿದ್ದವು.

ಆತಂಕಕಾರಿ ವಿಚಾರವೆಂದರೆ ತಿಂಗಳ ಮೊದಲ ವಾರಗಳಲ್ಲಿ ಹೊಸ ಪ್ರಕರಣಗಳು ಹಾಗೂ ಪ್ರಗತಿ ದರ ಇಳಿಕೆ ಕಂಡುಬಂದಿದ್ದರೂ, ಕೊನೆಯ ವಾರ ಏರಿಕೆಯಾಗಿದೆ. ದೇಶದಲ್ಲಿ ಸತತ ಐದು ದಿನಗಳಿಂದ 76 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿದ್ದು, ವಾರದಲ್ಲಿ ಪ್ರಗತಿ ದರ 13.1% ಇದೆ. ಹಿಂದಿನ ವಾರ ದಾಖಲಾಗಿದ್ದ 4.7%ಕ್ಕೆ ಹೋಲಿಸಿದರೆ ಇದು ಮೂರು ಪಟ್ಟು. ಅದಕ್ಕಿಂತ ಹಿಂದಿನ ವಾರ 5.9% ಹಾಗೂ ಆಗಸ್ಟ್ ಮೊದಲ ವಾರ 10.9% ಪ್ರಗತಿದರ ದಾಖಲಾಗಿತ್ತು. ಅಂತೆಯೇ ಸತತ ನಾಲ್ಕನೇ ದಿನ ಸಾವಿರಕ್ಕೂ ಅಧಿಕ ಸಾವು ಸಂಭವಿಸಿದೆ. ಈ ವಾರ ಸಾವಿನ ಏರಿಕೆ ದರ ಶೇಕಡ 3.9ರಷ್ಟಿದ್ದು, ಹಿಂದಿನ ವಾರ ದಾಖಲಾದ ಶೇಕಡ 1.7ಕ್ಕೆ ಹೋಲಿಸಿದರೆ ಇದು ದ್ವಿಗುಣಗೊಂಡಿದೆ.
ಮಹಾರಾಷ್ಟ್ರ ಸತತ ಎರಡನೇ ದಿನ 16 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ಕಂಡಿದೆ. 16,408 ಮಂದಿಗೆ ಶನಿವಾರ ಸೋಂಕು ದೃಢಪಟ್ಟಿದ್ದು, ಉಳಿದಂತೆ ಉತ್ತರ ಪ್ರದೇಶ (6,233), ರಾಜಸ್ಥಾನ (1,450), ಮಧ್ಯಪ್ರದೇಶ (1,558), ಛತ್ತೀಸ್ಗಢ (1,471) ಮತ್ತು ಜಮ್ಮು ಮತ್ತು ಕಾಶ್ಮೀರ (786) ಹೀಗೆ ಐದು ರಾಜ್ಯಗಳು ಶನಿವಾರ ಇದುವರೆಗಿನ ಗರಿಷ್ಠ ಪ್ರಕರಣಗಳನ್ನು ದಾಖಲಿಸಿವೆ. ದೇಶದಲ್ಲಿ ರವಿವಾರ 970 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಬಲಿಯಾದವರ ಸಂಖ್ಯೆ 64,550ಕ್ಕೇರಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm