ಬ್ರೇಕಿಂಗ್ ನ್ಯೂಸ್
31-08-20 12:36 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಆಗಸ್ಟ್ 31: ಜನಸಂಖ್ಯೆಯಲ್ಲಿ ವಿಶ್ವದಲ್ಲೇ ಎರಡೇ ಸ್ಥಾನದಲ್ಲಿರುವ ಭಾರತದಲ್ಲಿ ಕೊರೋನಾ ಸೋಂಕು ದಾಖಲೆಯ ಪ್ರಮಾಣದಲ್ಲಿ ಏರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ 80 ಸಾವಿರಕ್ಕೂ ಅಧಿಕ ಕೋವಿಡ್-19 ಪ್ರಕರಣಗಳು ರವಿವಾರ ವರದಿಯಾಗಿದ್ದು, ವಿಶ್ವದ ಯಾವುದೇ ದೇಶದಲ್ಲೂ ಒಂದೇ ದಿನ ಕೊರೊನದ ಇಷ್ಟೊಂದು ಪ್ರಕರಣಗಳು ಪತ್ತೆಯಾದ ನಿದರ್ಶನ ಇಲ್ಲ.
ಅಲ್ಪ ಇಳಿಕೆಯ ಬಳಿಕ ಪ್ರಗತಿ ದರ ಹಾಗೂ ಸೋಂಕಿತರ ಪೈಕಿ ಸಾವಿಗೀಡಾದವರ ದರ ಹೆಚ್ಚಿದೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ದರ ದುಪ್ಪಟ್ಟಾಗಿದೆ. ಶನಿವಾರ ದೇಶಾದ್ಯಂತ 80,0092 ಪ್ರಕರಣಗಳು ದೃಢಪಟ್ಟಿದ್ದು, ವಾರಾಂತ್ಯದಲ್ಲಿ ಕಡಿಮೆ ತಪಾಸಣೆ ನಡೆಯುವ ಹಿನ್ನೆಲೆಯಲ್ಲಿ ಕಡಿಮೆ ಪ್ರಕರಣಗಳು ವರದಿಯಾಗುತ್ತಿದ್ದವು. ಇದುವರೆಗೆ ವಾರಾಂತ್ಯದಲ್ಲಿ ಗರಿಷ್ಠ ಅಂದರೆ 63,851 ಪ್ರಕರಣಗಳು ಆಗಸ್ಟ್ 9ರಂದು ವರದಿಯಾಗಿದ್ದವು.

ಆತಂಕಕಾರಿ ವಿಚಾರವೆಂದರೆ ತಿಂಗಳ ಮೊದಲ ವಾರಗಳಲ್ಲಿ ಹೊಸ ಪ್ರಕರಣಗಳು ಹಾಗೂ ಪ್ರಗತಿ ದರ ಇಳಿಕೆ ಕಂಡುಬಂದಿದ್ದರೂ, ಕೊನೆಯ ವಾರ ಏರಿಕೆಯಾಗಿದೆ. ದೇಶದಲ್ಲಿ ಸತತ ಐದು ದಿನಗಳಿಂದ 76 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿದ್ದು, ವಾರದಲ್ಲಿ ಪ್ರಗತಿ ದರ 13.1% ಇದೆ. ಹಿಂದಿನ ವಾರ ದಾಖಲಾಗಿದ್ದ 4.7%ಕ್ಕೆ ಹೋಲಿಸಿದರೆ ಇದು ಮೂರು ಪಟ್ಟು. ಅದಕ್ಕಿಂತ ಹಿಂದಿನ ವಾರ 5.9% ಹಾಗೂ ಆಗಸ್ಟ್ ಮೊದಲ ವಾರ 10.9% ಪ್ರಗತಿದರ ದಾಖಲಾಗಿತ್ತು. ಅಂತೆಯೇ ಸತತ ನಾಲ್ಕನೇ ದಿನ ಸಾವಿರಕ್ಕೂ ಅಧಿಕ ಸಾವು ಸಂಭವಿಸಿದೆ. ಈ ವಾರ ಸಾವಿನ ಏರಿಕೆ ದರ ಶೇಕಡ 3.9ರಷ್ಟಿದ್ದು, ಹಿಂದಿನ ವಾರ ದಾಖಲಾದ ಶೇಕಡ 1.7ಕ್ಕೆ ಹೋಲಿಸಿದರೆ ಇದು ದ್ವಿಗುಣಗೊಂಡಿದೆ.
ಮಹಾರಾಷ್ಟ್ರ ಸತತ ಎರಡನೇ ದಿನ 16 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ಕಂಡಿದೆ. 16,408 ಮಂದಿಗೆ ಶನಿವಾರ ಸೋಂಕು ದೃಢಪಟ್ಟಿದ್ದು, ಉಳಿದಂತೆ ಉತ್ತರ ಪ್ರದೇಶ (6,233), ರಾಜಸ್ಥಾನ (1,450), ಮಧ್ಯಪ್ರದೇಶ (1,558), ಛತ್ತೀಸ್ಗಢ (1,471) ಮತ್ತು ಜಮ್ಮು ಮತ್ತು ಕಾಶ್ಮೀರ (786) ಹೀಗೆ ಐದು ರಾಜ್ಯಗಳು ಶನಿವಾರ ಇದುವರೆಗಿನ ಗರಿಷ್ಠ ಪ್ರಕರಣಗಳನ್ನು ದಾಖಲಿಸಿವೆ. ದೇಶದಲ್ಲಿ ರವಿವಾರ 970 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಬಲಿಯಾದವರ ಸಂಖ್ಯೆ 64,550ಕ್ಕೇರಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm