ಬ್ರೇಕಿಂಗ್ ನ್ಯೂಸ್
19-06-21 02:36 pm Headline Karnataka News Network ದೇಶ - ವಿದೇಶ
Photo credits : barandbench.com
ದೆಹಲಿ, ಜೂನ್ 19 : ಕಳೆದ ವರ್ಷ ಕೊರೊನಾ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡಾಗ, ತಬ್ಲಿಘಿ ಜಮಾತ್ ಅನ್ನು ಗುರಿಯಾಗಿಸಿ ದ್ವೇಷಪೂರಿತ ವರದಿ ಪ್ರಸಾರ ಮಾಡಿರುವುದನ್ನು ಉಲ್ಲೇಖಿಸಿ ಕನ್ನಡದ ಎರಡು ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಒಂದು ಇಂಗ್ಲಿಷ್ ನ್ಯೂಸ್ ಚಾನಲ್ ವಿರುದ್ಧ ನೇಷನಲ್ ಬ್ರಾಡ್ಕ್ಯಾಸ್ಟಿಂಗ್ ಸ್ಟಾಂಡರ್ಡ್ಸ್ ಅಥಾರಿಟಿ (NBSA) ಕಠಿಣ ಕ್ರಮಕ್ಕೆ ಮುಂದಾಗಿದೆ. ದ್ವೇಷ ಹರಡುವ ರೀತಿಯ ಕಾರ್ಯಕ್ರಮಗಳ ಬಗ್ಗೆ ದೂರಿನ ಆಧಾರದಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಕೊರೊನಾ ಮೊದಲನೇ ಅಲೆ ಕಂಡುಬಂದ ಸಂದರ್ಭದಲ್ಲಿ ಈ ಖಾಸಗಿ ವಾರ್ತಾ ವಾಹಿನಿಗಳು ತಬ್ಲಿಘಿ ಜಮಾತ್ ಹಾಗೂ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ವರದಿ ಮಾಡಿದ್ದ ಬಗ್ಗೆ ನೀಡಿದ್ದ ದೂರು ಆಧರಿಸಿ ಎನ್ಬಿಎಸ್ಎ ಈ ಕ್ರಮ ಕೈಗೊಂಡಿದೆ.
ಕನ್ನಡದ ನ್ಯೂಸ್ 18 ವಾಹಿನಿಗೆ ಒಂದು ಲಕ್ಷ ರೂ. ಮತ್ತು ಸುವರ್ಣ ವಾಹಿನಿಗೆ 50 ಸಾವಿರ ದಂಡ ವಿಧಿಸಲಾಗಿದೆ. ಎರಡೂ ವಾಹಿನಿಗಳಲ್ಲಿ ತಬ್ಲಿಘಿ ಜಮಾತ್ ಗುರಿಯಾಗಿಸಿ ಮಾಡಿದ್ದ ವರದಿಯ ಯೂಟ್ಯೂಬ್ ಕ್ಲಿಪಿಂಗ್, ಕಾರ್ಯಕ್ರಮಗಳು ಮತ್ತು ವರದಿಗಳನ್ನು ಏಳು ದಿನಗಳ ಒಳಗೆ ತೆಗೆದು ಹಾಕುವಂತೆ ಸೂಚಿಸಿದೆ. ಅಲ್ಲದೆ, ವರದಿಗೆ ಸಂಬಂಧಿಸಿ ದಾಖಲೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದೆ.

ಸುವರ್ಣ ವಾಹಿನಿಯು, ಸುದ್ದಿ ಪ್ರಸಾರದ ಮೂಲಭೂತ ಅಂಶಗಳಾದ ನಿಷ್ಪಕ್ಷಪಾತ, ತಟಸ್ಥ ಧೋರಣೆ ಸೇರಿದಂತೆ ಧಾರ್ಮಿಕ ಸಾಮರಸ್ಯದ ಅಂಶಗಳನ್ನು ಉಲ್ಲಂಘಿಸಿದ್ದಾಗಿ ಎನ್ ಬಿಎಸ್ ಎ ಹೇಳಿದೆ.
ಇದಲ್ಲದೆ, ತಮ್ಮ ಸುದ್ದಿ ವಾಹಿನಿಗಳಲ್ಲಿ ಜೂನ್ 23ರ ಒಳಗೆ ಈ ಬಗ್ಗೆ ವಿಷಾದ ಪ್ರಕಟಣೆಯನ್ನೂ ನೀಡಬೇಕು. ಅದು ಟೆಕ್ಸ್ಟ್ ಮತ್ತು ವಾಯ್ಸ್ ಓವರ್ ಎರಡನ್ನೂ ಒಳಗೊಂಡಿರಬೇಕು ಎನ್ನುವ ಷರತ್ತನ್ನೂ ನೀಡಲಾಗಿದೆ.


ಸುದ್ದಿ ವಾಹನಿಗಳು ತಬ್ಲಿಘಿ ಬಗ್ಗೆ ಪ್ರಸಾರ ಮಾಡಿದ ಕಾರ್ಯಕ್ರಮಗಳಲ್ಲಿ ಆಕ್ಷೇಪಾರ್ಹ ರೀತಿ ವರ್ತಿಸಿದ್ದವು. ಅಲ್ಲದೆ, ಕಾರ್ಯಕ್ರಮವನ್ನು ದುರುದ್ದೇಶಪೂರಿತವಾಗಿ ಮತ್ತು ಸದಭಿರುಚಿ ಇಲ್ಲದ ರೀತಿ ಹಾಗೂ ಒಂದು ಸಮುದಾಯಕ್ಕೆ ನೋವಾಗುತ್ತದೆ ಎನ್ನುವ ಕಾಳಜಿಯನ್ನು ಮರೆತು ಮಾಡಲಾಗಿತ್ತು ಎಂದು ಎನ್ ಬಿಎಸ್ ಎ ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಕ್ಯಾಂಪೇನ್ ಅಗೈನ್ಸ್ಟ್ ಹೇಟ್ ಸ್ಪೀಚ್ (CAHS) ಎನ್ನುವ ವಿಂಗ್ 2020ರ ಫೆಬ್ರವರಿಯಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಮಾಧ್ಯಮದಲ್ಲಿ ವರದಿಯಾಗುವ ಧ್ವೇಷಪೂರಿತ ಸುದ್ದಿಗಳನ್ನು ಗಮನಿಸಿ, ಆಯಾ ಸಂಸ್ಥೆಗಳಿಗೆ ದೂರು ನೀಡುತ್ತದೆ. ಸಿಎಎಚ್ಎಸ್ ದೂರಿನ ಅನ್ವಯ ಒಟ್ಟು ಮೂರು ಸುದ್ದಿ ವಾಹಿನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ನ್ಯೂಸ್ 18 ಕನ್ನಡ ವಾಹಿನಿಯಲ್ಲಿ ಏಪ್ರಿಲ್ 1, 2020ರಂದು ಹಾಗೂ ಸುವರ್ಣ ನ್ಯೂಸ್ನಲ್ಲಿ ಮಾರ್ಚ್ 31, 2020 ರಿಂದ ಏಪ್ರಿಲ್ 4ರ ವರೆಗೆ ಪ್ರಸಾರವಾಗಿದ್ದ ತಬ್ಲಿಘಿ ಜಮಾತ್ ಗುರಿಯಾಗಿಸಿದ ಕಾರ್ಯಕ್ರಮಗಳ ಬಗ್ಗೆ ದೂರು ನೀಡಲಾಗಿತ್ತು. ಇದಲ್ಲದೆ, ಟೈಂಸ್ ನೌ ಇಂಗ್ಲಿಷ್ ವಾಹಿನಿಯೂ ಇದೇ ರೀತಿ ಸುದ್ದಿ ಪ್ರಸಾರ ಮಾಡಿದ ಬಗ್ಗೆ ದೂರಿನಲ್ಲಿ ತಿಳಿಸಲಾಗಿತ್ತು.
National Broadcasting Standards Authority (NBSA) of News Broadcasters Association (NBA) has fined Kannada channels News18 Kannada and Suvarna News and English channel Times Now has been censured for gaps in reporting news targeting Tablighi Jamaat members last year, complainant Campaign Against Hate Speech (CAHS) said on Thursday.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm