ಬ್ರೇಕಿಂಗ್ ನ್ಯೂಸ್
21-06-21 04:07 pm Headline Karnataka News Network ದೇಶ - ವಿದೇಶ
Photo credits : Representational Image
ಚೆನ್ನೈ, ಜೂನ್ 21: ತಮಿಳುನಾಡಿನಲ್ಲಿ ಪಟಾಕಿ ಸ್ಪೋಟಗೊಂಡಿದ್ದು, ಘಟನೆಯಲ್ಲಿ ಐದು ವರ್ಷದ ಮಗು ಸೇರಿ 3 ಮಂದಿ ಮೃತಪಟ್ಟಿರುವ ಘಟನೆ ನಡೆಸಿದೆ.
ತಮಿಳುನಾಡಿನ ಸತ್ತೂರು ಜಿಲ್ಲೆಯ ಥಾಯಿಲ್ ಪಟ್ಟಿಯ ಕಲೈನರ್ ಕಾಲನಿಯಲ್ಲಿರುವ ಮನೆಯಲ್ಲಿ ಪಟಾಕಿ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಪರಿಣಾಮ ಮನೆಯಲ್ಲಿದ್ದ 5 ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಇದೊಂದು ಅಕ್ರಮ ಪಟಾಕಿ ತಯಾರಿಕಾ ಘಟಕವಾಗಿದ್ದು, ಮನೆಯಲ್ಲೇ ಪಟಾಕಿ ತಯಾರಿಸಲಾಗುತ್ತಿತ್ತು. ಈ ವೇಳೆ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.
ಮೃತರನ್ನು 35 ವರ್ಷದ ಸೆಲ್ವಂಮಣಿ, ಅವರ 5 ವರ್ಷದ ಪುತ್ರ ಹಾಗೂ 35 ವರ್ಷದ ಕರ್ಪಾಗಂ ಎಂದು ಗುರುತಿಸಲಾಗಿದೆ. ಅಂತೆಯೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೂರ್ಯ ಮತ್ತು ಪ್ರಭಾಕರ್ ಅವರನ್ನು ಸಮೀಪದ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಫೋಟದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿವೆ. ಸ್ಫೋಟದ ತೀವ್ರತೆಯಿಂದಾಗಿ ಇಡೀ ಮನೆ ಜಖಂಗೊಂಡಿದೆ. 2020ರಲ್ಲಿ ಪಟಾಕಿ ಸ್ಫೋಟ ಸಂಭವಿಸಿ 8 ಮಂದಿ ಮೃತಪಟ್ಟಿದ್ದರು. ತಮಿಳುನಾಡಿನ ಪಟಾಕಿ ತಯಾರಿಕಾ ಘಟಕ ಹೊತ್ತಿ ಉರಿದಿದ್ದು 8 ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದರು.
ಚಿಪ್ಪಿಪ್ಪಾರೈ ನಲ್ಲಿ ಘಟನೆ ನಡೆದಿದೆ. ಇದು ಈ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಸಂಭವಿಸಿದ ಎರಡನೇ ಸ್ಫೋಟ ಪ್ರಕರಣವಾಗಿದೆ. ಕಕ್ಕಿವಾದಂಪಟ್ಟಿ ಬಳಿ ಸಂಭವಿಸಿದ್ದ ಮೊದಲ ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು.
In Tamil Nadu two women and a child, were killed in a firecracker factory explosion. Two people were injured in the accident at the illegal firecracker factory near Sivakasi in Tamil Nadu's Virudhunagar district.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 05:10 pm
HK News Staffer
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm