ಬ್ರೇಕಿಂಗ್ ನ್ಯೂಸ್
23-06-21 12:03 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 23: "ಭಾರತದಲ್ಲಿ ಮುಂಬರುವ ಸಪ್ಟೆಂಬರ್ ತಿಂಗಳಿನಿಂದ 2 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೂ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗುವುದು," ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಕೊರೊನಾವೈರಸ್ ಟಾಸ್ಕ್ ಫೋರ್ಸ್ ತಂಡದಲ್ಲಿ ಪ್ರಮುಖರು ಎನಿಸಿರುವ ಖ್ಯಾತ ಶ್ವಾಸಕೋಶಶಾಸ್ತ್ರಜ್ಞ ಡಾ.ರಂದೀಪ್ ಗುಲೇರಿಯಾ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಭಾರತ್ ಬಯೋಟೆಕ್ ಮಕ್ಕಳ ಮೇಲೆ ನಡೆಸುತ್ತಿರುವ ವೈದ್ಯಕೀಯ ಪ್ರಯೋಗದ ಅಧಿಕೃತ ದತ್ತಾಂಶ ಸಪ್ಟೆಂಬರ್ ತಿಂಗಳ ಹೊತ್ತಿಗೆ ಹೊರ ಬರಲಿದೆ. ಅದೇ ತಿಂಗಳು ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ವಿತರಣೆಗೆ ಅನುಮೋದನೆ ಪಡೆದುಕೊಂಡು ಲಸಿಕೆ ವಿತರಣೆ ಕಾರ್ಯ ಆರಂಭಿಸಲಾಗುವುದು," ಎಂದಿದ್ದಾರೆ.
ಮುಂದಿನ ದಿನಗಳಲ್ಲಿ ಒಂದು ವೇಳೆ ಫೈಜರ್-ಬಯೋ-ಎನ್-ಟೆಕ್ ಸಂಸ್ಥೆಯ ಕೊರೊನಾವೈರಸ್ ಲಸಿಕೆಗೆ ಅನುಮೋದನೆ ನೀಡಿದ್ದೆ ಆದರೆ 2 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೂ ಈ ಲಸಿಕೆಯನ್ನು ವಿತರಿಸುವುದಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ.
ಕೊವ್ಯಾಕ್ಸಿನ್ ಲಸಿಕೆಯ ಎರಡು ಮತ್ತು ಮೂರನೇ ಹಂತದ ವೈದ್ಯಕೀಯ ಪ್ರಯೋಗಗಳನ್ನು ಮಕ್ಕಳು ಮತ್ತು ಯುವಕರ ಮೇಲೆ ನಡೆಸುವುದಕ್ಕೆ ಭಾರತದ ಔಷಧೀಯ ನಿಯಂತ್ರಣ ಪ್ರಾಧಿಕಾರ ಕಳೆದ ಮೇ 12ರಂದು ಭಾರತ್ ಬಯೋಟೆಕ್ ಸಂಸ್ಥೆಗೆ ಅನುಮೋದನೆ ನೀಡಿತ್ತು. ಜೂನ್ 7ರಿಂದ ನವದೆಹಲಿ ಏಮ್ಸ್ 2 ರಿಂದ 17 ವರ್ಷದ ಮಕ್ಕಳ ಮೇಲೆ ವೈದ್ಯಕೀಯ ಪ್ರಯೋಗವನ್ನು ಆರಂಭಿಸಿತ್ತು.
"ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಶಾಲೆಗಳ ಪುನಾರಂಭಕ್ಕೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶಾಲೆಗಳನ್ನು ಆರಂಭಿಸುವುದರಿಂದ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚುವ ಅಪಾಯವಿದೆ. ಈ ಹಿನ್ನೆಲೆ ತೆರೆದ ಪ್ರದೇಶಗಳಲ್ಲಿ ತರಗತಿಗಳನ್ನು ನಡೆಸುವುದು ಸೂಕ್ತವಾಗಿದೆ. ಬಯಲು ಪರಿಸರದಲ್ಲಿ ಸೋಂಕು ಹರಡುವಿಕೆ ಅಪಾಯ ಅಷ್ಟಾಗಿ ಇರುವುದಿಲ್ಲ," ಎಂದು ರಂದೀಪ್ ಗುಲೇರಿಯಾ ಸಲಹೆ ನೀಡಿದ್ದಾರೆ.
"ಮಕ್ಕಳಲ್ಲಿ ಪ್ರತಿಕಾಯ ಶಕ್ತಿ ವೃದ್ಧಿಸುವುದಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದನ್ನು ಸೆರೋ-ಸಮೀಕ್ಷೆಯಲ್ಲಿ ಗುರುತಿಸಲಾಗಿದೆ. ಅಲ್ಲದೇ, ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುವಂತಾ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ, ಎಂದು ಡಾ. ರಂದೀಪ್ ಗುಲೇರಿಯಾ ಸ್ಪಷ್ಟಪಡಿಸಿದ್ದಾರೆ. "ಮಕ್ಕಳನ್ನು ವೈದ್ಯಕೀಯ ಪ್ರಯೋಗದಲ್ಲಿ ಬಳಸಿಕೊಂಡ ಸಂದರ್ಭದಲ್ಲಿ ಅವರಲ್ಲೂ ಪ್ರತಿಕಾಯ ಶಕ್ತಿ ವೃದ್ಧಿಸುವುದನ್ನು ಕಂಡುಕೊಳ್ಳಲಾಗಿದೆ," ಎಂದಿದ್ದಾರೆ.
AIIMS director Dr Randeep Guleria said data Covaxin’s phase 2 and 3 trials for children would be made available by September, adding that the vaccine itself could be approved in the same month.
15-04-25 08:44 pm
Bangalore Correspondent
Kannada Journalist S K Shyamsundar Death: ಹಿರ...
15-04-25 12:51 pm
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
15-04-25 09:57 pm
Mangalore Correspondent
Drowning, Surathkal Beach, Mangalore, News: ಮ...
15-04-25 09:21 pm
ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ...
14-04-25 09:20 pm
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm