ಬ್ರೇಕಿಂಗ್ ನ್ಯೂಸ್
24-06-21 11:51 am Headline Karnataka News Network ದೇಶ - ವಿದೇಶ
ಕೋವಿಡ್ ಆತಂಕದಿಂದ ಆಟೋ ಉದ್ಯಮವು ತೀವ್ರ ಹಿನ್ನಡೆ ಅನುಭವಿಸುತ್ತಿದ್ದು, ಹೊಸ ವಾಹನ ಮಾರಾಟದಲ್ಲಿ ಭಾರೀ ಪ್ರಮಾಣದ ಕುಸಿತ ಕಂಡಿದೆ. ಇದರ ನಡುವೆ ಗ್ರಾಹಕರು ಪರಿಸ್ಥಿತಿಗೆ ಅನುಗುಣವಾಗಿ ಸೆಕೆಂಡ್ ವಾಹನಗಳ ಮುಖ ಮಾಡುತ್ತಿದ್ದಾರೆ.
ಕರೋನಾ ವೈರಸ್ನಿಂದಾಗಿ ಪ್ರಮುಖ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಆಟೋ ಉದ್ಯಮವು ಕೂಡಾ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದೆ. ಲಾಕ್ಡೌನ್ ವಿನಾಯ್ತಿ ನಂತರ ಆಟೋ ಉತ್ಪಾದನಾ ಚಟುವಟಿಕೆಗಳಿಗೆ ಅವಕಾಶ ಸಿಕ್ಕಿದ್ದರೂ ಗ್ರಾಹಕರಿಲ್ಲದೆ ಹಲವು ಕಾರು ಮಾರಾಟ ಕಂಪನಿಗಳು ಕದಮುಚ್ಚುವ ಸ್ಥಿತಿಗೆ ತಲುಪಿವೆ.

ಸದ್ಯ ಕರೋನಾ ವೈರಸ್ 2ನೇ ಅಲೆಯ ಪರಿಣಾಮ ದೇಶದಲ್ಲಿ ಆಟೋ ಉದ್ಯಮವು ಮಂದಗತಿಯಲ್ಲಿ ಸಾಗಿದ್ದು, ಹೊಸ ವಾಹನ ಖರೀದಿ ಯೋಜನೆಯಲ್ಲಿದ್ದ ಹಲವು ಗ್ರಾಹಕರು ಪರಿಸ್ಥಿತಿಗೆ ಅನುಗುಣವಾಗಿ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿಯತ್ತ ಮುಖ ಮಾಡುತ್ತಿದ್ದಾರೆ.
ಹೊಸ ವಾಹನಗಳ ಬೇಡಿಕೆಯಿಲ್ಲದಿರುವುದರಿಂದ ಹೊಸ ಅವಕಾಶವನ್ನು ಬಳಸಿಕೊಳ್ಳಲು ಮುಂದಾಗಿರುವ ಹಲವು ಆಟೋ ಕಂಪನಿಗಳು ಹೊಸ ವಾಹನಗಳ ಮಾರಾಟದ ಜೊತೆಗೆ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟದ ಉದ್ಯಮದ ಮೇಲೂ ಗಮನಹರಿಸುತ್ತಿವೆ.
ಸದ್ಯ ವೈರಸ್ ಭೀತಿ ನಡುವೆಯೂ ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ವ್ಯಾಪಾರ ವಹಿವಾಟು ಕೈಗೊಂಡಿರುವ ಆಟೋ ಕಂಪನಿಗಳು ಕನಿಷ್ಠ ಪ್ರಮಾಣದ ವಾಹನ ಮಾರಾಟ ಪ್ರಮಾಣವನ್ನು ದಾಖಲಿಸಿದ್ದು, ಬಹುತೇಕ ಕಂಪನಿಗಳ ಕಾರು ಮಾರಾಟದಲ್ಲಿ ಶೇ. 40ರಿಂದ ಶೇ.60ರಷ್ಟು ಕುಸಿತ ಕಂಡುಬಂದಿದೆ.


ಹೊಸ ಕಾರುಗಳು ಮಾರಾಟವು ಕುಸಿದ ಬೆನ್ನಲ್ಲೇ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿ ಮತ್ತು ಮಾರಾಟ ಪ್ರಮಾಣವು ತೀವ್ರಗತಿಯಲ್ಲಿ ಹೆಚ್ಚಿದ್ದು, ಈ ನಿಟ್ಟಿನಲ್ಲಿ ಪ್ರಮುಖ ಕಂಪನಿ ಸೆಕೆಂಡ್ ಹ್ಯಾಂಡ್ ಮಾರಾಟ ಮಳಿಗೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸುತ್ತಿವೆ.
ಅಸಂಘಟಿತವಾಗಿರುವ ಸ್ಥಳೀಯ ವ್ಯಾಪಾರಿಗಳ ಬಳಿ ಸೆಕೆಂಡ್ ಹ್ಯಾಂಡ್ ವಾಹನ ಖರೀದಿಯು ಕೆಲವು ಸಂದರ್ಭಗಳಲ್ಲಿ ಲಾಭಕ್ಕಿಂತ ಹೆಚ್ಚು ನಷ್ಟ ಅನುಭವಿಸಬೇಕಾದ ಸಂದರ್ಭಗಳು ಎದುರಾಗಬಹುದಾಗಿದ್ದು, ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳನ್ನು ಗ್ರಾಹಕರಿಗೆ ತಲುಪಿಸುವ ಯೋಜನೆಯಲ್ಲಿವೆ.

ಜೊತೆಗೆ ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮಳಿಗೆಗಳಲ್ಲಿ ಖರೀದಿಸುವ ವಾಹನಗಳಿಗೆ ಹೆಚ್ಚುವರಿಯಾಗಿ ವಾರಂಟಿ ಸಹ ದೊರೆಯಲಿದ್ದು, ಮೋಸ ವ್ಯವಹಾರಗಳಿಗೆ ಇಲ್ಲಿ ಅವಕಾಶವಿರುವುದಿಲ್ಲ.
ಈ ನಿಟ್ಟಿನಲ್ಲಿ ಮಹೀಂದ್ರಾ ಕಂಪನಿಯು ಫಸ್ಟ್ ಛಾಯ್ಸ್, ಮಾರುತಿ ಸುಜುಕಿ ಟ್ರೂ ವ್ಯಾಲ್ಯೂ ಸೇರಿದಂತೆ ಪ್ರಮುಖ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳು ಭಾರೀ ಪ್ರಮಾಣದ ವಹಿವಾಟು ನಡೆಸುವ ಯೋಜನೆಯಲ್ಲಿದ್ದು, ಸೆಕೆಂಡ್ ಹ್ಯಾಂಡ್ ವಾಹನಗಳಿಗೆ ಮಹಾನಗರಗಳಿಂತಲೂ ಹೆಚ್ಚು 2ನೇ ಮತ್ತು 3ನೇ ಹಂತದ ನಗರಗಳಲ್ಲಿ ಹೆಚ್ಚಿನ ಮಟ್ಟದ ಬೇಡಿಕೆ ಕಂಡುಬರುತ್ತಿದೆ.
Second-hand vehicle business on high speed in India amid Covid 19 pandemic
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm