ಬ್ರೇಕಿಂಗ್ ನ್ಯೂಸ್
01-09-20 12:01 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 01: ನಿನ್ನೆ ಸಂಜೆ ಮೃತಪಟ್ಟಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ಮಧ್ಯಾಹ್ನ 2ಕ್ಕೆ ನಡೆಯಲಿದೆ. ದೆಹಲಿಯ ಲೋಧಿ ರಸ್ತೆಯ ಕ್ರಿಮೇಟೋರಿಯಮ್ನಲ್ಲಿ ಮಾಜಿ ರಾಷ್ಟ್ರಪತಿಗಳ ಅಂತಿಮ ವಿಧಿವಿಧಾನ ನಡೆಯಲಿದೆ. ಅದಕ್ಕೂ ಮುನ್ನ ರಾಜಾಜಿ ಮಾರ್ಗ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 9ರಿಂದ 12ಗಂಟೆಯವರೆಗೂ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.
ಇದೇ ವೇಳೆ, ಕೇಂದ್ರ ಸರ್ಕಾರ 84 ವರ್ಷದ ಪ್ರಣಬ್ ಮುಖರ್ಜಿ ಅವರ ಸಾವಿಗೆ ಗೌರವ ಸೂಚಕವಾಗಿ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಸೆಪ್ಟೆಂಬರ್ 6ರವರೆಗೆ ದೇಶಾದ್ಯಂತ ರಾಷ್ಟ್ರಧ್ವಜ ಅರ್ಧಕ್ಕೆ ಹಾರಾಡುತ್ತದೆ. ಸರ್ಕಾರದಿಂದ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮ ಇರುವುದಿಲ್ಲ.
ಹಿರಿಯ ಕಾಂಗ್ರೆಸ್ ಮುಖಂಡರಾಗಿ, ಬಳಿಕ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದ ಪ್ರಣಬ್ ಮುಖರ್ಜಿ ಅವರು ವಿವಿಧ ಅನಾರೋಗ್ಯಗಳ ಕಾರಣದಿಂದ ಆಗಸ್ಟ್ 10ರಂದು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರಲ್ ಆಸ್ಪತ್ರೆಗೆ ದಾಖಲಅಗಿದ್ದರು. ಅವರ ಮಿದುಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರ ಅವರು ಕೋಮಾಗೆ ಜಾರಿದರು. ಕೋವಿಡ್-19 ಸೋಂಕು ಕೂಡ ತಗುಲಿ ಅವರ ಅನಾರೋಗ್ಯ ಇನ್ನಷ್ಟು ಬಿಗಡಾಯಿಸಿತು. ಶ್ವಾಸಕೋಶದ ಸೋಂಕಿನಿಂದ ಸೆಪ್ಟಿಕ್ ಶಾಕ್ ಆಗಿ ಅವರು ಸೋಮವಾರ ಸಂಜೆ 4:30ಕ್ಕೆ ಕೊನೆಯುಸಿರೆಳೆದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm