ಬ್ರೇಕಿಂಗ್ ನ್ಯೂಸ್
25-06-21 05:46 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 25: ಹೊಸ ಐಟಿ ನಿಯಮ ಹೇರಿಕೆ ವಿಚಾರದಲ್ಲಿ ಟ್ವಿಟರ್ ಮತ್ತು ಕೇಂದ್ರ ಸರಕಾರದ ನಡುವೆ ಜಟಾಪಟಿ ಎದ್ದಿರುವಾಗಲೇ ಕೇಂದ್ರ ಐಟಿ ತಂತ್ರಜ್ಞಾನ ಸಚಿವ ರವಿಶಂಕರ ಪ್ರಸಾದ್ ಅವರ ಟ್ವಿಟರ್ ಖಾತೆಯನ್ನು ಟ್ವಿಟರ್ ಕಂಪನಿ ಬ್ಲಾಕ್ ಮಾಡಿರುವ ಪ್ರಸಂಗ ನಡೆದಿದೆ. ಅಮೆರಿಕದ ಡಿಜಿಟಲ್ ಕಾಪಿರೈಟ್ ಆಕ್ಟ್ ಉಲ್ಲಂಘನೆಯಾಗಿದೆ ಎಂದು ಹೇಳಿ ಒಂದು ಗಂಟೆ ಕಾಲ ರವಿಶಂಕರ್ ಪ್ರಸಾದ್ ಟ್ವಿಟರ್ ಖಾತೆಯನ್ನು ಬ್ಲಾಕ್ ಮಾಡಿ, ಮತ್ತೆ ಅನುವು ಮಾಡಿಕೊಟ್ಟಿದೆ.
ಈ ಬಗ್ಗೆ ಭಾರತೀಯ ಮೂಲದ ಟ್ವಿಟರ್ ಮಾದರಿಯ ಕೂ ಖಾತೆಯಲ್ಲಿ ಸಚಿವ ರವಿಶಂಕರ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಟ್ವಿಟರ್ ಖಾತೆಯಲ್ಲಿ ಇಂದು ಕೆಲವು ವಿಲಕ್ಷಣ ಘಟನೆಗಳು ನಡೆದವು. ಅಮೆರಿಕದ ಡಿಜಿಟಲ್ ಮಿಲೇನಿಯಮ್ ಕಾಪಿರೈಟ್ ಆಕ್ಟ್ ಉಲ್ಲಂಘನೆ ಆಗಿದೆಯೆಂದು ಆರೋಪಿಸಿ ಒಂದು ಗಂಟೆ ಕಾಲ ಖಾತೆಯನ್ನು ಬ್ಲಾಕ್ ಮಾಡಿತ್ತು. ಆನಂತರ ಒಂದು ಗಂಟೆಯ ಬಳಿಕ ಮರಳಿ ಖಾತೆಯನ್ನು ಉಳಿಸಿಕೊಂಡಿದೆ ಎಂದು ಕೂ ಏಪ್ ನಲ್ಲಿ ಬರೆದುಕೊಂಡಿದ್ದಾರೆ.

ಟ್ವಿಟರ್ ಕಂಪನಿಯ ಈ ರೀತಿಯ ನಡೆಯನ್ನು ನೋಡಿದರೆ, ಇವರು ನಮ್ಮ ಅಭಿಪ್ರಾಯ ಸ್ವಾತಂತ್ರ್ಯ ಗೌರವಿಸುವ ರೀತಿ ಕಾಣುವುದಿಲ್ಲ. ಇವರು ತಮ್ಮದೇ ಅಜೆಂಡಾವನ್ನು ನಮ್ಮ ಮೇಲೆ ಹೇರಲು ಆಸಕ್ತಿ ತೋರುತ್ತಿದ್ದಾರೆ. ತಾವು ಹಾಕಿದ ಗೆರೆಯನ್ನು ದಾಟಿದರೆ, ನಿಮ್ಮನ್ನು ಟ್ವಿಟರ್ ವೇದಿಕೆಯಿಂದಲೇ ಕಿತ್ತು ಹಾಕುವ ಬೆದರಿಕೆಯನ್ನು ಒಡ್ಡುತ್ತಿದ್ದಾರೆ ಎಂದು ರವಿಶಂಕರ್ ಪ್ರಸಾದ್ ಟ್ವಿಟರ್ ವಿರುದ್ಧ ಹರಿಹಾಯ್ದಿದ್ದಾರೆ.
ಸೋಶಿಯಲ್ ಮೀಡಿಯಾ ವಿಚಾರದಲ್ಲಿ ಕೇಂದ್ರ ಸರಕಾರ ಜಾರಿಗೆ ತಂದಿರುವ ಕಾಯ್ದೆ ಬಗ್ಗೆ ಉಲ್ಲೇಖಿಸಿ, ಸೋಶಿಯಲ್ ಮೀಡಿಯಾದ ಯಾವುದೇ ವೇದಿಕೆ ಇರಲಿ. ಹೊಸ ಐಟಿ ನಿಯಮಗಳನ್ನು ಗೌರವಿಸಲೇಬೇಕು. ಅದರಲ್ಲಿ ನಾವು ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.
ಟ್ವಿಟರ್ ಖಾತೆಯನ್ನು ಉಲ್ಲಂಘಿಸುವ ಮೂಲಕ ಭಾರತದ ಕಾನೂನನ್ನು ಉಲ್ಲಂಘಿಸಿದೆ. 2021ರ ಮಾಹಿತಿ ತಂತ್ರಜ್ಞಾನ ನಿಯಮ 4(8)ರ ಉಲ್ಲಂಘನೆಯಾಗಿದೆ. ಇದರ ಪ್ರಕಾರ ಯಾವುದೇ ವ್ಯಕ್ತಿಯ ಖಾತೆಯನ್ನು ಆತನ ಗಮನಕ್ಕೆ ತರದೆ ಅಥವಾ ನೋಟೀಸ್ ನೀಡದೇ ಡಿಲೀಟ್ ಮಾಡುವುದು ನಿಯಮದ ಉಲ್ಲಂಘನೆಯಾಗುತ್ತದೆ. ನನ್ನ ಹೇಳಿಕೆ, ಟೀವಿ ಹೇಳಿಕೆ, ಇಂಟರ್ವ್ಯೂ ಹೀಗೆ ಎಲ್ಲವನ್ನೂ ಒಳಗೊಂಡಿದ್ದ ಖಾತೆಯನ್ನು ಒಮ್ಮೆಗೆ ಇಲ್ಲವಾಗಿಸುವುದಂದ್ರೆ, ಟ್ವಿಟರ್ ಉದ್ದೇಶಪೂರ್ವಕವಾಗೇ ಕಿರುಕುಳ ನೀಡಿದಂತಿದೆ ಎಂದು ಕಿಡಿಕಾರಿದ್ದಾರೆ.
Friends! Something highly peculiar happened today. Twitter denied access to my account for almost an hour on the alleged ground that there was a violation of the Digital Millennium Copyright Act of the USA and subsequently they allowed me to access the account. pic.twitter.com/WspPmor9Su
— Ravi Shankar Prasad (@rsprasad) June 25, 2021
Union IT Minister Ravi Shankar Prasad hit out at Twitter for denying him access to his account for almost an hour, saying that his statements "calling out the high-handedness and arbitrary actions of Twitter have clearly ruffled its feathers".
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm