ಬ್ರೇಕಿಂಗ್ ನ್ಯೂಸ್
25-06-21 05:46 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 25: ಹೊಸ ಐಟಿ ನಿಯಮ ಹೇರಿಕೆ ವಿಚಾರದಲ್ಲಿ ಟ್ವಿಟರ್ ಮತ್ತು ಕೇಂದ್ರ ಸರಕಾರದ ನಡುವೆ ಜಟಾಪಟಿ ಎದ್ದಿರುವಾಗಲೇ ಕೇಂದ್ರ ಐಟಿ ತಂತ್ರಜ್ಞಾನ ಸಚಿವ ರವಿಶಂಕರ ಪ್ರಸಾದ್ ಅವರ ಟ್ವಿಟರ್ ಖಾತೆಯನ್ನು ಟ್ವಿಟರ್ ಕಂಪನಿ ಬ್ಲಾಕ್ ಮಾಡಿರುವ ಪ್ರಸಂಗ ನಡೆದಿದೆ. ಅಮೆರಿಕದ ಡಿಜಿಟಲ್ ಕಾಪಿರೈಟ್ ಆಕ್ಟ್ ಉಲ್ಲಂಘನೆಯಾಗಿದೆ ಎಂದು ಹೇಳಿ ಒಂದು ಗಂಟೆ ಕಾಲ ರವಿಶಂಕರ್ ಪ್ರಸಾದ್ ಟ್ವಿಟರ್ ಖಾತೆಯನ್ನು ಬ್ಲಾಕ್ ಮಾಡಿ, ಮತ್ತೆ ಅನುವು ಮಾಡಿಕೊಟ್ಟಿದೆ.
ಈ ಬಗ್ಗೆ ಭಾರತೀಯ ಮೂಲದ ಟ್ವಿಟರ್ ಮಾದರಿಯ ಕೂ ಖಾತೆಯಲ್ಲಿ ಸಚಿವ ರವಿಶಂಕರ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಟ್ವಿಟರ್ ಖಾತೆಯಲ್ಲಿ ಇಂದು ಕೆಲವು ವಿಲಕ್ಷಣ ಘಟನೆಗಳು ನಡೆದವು. ಅಮೆರಿಕದ ಡಿಜಿಟಲ್ ಮಿಲೇನಿಯಮ್ ಕಾಪಿರೈಟ್ ಆಕ್ಟ್ ಉಲ್ಲಂಘನೆ ಆಗಿದೆಯೆಂದು ಆರೋಪಿಸಿ ಒಂದು ಗಂಟೆ ಕಾಲ ಖಾತೆಯನ್ನು ಬ್ಲಾಕ್ ಮಾಡಿತ್ತು. ಆನಂತರ ಒಂದು ಗಂಟೆಯ ಬಳಿಕ ಮರಳಿ ಖಾತೆಯನ್ನು ಉಳಿಸಿಕೊಂಡಿದೆ ಎಂದು ಕೂ ಏಪ್ ನಲ್ಲಿ ಬರೆದುಕೊಂಡಿದ್ದಾರೆ.
ಟ್ವಿಟರ್ ಕಂಪನಿಯ ಈ ರೀತಿಯ ನಡೆಯನ್ನು ನೋಡಿದರೆ, ಇವರು ನಮ್ಮ ಅಭಿಪ್ರಾಯ ಸ್ವಾತಂತ್ರ್ಯ ಗೌರವಿಸುವ ರೀತಿ ಕಾಣುವುದಿಲ್ಲ. ಇವರು ತಮ್ಮದೇ ಅಜೆಂಡಾವನ್ನು ನಮ್ಮ ಮೇಲೆ ಹೇರಲು ಆಸಕ್ತಿ ತೋರುತ್ತಿದ್ದಾರೆ. ತಾವು ಹಾಕಿದ ಗೆರೆಯನ್ನು ದಾಟಿದರೆ, ನಿಮ್ಮನ್ನು ಟ್ವಿಟರ್ ವೇದಿಕೆಯಿಂದಲೇ ಕಿತ್ತು ಹಾಕುವ ಬೆದರಿಕೆಯನ್ನು ಒಡ್ಡುತ್ತಿದ್ದಾರೆ ಎಂದು ರವಿಶಂಕರ್ ಪ್ರಸಾದ್ ಟ್ವಿಟರ್ ವಿರುದ್ಧ ಹರಿಹಾಯ್ದಿದ್ದಾರೆ.
ಸೋಶಿಯಲ್ ಮೀಡಿಯಾ ವಿಚಾರದಲ್ಲಿ ಕೇಂದ್ರ ಸರಕಾರ ಜಾರಿಗೆ ತಂದಿರುವ ಕಾಯ್ದೆ ಬಗ್ಗೆ ಉಲ್ಲೇಖಿಸಿ, ಸೋಶಿಯಲ್ ಮೀಡಿಯಾದ ಯಾವುದೇ ವೇದಿಕೆ ಇರಲಿ. ಹೊಸ ಐಟಿ ನಿಯಮಗಳನ್ನು ಗೌರವಿಸಲೇಬೇಕು. ಅದರಲ್ಲಿ ನಾವು ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.
ಟ್ವಿಟರ್ ಖಾತೆಯನ್ನು ಉಲ್ಲಂಘಿಸುವ ಮೂಲಕ ಭಾರತದ ಕಾನೂನನ್ನು ಉಲ್ಲಂಘಿಸಿದೆ. 2021ರ ಮಾಹಿತಿ ತಂತ್ರಜ್ಞಾನ ನಿಯಮ 4(8)ರ ಉಲ್ಲಂಘನೆಯಾಗಿದೆ. ಇದರ ಪ್ರಕಾರ ಯಾವುದೇ ವ್ಯಕ್ತಿಯ ಖಾತೆಯನ್ನು ಆತನ ಗಮನಕ್ಕೆ ತರದೆ ಅಥವಾ ನೋಟೀಸ್ ನೀಡದೇ ಡಿಲೀಟ್ ಮಾಡುವುದು ನಿಯಮದ ಉಲ್ಲಂಘನೆಯಾಗುತ್ತದೆ. ನನ್ನ ಹೇಳಿಕೆ, ಟೀವಿ ಹೇಳಿಕೆ, ಇಂಟರ್ವ್ಯೂ ಹೀಗೆ ಎಲ್ಲವನ್ನೂ ಒಳಗೊಂಡಿದ್ದ ಖಾತೆಯನ್ನು ಒಮ್ಮೆಗೆ ಇಲ್ಲವಾಗಿಸುವುದಂದ್ರೆ, ಟ್ವಿಟರ್ ಉದ್ದೇಶಪೂರ್ವಕವಾಗೇ ಕಿರುಕುಳ ನೀಡಿದಂತಿದೆ ಎಂದು ಕಿಡಿಕಾರಿದ್ದಾರೆ.
Friends! Something highly peculiar happened today. Twitter denied access to my account for almost an hour on the alleged ground that there was a violation of the Digital Millennium Copyright Act of the USA and subsequently they allowed me to access the account. pic.twitter.com/WspPmor9Su
— Ravi Shankar Prasad (@rsprasad) June 25, 2021
Union IT Minister Ravi Shankar Prasad hit out at Twitter for denying him access to his account for almost an hour, saying that his statements "calling out the high-handedness and arbitrary actions of Twitter have clearly ruffled its feathers".
31-05-25 09:41 pm
Bangalore Correspondent
Mangalore Serial Killings, B Y Vijayendra: ಕರ...
31-05-25 09:38 pm
Karkala Kambala, Appu, Beladi: ನೂರಾರು ಕಂಬಳ ಪ್...
31-05-25 04:33 pm
H.S. Venkatesha Murthy, Death: ಕನ್ನಡದ ಪ್ರಸಿದ್...
30-05-25 11:13 am
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
31-05-25 11:14 pm
Mangalore Correspondent
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
Shafi Saadi, Mangalore, Bantwal Rahim Murder:...
31-05-25 03:57 pm
Minister Dinesh Gundurao, Mangalore News: ಸುದ...
31-05-25 01:40 pm
31-05-25 10:47 pm
Mangalore Correspondent
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm