ಬ್ರೇಕಿಂಗ್ ನ್ಯೂಸ್
26-06-21 12:46 pm Headline Karnataka News Network ದೇಶ - ವಿದೇಶ
ರಾಯಗಢ, ಜೂನ್ 26: ವ್ಯಾಕ್ಸಿನ್ ಕಾರಣದಿಂದ ಕುವೈಟಿಗೆ ತೆರಳಲು ವೀಸಾ ಸಿಗಲಿಲ್ಲ ಎಂಬ ಚಿಂತೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಹದ್ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸಿರಾಜ್ ಮಾಪ್ಕರ್ ಎಂದು ಗುರುತಿಸಲಾಗಿದೆ.
ಕುವೈಟಿನಲ್ಲಿ ತೈಲ ಕಂಪನಿಯಲ್ಲಿ ಕೆಲಸಕ್ಕಿದ್ದ 45 ವರ್ಷದ ಸಿರಾಜ್ ಮಾಪ್ಕರ್ ಕಳೆದ ಮಾರ್ಚ್ ತಿಂಗಳಲ್ಲಿ ರಜೆಯ ನಿಮಿತ್ತ ಊರಿಗೆ ಬಂದಿದ್ದರು. ಬಳಿಕ ಕೋವಿಡ್ ಲಾಕ್ಡೌನ್ ಕಾರಣದಿಂದ ಇಲ್ಲೇ ಉಳಿದುಕೊಂಡಿದ್ದರು. ಕುವೈಟಿಗೆ ಮರಳುವ ಕಾರಣದಿಂದ ಬೇಗನೆ ವ್ಯಾಕ್ಸಿನ್ ಹಾಕಿಸಿಕೊಂಡಿದ್ದರು. ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದ ಸಿರಾಜ್ ಗೆ ಎರಡು ಡೋಸ್ ಕೂಡ ಆಗಿತ್ತು. ಆದರೆ, ಜೂನ್ ಆರಂಭದಲ್ಲಿ ಕುವೈಟಿಗೆ ಮರಳಲು ವೀಸಾಗೆ ಅರ್ಜಿ ಸಲ್ಲಿಸಿದಾಗ, ಕುವೈಟಿನಿಂದ ನಿರಾಕರಣೆ ಆಗಿತ್ತು.
ಕುವೈಟ್ ದೇಶದಲ್ಲಿ ಕೋವ್ಯಾಕ್ಸಿನ್ ಲಸಿಕೆಗೆ ಮಾನ್ಯತೆ ಇಲ್ಲದಿರುವುದರಿಂದ ವೀಸಾ ನಿರಾಕರಣೆ ಆಗಿತ್ತು. ಇದರಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಸಿರಾಜ್, ತಾನಿನ್ನು ಕುವೈಟ್ ದೇಶಕ್ಕೆ ಹೋಗಲು ಸಾಧ್ಯವಾಗಲ್ಲ ಎಂದು ಚಿಂತೆಗೆ ಒಳಗಾಗಿದ್ದರು. ಅಲ್ಲದೆ, ಕುವೈಟಿಗೆ ತೆರಳಿ ತೀರಿಸುತ್ತೇನೆಂದು ಸಾಲವನ್ನೂ ಮಾಡಿಕೊಂಡಿದ್ದರು ಎಂದು ಸಿರಾಜ್ ಕುಟುಂಬಸ್ಥರು ತಿಳಿಸಿದ್ದಾರೆ.
ಕುವೈಟಿಗೆ ಬೇಗ ಹೋಗಬೇಕೆಂದು ಎರಡೂ ಡೋಸನ್ನು ಆದಷ್ಟುವ ಬೇಗ ಪಡೆದಿದ್ದರು. ಆದರೆ, ಇತ್ತೀಚೆಗೆ ಕೋವ್ಯಾಕ್ಸಿನ್ ಲಸಿಕೆ ಕುವೈಟಿನಲ್ಲಿ ಮಾನ್ಯತೆ ಇಲ್ಲವೆಂದು ಗೊತ್ತಾಗಿತ್ತು. ಆನಂತರ ಸಿರಾಜ್ ತೀವ್ರ ಚಿಂತೆಗೆ ಒಳಗಾಗಿದ್ದರು ಎಂದು ಅವರ ಸೋದರ ನಾಸಿರ್ ಹೇಳಿದ್ದಾರೆ.
Unable to fly back to Kuwait from Maharashtra, a man of Indian origin allegedly hanged himself to death. The man was unable to return to Kuwait as the COVID-19 vaccine he had taken is not valid in the Gulf country. The 45-year-old man took his life at his residence in Mahad city in Raigad district.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm