ಬ್ರೇಕಿಂಗ್ ನ್ಯೂಸ್
27-06-21 01:36 pm Headline Karnataka News Network ದೇಶ - ವಿದೇಶ
ಶ್ರೀನಗರ್, ಜೂನ್ 27: ಜಮ್ಮು ವಿಮಾನ ನಿಲ್ದಾಣದಲ್ಲಿ ಕೇವಲ ಐದು ನಿಮಿಷಗಳ ಅಂತರದಲ್ಲಿ ಸಂಭವಿಸಿದ ಎರಡು ಸ್ಫೋಟಗಳ ಬೆನ್ನಲ್ಲೇ ಡ್ರೋನ್ ದಾಳಿ ಬಗ್ಗೆ ಭಾರತೀಯ ವಾಯು ಪಡೆ ಸಿಬ್ಬಂದಿ ತನಿಖೆ ಶುರು ಮಾಡಿದ್ದಾರೆ. ಎರಡು ಕಡಿಮೆ ತೀವ್ರತೆಯ ಸ್ಫೋಟ ಭಯೋತ್ಪಾದಕ ದಾಳಿಯೇ ಎಂಬ ಆಯಾಮದಲ್ಲಿ ರಕ್ಷಣಾ ಮತ್ತು ಭದ್ರತಾ ಕೇಂದ್ರದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಐದು ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಇಬ್ಬರು ಭಾರತೀಯ ಸೇನಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ರಾಷ್ಟ್ರೀಯ ಬಾಂಬ್ ದತ್ತಾಂಶ ಕೇಂದ್ರ ತಜ್ಞರು, ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ದೌಡಾಯಿಸಿದ್ದು, ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಭಾನುವಾರ ಬೆಳಗಿನ ಜಾವ 1.37ರ ಹೊತ್ತಿಗೆ ಮೊದಲ ಸ್ಫೋಟ ಸಂಭವಿಸಿದ್ದು, ಕಟ್ಟಡದ ತಾಂತ್ರಿಕ ವಿಭಾಗದಲ್ಲಿನ ಮೇಲ್ಛಾವಣಿಗೆ ಹಾನಿಯಾಗಿದೆ. ಬೆಳಗಿನ ಜಾವ 1.43ರ ಹೊತ್ತಿಗೆ ಒಂದೇ ಕಿಲೋ ಮೀಟರ್ ದೂರದಲ್ಲಿ ಇರುವ ಬಯಲು ಪ್ರದೇಶದಲ್ಲಿ ಎರಡನೇ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆದಿರುವ ಎರಡು ಸ್ಫೋಟಗಳ ಗಂಭೀರತೆಯನ್ನು ಅರಿತುಕೊಂಡು ಕೇಂದ್ರ ತನಿಖಾ ತಂಡವೇ ಪ್ರಕರಣದ ತನಿಖೆಗೆ ಮುಂದಾಗಿದೆ. 'ವಾಯು ಪಡೆ ಮುಖ್ಯಸ್ಥ ಏರ್ ಮಾರ್ಷಲ್ ಹೆಚ್.ಎಸ್ ಅರೋರಾ ಮತ್ತು ಏರ್ ಮಾರ್ಷಲ್ ವಿಕ್ರಮ್ ಸಿಂಗ್ ಜೊತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಚರ್ಚೆ ನಡೆಸಿದ್ದು, ಇಬ್ಬರು ಅಧಿಕಾರಿಗಳು ಘಟನೆ ನಡೆದ ಸ್ಥಳಕ್ಕೆ ತೆರಳಿದ್ದಾರೆ,' ಎಂದು ಸಚಿವಾಲಯವು ಸ್ಪಷ್ಟಪಡಿಸಿದೆ.
ಸತ್ವಾರಿ ಪ್ರದೇಶದ ಜಮ್ಮು ವಿಮಾನ ನಿಲ್ದಾಣದ ರನ್ ವೇ ಮತ್ತು ವಾಯು ಸಂಚಾರವನ್ನು ಭಾರತೀಯ ವಾಯು ಪಡೆ ನಿಯಂತ್ರಿಸುತ್ತಿದೆ. ಪ್ರಯಾಣಿಕರನ್ನು ಹೊಂದಿರುವ ವಿಮಾನಗಳ ಹಾರಾಟವನ್ನು ಸಹ ನಿರ್ವಹಿಸಲಾಗುತ್ತದೆ.
Two low intensity explosions were reported early Sunday morning in the technical area of Jammu Air Force Station. One caused minor damage to the roof of a building while the other exploded in an open area.
— Indian Air Force (@IAF_MCC) June 27, 2021
Two low intensity explosions were reported early Sunday morning in the technical area of Jammu Air Force Station. One caused minor damage to the roof of a building while the other exploded in an open area.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm