ಬ್ರೇಕಿಂಗ್ ನ್ಯೂಸ್
01-09-20 03:08 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 01: ನಿನ್ನೆ ಸಂಜೆ ಮೃತಪಟ್ಟಿದ್ದ ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪ್ರಣಬ್ ಮುಖರ್ಜಿ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ದೆಹಲಿಯ ಲೋಧಿ ರಸ್ತೆಯಲ್ಲಿರುವ ಚಿತಾಗಾರದಲ್ಲಿ ಅಭಿಜಿತ್ ಮುಖರ್ಜಿ ತಮ್ಮ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದರು. ಈ ವೇಳೆ ಸರ್ಕಾರಿ ಮತ್ತು ಮಿಲಿಟರಿ ಗೌರವಗಳನ್ನ ಅರ್ಪಿಸಲಾಯಿತು.
ಇದಕ್ಕೂ ಮುನ್ನ ರಾಜಾಜಿ ಮಾರ್ಗ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 9ರಿಂದ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಎಲ್ಲಾ ಪಕ್ಷಗಳ ಮುಖಂಡರು, ಕಾರ್ಯಕರ್ತರು ಅಂತಿಮ ದರ್ಶನ ಪಡೆದರು. ಈ ವೇಳೆ, ಮುಖಕ್ಕೆ ಮಾಸ್ಕ್, 6 ಅಡಿ ದೈಹಿಕ ಅಂತರ ಇತ್ಯಾದಿ ನಿಯಮಗಳ ಪಾಲನೆಯಾಗುವಂತೆ ಎಚ್ಚರ ವಿಸಲಾಗಿತ್ತು.



ಇದೇ ವೇಳೆ, ಕೇಂದ್ರ ಸರ್ಕಾರ 84 ವರ್ಷದ ಪ್ರಣಬ್ ಮುಖರ್ಜಿ ಅವರ ಸಾವಿಗೆ ಗೌರವ ಸೂಚಕವಾಗಿ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಸೆಪ್ಟೆಂಬರ್ 6ರವರೆಗೆ ದೇಶಾದ್ಯಂತ ರಾಷ್ಟ್ರಧ್ವಜ ಅರ್ಧಕ್ಕೆ ಹಾರಾಡುತ್ತದೆ. ಸರ್ಕಾರದಿಂದ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮ ಇರುವುದಿಲ್ಲ.
ಹಿರಿಯ ಕಾಂಗ್ರೆಸ್ ಮುಖಂಡರಾಗಿ, ಬಳಿಕ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದ ಪ್ರಣಬ್ ಮುಖರ್ಜಿ ಅವರು ವಿವಿಧ ಅನಾರೋಗ್ಯಗಳ ಕಾರಣದಿಂದ ಆಗಸ್ಟ್ 10ರಂದು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರಲ್ ಆಸ್ಪತ್ರೆಗೆ ದಾಖಲಅಗಿದ್ದರು. ಅವರ ಮಿದುಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರ ಅವರು ಕೋಮಾಗೆ ಜಾರಿದರು. ಕೋವಿಡ್-19 ಸೋಂಕು ಕೂಡ ತಗುಲಿ ಅವರ ಅನಾರೋಗ್ಯ ಇನ್ನಷ್ಟು ಬಿಗಡಾಯಿಸಿತು. ಶ್ವಾಸಕೋಶದ ಸೋಂಕಿನಿಂದ ಸೆಪ್ಟಿಕ್ ಶಾಕ್ ಆಗಿ ಅವರು ಸೋಮವಾರ ಸಂಜೆ 4:30ಕ್ಕೆ ಕೊನೆಯುಸಿರೆಳೆದರು.
ರಾಷ್ಟ್ರಪತಿಗಳಾಗುವ ಮುನ್ನ ಏಳು ಬಾರಿ ಸಂಸದರಾಗಿದ್ದ ಪ್ರಣಬ್ ಮುಖರ್ಜಿ ಅವರು ಹಲವು ಪ್ರಮುಖ ಖಾತೆಗಳನ್ನ ನಿಭಾಯಿಸಿದ್ದಾರೆ. ಹಣಕಾಸು ಖಾತೆ, ವಿದೇಶಾಂಗ ವ್ಯವಹಾರಗಳ ಖಾತೆ, ರಕ್ಷಣಾ ಖಾತೆಗಳನ್ನ ಅವರು ಸಮರ್ಥವಾಗಿ ನಿರ್ವಹಿಸಿದ್ದಾರೆ. ಅನೇಕ ಬಾರಿ ಅವರು ಪ್ರಧಾನಿ ಸ್ಥಾನಕ್ಕೂ ಪರಿಗಣಿತರಾಗಿದ್ದವರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm