ಬ್ರೇಕಿಂಗ್ ನ್ಯೂಸ್
30-06-21 11:15 am Headline Karnataka News Network ದೇಶ - ವಿದೇಶ
ಥೈಲ್ಯಾಂಡ್, ಜೂನ್ 30: ಪ್ರೇಮಿಗಳ ನಡುವೆ ಬ್ರೇಕ್ ಅಪ್ ಆದಾಗ ಮನಸ್ಸಿಗೆ ಆಘಾತವಾಗುವುದು ಸಹಜ. ಕೆಲವೊಮ್ಮೆ ಅನಿವಾರ್ಯ ಕಾರಣಗಳಿಗಾಗಿ ಬ್ರೇಕ್ ಅಪ್ ಆಗುತ್ತದೆ. ಕೆಲವರು ಎಲ್ಲವನ್ನೂ ಮರೆತು ಹೊಸ ಜೀವನ ಆರಂಭಿಸುತ್ತಾರೆ.
ಇನ್ನು ಕೆಲವರು ತಮ್ಮ ಮಾಜಿ ಪ್ರೇಮಿಗಳ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಾರೆ. ಹೀಗೆ ಸೇಡು ತೀರಿಸಿಕೊಳ್ಳಲು ಮುಂದಾಗುವವರು ತಾವು ಸಂಕಷ್ಟಕ್ಕೆ ಸಿಲುಕುವುದರ ಜೊತೆಗೆ ಇತರರಿಗೂ ಸಂಕಷ್ಟವನ್ನು ತಂದಿಡುತ್ತಾರೆ. ಇತ್ತೀಚಿಗೆ ಇದೇ ರೀತಿಯ ಘಟನೆಯೊಂದು ಥೈಲ್ಯಾಂಡ್ನಲ್ಲಿ ನಡೆದಿದೆ.
ಥೈಲ್ಯಾಂಡ್ನ 36 ವರ್ಷದ ಮಹಿಳೆ ಹಾಗೂ ಪುರುಷನೊಬ್ಬ ಪರಸ್ಪರ ಪ್ರೀತಿಸುತ್ತಿದ್ದರು. ಈ ಇಬ್ಬರ ನಡುವೆ ಆಗಾಗ ಸಣ್ಣ ಪುಟ್ಟ ಕಾರಣಗಳಿಗಾಗಿ ಜಗಳವಾಗುತ್ತಿತ್ತು. ಇತ್ತೀಚಿಗೆ ಆತ ಆಕೆಯಿಂದ ದೂರವಾಗುವ ಮಾತನಾಡಿದ್ದಾನೆ.
ತಮ್ಮಿಬ್ಬರ ನಡುವೆ ಹೊಂದಾಣಿಕೆಯಾಗುತ್ತಿಲ್ಲವಾದ್ದರಿಂದ ದೂರಾಗುವುದು ಒಳಿತು ಎಂದು ಆತ ಹೇಳಿದ್ದಾನೆ. ಮಹಿಳೆ ಆತನ ಮನವೊಲಿಸಲು ಸಾಕಷ್ಟು ಪ್ರಯತ್ನ ಪಟ್ಟರೂ ಆತನ ಮನ ಕರಗಿಲ್ಲ.

ಇದರಿಂದ ಆಕ್ರೋಶಗೊಂಡ ಆಕೆ ಆತನ ಮೇಲೆ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾಳೆ. ಆತ ಕೆಲಸ ಮಾಡುವ ಶಾಲೆಯ ಬಳಿ ತೆರಳಿದ್ದಾಳೆ. ಅಲ್ಲಿಂದ ಪಾರ್ಕಿಂಗ್ ಪ್ರದೇಶಕ್ಕೆ ಹೋಗಿದ್ದಾಳೆ.
ಅಲ್ಲಿ ನಿಲ್ಲಿಸಿದ್ದ ಆತನ ಬೈಕಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಒಂದು ಮಿಲಿಯನ್ ಬಹ್ತ್ ಅಂದರೆ ರೂ.28 ಲಕ್ಷ ರೂಪಾಯಿ ಮೌಲ್ಯದ ಈ ಟ್ರಯಂಫ್ ಬೈಕ್ ಅನ್ನು ಆಕೆ ಆತನಿಗೆ ಉಡುಗೊರೆಯಾಗಿ ನೀಡಿದ್ದಳು ಎಂಬುದು ವಿಶೇಷ.
ಬೈಕಿಗೆ ಬೆಂಕಿ ಹಚ್ಚಿದ ನಂತರ ಆಕೆ ಸ್ಥಳದಿಂದ ಹೊರಟು ಹೊರಗೆ ನಿಲ್ಲಿಸಿದ್ದ ಕಾರಿನಲ್ಲಿ ಪರಾರಿಯಾಗಿದ್ದಾಳೆ. ಈ ದೃಶ್ಯಗಳೆಲ್ಲವೂ ಪಾರ್ಕಿಂಗ್ ಪ್ರದೇಶದಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಈ ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲವಾದರೂ ಆ ಬೈಕಿನ ಸಮೀಪದಲ್ಲಿ ನಿಲ್ಲಿಸಿದ್ದ ಇತರ ಆರು ವಾಹನಗಳು ಬೆಂಕಿಯಿಂದ ಹಾನಿಗೀಡಾಗಿವೆ. ಪಾರ್ಕಿಂಗ್ ಪ್ರದೇಶದಲ್ಲಿ ಉಳಿದ ವಾಹನಗಳನ್ನು ಪರಸ್ಪರ ಹತ್ತಿರ ನಿಲ್ಲಿಸಲಾಗಿದ್ದ ಕಾರಣಕ್ಕೆ ಅವುಗಳಿಗೂ ಬೆಂಕಿ ತಗುಲಿದೆ.
ಬೈಕಿನ ಮೇಲೆ ಹೆಚ್ಚು ಪೆಟ್ರೋಲ್ ಸುರಿದು ಬೈಕಿನ ಹತ್ತಿರ ಹೋಗಿದ್ದ ಕಾರಣ ಆಕೆಗೂ ಬೆಂಕಿ ತಗುಲುವ ಸಾಧ್ಯತೆಗಳಿದ್ದವು. ಆದರೆ ಅಷ್ಟರಲ್ಲಿ ಆಕೆ ಪಾರಾಗಿದ್ದಾಳೆ. ಸಿಸಿಟಿವಿಯಲ್ಲಿದ್ದ ಮುಂದಿನ ದೃಶ್ಯದಲ್ಲಿ ಆ ಮಹಿಳೆ ಕೆಂಪು ಬಣ್ಣದ ಕಾರಿನಲ್ಲಿ ಪರಾರಿಯಾಗುವುದನ್ನು ಕಾಣಬಹುದು.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ದೊಡ್ಡ ಅನಾಹುತವಾಗುವುದನ್ನು ತಪ್ಪಿಸಿದ್ದಾರೆ. ಈ ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
A woman in Thailand set his ex-boyfriend's bike on fire to take revenge on him. CCTV footage of the incident has gone viral on social media.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm