ಬ್ರೇಕಿಂಗ್ ನ್ಯೂಸ್
01-09-20 04:54 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ , ಸೆಪ್ಟೆಂಬರ್ 1: ದೇಶದ ಮೊಟ್ಟಮೊದಲ ಹೃದಯ ರೋಗ ತಜ್ಞೆಯಾಗಿದ್ದ ಪದ್ಮಾವತಿ ಅಯ್ಯರ್ ತಮ್ಮ 103ನೇ ವಯಸ್ಸಿನಲ್ಲಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಮ್ಯಾನ್ಮಾರ್ನಲ್ಲಿ ಜನಿಸಿದ ಪದ್ಮಾವತಿ, ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಜಪಾನ್ ಸೇನೆ ದಾಳಿ ನಡೆಸಿದ ಕಾರಣಕ್ಕೆ ಭಾರತಕ್ಕೆ ಬಂದು ನೆಲೆಸಿದ್ದರು. ದೇಶದ ಪ್ರಪ್ರಥಮ ಮಹಿಳಾ ಹೃದ್ರೋಗ ತಜ್ಞೆ ಎಂಬ ಖ್ಯಾತಿಗೆ ಇವರು ಪಾತ್ರರಾಗಿದ್ದರು.
ಹನ್ನೊಂದು ದಿನಗಳ ಹಿಂದೆ ಕೋವಿಡ್-19 ಸೋಂಕು ಕಂಡುಬಂದ ಇವರನ್ನು ದೆಹಲಿಯ ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ (ಎನ್ಎಚ್ಐ)ಗೆ ದಾಖಲಿಸಲಾಗಿತ್ತು. 1981ರಲ್ಲಿ ಈ ಸಂಸ್ಥೆಯನ್ನು ಸ್ವತಃ ಇವರೇ ಆರಂಭಿಸಿದ್ದರು.
ಕಳೆದ ಐದು ವರ್ಷಗಳಿಂದ ವ್ಹೀಲ್ಚೇರ್ ನೆರವಿನಲ್ಲಿ ಆಚೀಚೆ ಹೋಗುತ್ತಿದ್ದರೂ, ಮಾನಸಿಕವಾಗಿ ಸ್ಥಿರತೆ ಕಾಯ್ದುಕೊಂಡಿದ್ದರು. ಹೃದಯ ರೋಗದ ಬಗ್ಗೆ, ತಾವು ಸ್ಥಾಪಿಸಿದ ಹಾರ್ಟ್ ಇನ್ಸ್ಟಿಟ್ಯೂಟ್ ಬಗ್ಗೆ ಸ್ಪಷ್ಟ ಮಾಹಿತಿಗಳು ಅವರಲ್ಲಿದ್ದವು ಎಂದು ಎನ್ಎಚ್ಐ ಸಿಇಓ ಡಾ.ಓ.ಪಿ. ಯಾದವ್ ಹೇಳಿದ್ದಾರೆ.
"ಹೃದ್ರೋಗಶಾಸ್ತ್ರದ ಅಜ್ಜಿ" ಎಂದೇ ಗುರುತಿಸಲ್ಪಟ್ಟಿದ್ದ ಪದ್ಮಾವತಿ ಅಯ್ಯರ್, ಸೋಂಕಿಗೆ ಹೃದಯ ಕವಾಟ ಹಾನಿಗೀಡಾಗುವ ರುಮೇಟಿಕ್ ಹೃದ್ರೋಗ ಕ್ಷೇತ್ರದಲ್ಲಿ ಆಳವಾದ ಅಧ್ಯಯನ ಕೈಗೊಂಡಿದ್ದರು. ರಂಗೂಲ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದ ಪದ್ಮಾವತಿ, ಸ್ಟಾಕ್ಹೋಂನ ಸೋದೆರ್ಶ್ಚೂಸೆಟ್ ಆಸ್ಪತ್ರೆ, ಅಮೆರಿಕದ ಜಾನ್ ಹಾಕಿನ್ಸ್ ಮತ್ತು ಹಾರ್ವಡ್ ಮೆಡಿಕಲ್ ಸ್ಕೂಲ್ನಲ್ಲಿ ತರಬೇತಿ ಪಡೆದಿದ್ದರು. ಇವರು ಲಂಡನ್ನ ರಾಯಲ್ ಕಾಲೇಜ್ ಆಫ್ ಫಿಸೀಶಿಯನ್ಸ್ನ ಫೆಲೋ ಕೂಡ ಆಗಿದ್ದರು. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮವಿಭೂಷಣ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am