ಬ್ರೇಕಿಂಗ್ ನ್ಯೂಸ್
03-07-21 05:12 pm Headline Karnataka News Network ದೇಶ - ವಿದೇಶ
ಮುಂಬೈ, ಜುಲೈ 3 : ನಿರಾಶ್ರಿತರು, ಭಿಕ್ಷುಕರೂ ದುಡಿಯಬೇಕು. ಅವರಿಗೆ ಆಹಾರ, ನೀರು ಸೇರಿದಂತೆ ಎಲ್ಲ ಸೌಲಭ್ಯಗಳನ್ನು ರಾಜ್ಯ ಸರ್ಕಾರ ಪುಕ್ಕಟೆಯಾಗಿ ಪೂರೈಸಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ನಿರಾಶ್ರಿತರು, ಭಿಕ್ಷುಕರ ಸಮಸ್ಯೆಗಳಿಗೆ ಸಂಬಂಧಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ, ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಜಿ.ಎಸ್.ಕುಲಕರ್ಣಿ ಅವರ ವಿಭಾಗೀಯ ಪೀಠ ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದೆ.
ನಿರಾಶ್ರಿತರು ಮತ್ತು ಭಿಕ್ಷುಕರಿಗೆ ಪ್ರತಿ ದಿನ ಮೂರು ಹೊತ್ತು ಪೌಷ್ಟಿಕಾಂಶಯುಕ್ತ ಆಹಾರ, ಕುಡಿಯುವ ನೀರು, ವಸತಿ ನೀಡಬೇಕು. ಜತೆಗೆ, ಸಾರ್ವಜನಿಕ ಶೌಚಾಲಯಗಳ ಉಚಿತ ಬಳಕೆಗೆ ಅನುಮತಿ ನೀಡುವಂತೆ ಬೃಹನ್ ಮುಂಬೈ ಮಹಾನಗರ ಪಾಲಿಕೆಗೆ (ಬಿಎಂಸಿ) ನಿರ್ದೇಶಿಸುವಂತೆ ಕೋರಿ ಬ್ರಿಜೇಶ್ ಆರ್ಯ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಬಗ್ಗೆ ಬಿಎಂಸಿ ಕೋರ್ಟಿಗೆ ಹೇಳಿಕೆ ನೀಡಿ, ಸ್ವಯಂಸೇವಾ ಸಂಸ್ಥೆಗಳ ನೆರವಿನಿಂದ ಮುಂಬೈ ಮಹಾನಗರದಲ್ಲಿರುವ ಈ ವರ್ಗದ ಜನರಿಗೆ ಆಹಾರ ಪೊಟ್ಟಣಗಳನ್ನು ವಿತರಿಸಿದ್ದೇವೆ. ಜೊತೆಗೆ ಈ ವರ್ಗದ ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್ಗಳನ್ನೂ ವಿತರಿಸಲಾಗಿದೆ ಎಂದು ತಿಳಿಸಿತ್ತು.
ಈ ವಿಚಾರದಲ್ಲಿ ತೀರ್ಪು ಪ್ರಕಟಿಸಿದ ನ್ಯಾಯಪೀಠ, ಇಂಥ ವರ್ಗದವರಿಗೆ ಆಹಾರ ಪೂರೈಕೆ ಹೆಚ್ಚಿಸುವುದು ಸೇರಿದಂತೆ ಯಾವುದೇ ವಿಷಯದಲ್ಲೂ ನಿರ್ದೇಶನ ನೀಡುವ ಅಗತ್ಯವಿಲ್ಲ. ಎಲ್ಲರೂ ಕೆಲಸ ಮಾಡುತ್ತಿದ್ದಾರೆ. ಹಾಗೆಯೇ ನಿರಾಶ್ರಿತರು (ಮನೆ ಇಲ್ಲದವರು) ಕೂಡ ದೇಶಕ್ಕಾಗಿ ಕೆಲಸ ಮಾಡಬೇಕು. ಎಲ್ಲವನ್ನೂ ರಾಜ್ಯ ಸರ್ಕಾರ ಪೂರೈಸಬೇಕು ಎಂದು ಬಯಸುವುದು ಸರಿಯಲ್ಲ. ಇಂಥ ಮನವಿ ಸಲ್ಲಿಸುವ ಮೂಲಕ, ನೀವು (ಅರ್ಜಿದಾರರು) ಸಮಾಜದಲ್ಲಿ ಇಂಥ ವರ್ಗದ ಜನರ ಸಂಖ್ಯೆಯನ್ನು ಹೆಚ್ಚಿಸುತ್ತಿದ್ದೀರಿ ಎಂದು ಹೇಳಿದೆ.
ಇದೇ ವೇಳೆ 'ಅರ್ಜಿಯಲ್ಲಿರುವ ಎಲ್ಲ ಬೇಡಿಕೆಗಳಿಗೂ ಒಪ್ಪಿಗೆ ನೀಡಿದರೆ, ಜನರಿಗೆ ಕೆಲಸ ಮಾಡಬೇಡಿ ಎಂದು ಹೇಳಿದಂತಾಗುವುದಿಲ್ಲವೇ‘ ಎಂದು ನ್ಯಾಯಪೀಠ ಅರ್ಜಿದಾರರನ್ನೇ ಪ್ರಶ್ನಿಸಿತು.
The Bombay High Court on Saturday said that homeless persons and beggars should also work for the country as everything cannot be provided to them by the State.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm