ಬ್ರೇಕಿಂಗ್ ನ್ಯೂಸ್
07-07-21 03:39 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 7: ಪ್ರಧಾನಿ ಮೋದಿ ಕೊನೆಗೂ ಸಂಪುಟಕ್ಕೆ ಸರ್ಜರಿ ಮಾಡಿದ್ದಾರೆ. ಹಿರಿಯ ಸಚಿವರಾದ ಡಿ.ವಿ.ಸದಾನಂದ ಗೌಡ, ಆರೋಗ್ಯ ಸಚಿವ ಡಾ.ಹರ್ಷವರ್ಧನ್, ರಮೇಶ್ ಪೋಖ್ರಿಯಾಲ್, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಸೇರಿ ಹತ್ತು ಮಂದಿಯನ್ನು ಸಂಪುಟದಿಂದ ಕೈಬಿಡಲಾಗಿದೆ. ಇದೇ ವೇಳೆ, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಸೇರಿ ನಾಲ್ವರಿಗೆ ಕೇಂದ್ರ ಸಚಿವ ಸ್ಥಾನ ನೀಡಲಾಗಿದೆ.
ಈ ವರ್ಷ ಎದುರಾಗಲಿರುವ ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟಕ್ಕೆ ಸರ್ಜರಿ ಮಾಡಲಾಗುತ್ತಿದ್ದು ಹಳಬರನ್ನು ತೆಗೆದು ಹೊಸಬರಿಗೆ ಮಣೆ ನೀಡಲಾಗಿದೆ. ಇದರಲ್ಲಿ ಕರ್ನಾಟಕದಲ್ಲಿ ನಾಲ್ವರಿಗೆ ಸಚಿವ ಸ್ಥಾನ ಸಿಕ್ಕಿರುವುದು ವಿಶೇಷ.
ಕರ್ನಾಟಕದಲ್ಲಿ 25 ಬಿಜೆಪಿ ಸಂಸದರಿದ್ದರೂ ಮೋದಿ ಸಂಪುಟದಲ್ಲಿ ಇಬ್ಬರಿಗೆ ಮಾತ್ರ ಸ್ಥಾನ ನೀಡಲಾಗಿತ್ತು. ಈ ಕೊರತೆ ನೀಗಿಸಲು ಈ ಬಾರಿ ಪ್ರಯತ್ನ ಮಾಡಲಾಗಿದ್ದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ಚಿತ್ರದುರ್ಗ ಸಂಸದ ಎ.ನಾರಾಯಣ ಸ್ವಾಮಿ, ಬೀದರಿನ ಭಗವಂತ ಖೂಬಾ ಹಾಗೂ ರಾಜ್ಯಸಭಾ ಸದಸ್ಯ ರಾಜೀವ ಚಂದ್ರಶೇಖರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಿದ್ದಾರೆ ಎನ್ನುವ ಮಾಹಿತಿಯಿದೆ.
ಇನ್ನುಳಿದಂತೆ, ಬಹುತೇಕ ಯುವ ಸಂಸದರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಲಿಂಗಾಯತ ಕೋಟಾದಿಂದ ಸಚಿವರಾಗಿದ್ದ ಸುರೇಶ ಅಂಗಡಿ ನಿಧನವಾಗಿದ್ದರಿಂದ ಅವರ ಸ್ಥಾನ ತುಂಬಲು ಲಿಂಗಾಯತರೇ ಆಗಿರುವ ಭಗವಂತ ಖೂಬಾರನ್ನು ಆಯ್ಕೆ ಮಾಡಲಾಗಿದೆ.
ಗೌಡ ಜನಾಂಗದಿಂದ ಸದಾನಂದ ಗೌಡರ ಬದಲಿಗೆ ಅದೇ ಸಮುದಾಯದ ಶೋಭಾ ಕರಂದ್ಲಾಜೆಗೆ ಸ್ಥಾನ ನೀಡಲಾಗಿದೆ. ಹಿಂದುಳಿದ ವರ್ಗದಿಂದ ನಾರಾಯಣ ಸ್ವಾಮಿ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಸಚಿವ ಸ್ಥಾನದಲ್ಲಿ ನಿರೀಕ್ಷಿತ ಸಾಧನೆ ಮಾಡದವರನ್ನು ಕೈಬಿಡಲಾಗಿದೆ ಎನ್ನುವ ಮಾಹಿತಿ ಇದೆ. ದೇಶದಲ್ಲಿ ಒಟ್ಟು 43 ಸಂಸದರಿಗೆ ಸಚಿವ ಸ್ಥಾನ ನೀಡಲಾಗಿದೆ. 28 ಸ್ಥಾನಗಳು ಖಾಲಿಯಿದ್ದವು. ಅದನ್ನು ಭರ್ತಿ ಮಾಡಲು ಮೋದಿ ಕಸರತ್ತು ನಡೆಸಿದ್ದಾರೆ. ಇಂದು ಸಂಜೆ ಆರು ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Union Chemicals and Fertilizers Minister DV Sadananda Gowda on Wednesday resigned from the Union Council of Ministers. Gowda confirmed his decision to step down. Besides being the chemicals and fertilizers minister in the Narendra Modi government, Gowda has also held portfolios like Railways, Law, Statistics, and Programme Implementation.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 09:23 pm
Mangaluru staff
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm