ಬ್ರೇಕಿಂಗ್ ನ್ಯೂಸ್
08-07-21 10:15 pm Mangaluru Correspondent ದೇಶ - ವಿದೇಶ
ಚೆನ್ನೈ, ಜುಲೈ 8: ಕರ್ನಾಟಕದ ಮಾಜಿ ಐಎಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಎಲ್.ಮುರುಗನ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಆ ಜಾಗಕ್ಕೆ ಅಣ್ಣಾಮಲೈ ಅವರನ್ನು ಆಯ್ಕೆ ಮಾಡಲಾಗಿದೆ.
ಬುಧವಾರ ಮುರುಗನ್ ಸಚಿವ ಸ್ಥಾನಕ್ಕೇರುವುದು ಖಚಿತವಾಗುತ್ತಲೇ ತಮಿಳುನಾಡಿನಲ್ಲಿ ಅಣ್ಣಾಮಲೈ ಹೆಸರು ಕೂಡ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಅಣ್ಣಾಮಲೈಗೂ ಸಚಿವ ಸ್ಥಾನ ಸಿಗಲಿ ಎಂದು ಕೆಲವರು ಹಾರೈಸಿದ್ದರೆ, ಇನ್ನು ಕೆಲವರು ಬಿಜೆಪಿ ಘಟಕದ ರಾಜ್ಯಾಧ್ಯಕ್ಷರಾಗಲಿ ಎಂದು ಹಾರೈಸಿದ್ದರು. ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಣ್ಣಾಮಲೈ ಅವರನ್ನು ಆಯ್ಕೆ ಮಾಡಿ ಆದೇಶ ಮಾಡಿದ್ದಾರೆ.
ಅಣ್ಣಾಮಲೈ ಅಥವಾ ಕೆ.ಟಿ. ರಾಘವನ್ ರಾಜ್ಯ ಘಟಕದ ಅಧ್ಯಕ್ಷರಾಗುತ್ತಾರೆ ಎಂಬ ವದಂತಿ ಹರಡಿತ್ತು. ಅಭಿಮಾನಿಗಳ ಆಶಯದಂತೆ ಅಣ್ಣಾಮಲೈ ಅವರನ್ನೇ ಆಯ್ಕೆ ಮಾಡಲಾಗಿದೆ.
ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಅಣ್ಣಾಮಲೈಗೆ ಅರವಕುರುಚಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿತ್ತು. ರಾಜ್ಯದ ಬಿಜೆಪಿ ಉಸ್ತುವಾರಿ ಸಿ. ಟಿ. ರವಿ ಸೇರಿದಂತೆ ಹಲವು ನಾಯಕರು ಅಣ್ಣಾಮಲೈ ಪರವಾಗಿ ಪ್ರಚಾರ ನಡೆಸಿದ್ದರು. ಅಣ್ಣಾಮಲೈ 68 ಸಾವಿರ ಮತಗಳನ್ನು ಪಡೆದು ಸೋಲು ಕಂಡಿದ್ದರು.
"ಅರವಕುರುಚಿ ಕ್ಷೇತ್ರದಲ್ಲಿ 68,000 ಮತಗಳನ್ನು ನೀಡಿದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಬಿಜೆಪಿ ಜೊತೆಗೆ ಎಂದಿಗೂ ಇರುತ್ತೇನೆ" ಎಂದು ಸೋಲಿನ ಬಳಿಕ ಟ್ವೀಟ್ನಲ್ಲಿ ಅಣ್ಣಾಮಲೈ ತಿಳಿಸಿದ್ದರು.
ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ ಅವರು 2019ರ ಮೇ 28ರಂದು ಐಜಿ- ಡಿಜಿಪಿ ಹಿರಿಯ ಅಧಿಕಾರಿಗಳಿಗೆ ರಾಜೀನಾಮೆ ಪತ್ರ ಕಳಿಸಿ ಐಪಿಎಸ್ ಹುದ್ದೆ ತೊರೆದಿದ್ದರು. 2011ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ ಅವರು ಕಾರ್ಕಳ, ಚಿಕ್ಕಮಗಳೂರು ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದರು.ann
The BJP on Thursday appointed K Annamalai as its Tamil Nadu state unit president in place of L Murugan, who took charge as the Minister of State for Fisheries, Animal Husbandry and Dairying.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm