ಬ್ರೇಕಿಂಗ್ ನ್ಯೂಸ್
02-09-20 07:15 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್. 2: ತೆಲಂಗಾಣ ಮೂಲದ ವ್ಯಕ್ತಿ ಪಾಸ್ಪೋರ್ಟ್ ಇಲ್ಲದೆಯೇ 16 ವರ್ಷಗಳ ಬಳಿಕ ದುಬೈನಿಂದ ವಾಪಾಸ್ಸಾಗಿದ್ದು, ಕಳೆದ 16 ವರ್ಷಗಳಲ್ಲಿ ದುಬೈನಲ್ಲಿ ಸಿಲುಕಿಕೊಂಡಿದ್ದ ಅವರಿಗೆ 29 ಲಕ್ಷ ರೂ ನಷ್ಟು ದಂಡ ವಿಧಿಸಲಾಗಿತ್ತು.
ನೀಲ ಯಲ್ಲಯ್ಯ ಚಿಂತಮಾನಪಳ್ಳಿಯವರು, 2004ರಲ್ಲಿ ಕೆಲಸಕ್ಕೆಂದು ದುಬೈಗೆ ಹೋಗಿದ್ದರು. ಬಳಿಕ ಕೆಲವು ಸನ್ನಿವೇಶಗಳು ಅವರನ್ನು ಅಲ್ಲಿಯೇ ಉಳಿದುಕೊಳ್ಳುವಂತೆ ಮಾಡಿತು. ಜೈನ್ ಸೇವಾ ಮಿಷನ್ ಸ್ವಯಂಸೇವಕರಾದ ರೂಪೇಶ್ ಮೆಹ್ತಾ ಎಂಬುವವರು ಅವರಿಗೆ ಸಹಾಯ ಮಾಡಿದ್ದು, ದುಬೈನಲ್ಲಿರುವ ಭಾರತೀಯ ಕೌನ್ಸುಲೇಟ್ನಲ್ಲಿ ತಾತ್ಕಾಲಿಕ ಪಾಸ್ಪೋರ್ಟ್ ಪಡೆದು ಅವರನ್ನು ಕರೆತರಲಾಗಿದೆ.
ಯಲ್ಲಯ್ಯ ಅವರ ಪತ್ನಿ ಒತ್ತಾಯದ ಮೇರೆಗೆ ಹೈದರಾಬಾದ್ ಕಚೇರಿಯಲ್ಲಿ ಹಳೆಯ ಪಾಸ್ಪೋರ್ಟ್ ಪಡೆಯಲಾಯಿತು. ಅವರಿಗೆ ಉಚಿತ ವಿಮಾನ ಟಿಕೆಟ್ ನೀಡಿ ಕರೆಸಿಕೊಳ್ಳಲಾಯಿತು.ಅವರ ವೀಸಾ ಅವಧಿ ಮುಗಿದು ಕೂಡ ಅಲ್ಲಿಯೇ ಇದ್ದ ಕಾರಣ ನಿತ್ಯ 500 ರೂ.ನಷ್ಟು ಇಲ್ಲಿಯವರೆಗೆ 29 ಲಕ್ಷದಷ್ಟು ದಂಡ ವಿಧಿಸಲಾಗಿತ್ತು. ದುಬೈ ಸರ್ಕಾರ ಆ ದಂಡವನ್ನು ಮನ್ನಾ ಮಾಡಿದೆ.
ಅವರು ಸೋಮವಾರ ಸಂಜೆ ತೆಲಂಗಾಣವನ್ನು ತಲುಪಿದ್ದು, ಸದ್ಯ ಹೋಂ ಕ್ವಾರಂಟೈನ್ನಲ್ಲಿರಲು ಅವಕಾಶ ಮಾಡಿಕೊಡಲಾಗಿದೆ. ಯಲ್ಲಯ್ಯ ಅವರು ದುಬೈಗೆ ಹೊರಡುವ ಸಂದರ್ಭದಲ್ಲಿ ಮಗಳು ಇನ್ನೂ ಚಿಕ್ಕವಳು. ಈಗ ಆಕೆ ಒಂದು ಮಗುವಿನ ತಾಯಿಯಾಗಿದ್ದಾಳೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm