ಬ್ರೇಕಿಂಗ್ ನ್ಯೂಸ್
10-07-21 02:52 pm Headline Karnataka News Network ದೇಶ - ವಿದೇಶ
ಮಧ್ಯಪ್ರದೇಶ, ಜುಲೈ 10: ಮದುವೆಯಾಗುತ್ತಿಲ್ಲ ಎಂಬ ಖಿನ್ನತೆಯಲ್ಲಿದ್ದ ಮಹಿಳಾ ಸಬ್ಇನ್ಸ್ಪೆಕ್ಟರ್ವೋರ್ವಳು ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ರತಲಾಮ್ನಲ್ಲಿ ನಡೆದಿದೆ.
ಸಾವನ್ನಪ್ಪಿರುವ ಸಬ್ ಇನ್ಸ್ಪೆಕ್ಟರ್ 35 ವರ್ಷದ ಕವಿತಾ ಸೋಲಂಕಿ ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ರಜೆಯಿಂದ ಮನೆಗೆ ಬಂದಿದ್ದ ಪೊಲೀಸ್ ಅಧಿಕಾರಿ ಖಿನ್ನತೆಗೊಳಗಾಗಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದರ ಪ್ರಕಾರ ಮದುವೆಯಾಗದ ಕಾರಣದಿಂದಾಗಿ ಖಿನ್ನತೆಗೊಳಗಾಗಿದ್ದಳು ಎಂದು ತಿಳಿದು ಬಂದಿದೆ. ಜತೆಗೆ ಸಂಬಂಧಿಕರು ಮೇಲಿಂದ ಮೇಲೆ ಮದುವೆ ವಿಚಾರವಾಗಿ ಪ್ರಶ್ನೆ ಮಾಡುತ್ತಿದ್ದರು ಎನ್ನಲಾಗಿದೆ.

ಕವಿತಾ ಸೋಲಂಕಿ, ಮಧ್ಯಪ್ರದೇಶದ ರಾತಲಾಮ್ ಸ್ಟೇಷನ್ ರೋಡ್ನ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಹಾಯವಾಣಿ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಮೇಲೆ ತೆರಳಿದ್ದ ಕವಿತಾ ಕೆಲ ದಿನ ಪೋಷಕರೊಂದಿಗೆ ಕಾಲ ಕಳೆದ ನಿನ್ನೆ ರತಲಾಮ್ಗೆ ವಾಪಸ್ ಆಗಿದ್ದರು.
ಪೊಲೀಸ್ ಇಲಾಖೆ ನೀಡಿದ್ದ ಕ್ವಾರ್ಟಸ್ನಲ್ಲಿ ಉಳಿದುಕೊಂಡಾಗ ವಿಷ ಸೇವಿಸಿದ್ದಾರೆ. ಇದರ ಬಗ್ಗೆ ಸಹದ್ಯೋಗಿಗೆ ಗೊತ್ತಾಗುತ್ತಿದ್ದಂತೆ ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ತಿವಾರಿ, ವಯಸ್ಸಾಗಿದ್ದರಿಂದ ಮದುವೆಯಾಗಿರಲಿಲ್ಲ. ಹೀಗಾಗಿ ಬೇಸರಗೊಂಡಿದ್ದರು. ಜತೆಗೆ ಮದುವೆ ಬಗ್ಗೆ ಜನರು ಪ್ರಶ್ನೆ ಮಾಡ್ತಿದ್ದರಿಂದ ಖಿನ್ನತೆಗೊಳಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
A 35-year- old woman sub-inspector (SI) allegedly committed suicide by consuming a poisonous substance in Ratlam district, police said on Thursday.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm