ಬ್ರೇಕಿಂಗ್ ನ್ಯೂಸ್
12-07-21 05:25 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 12: ಸೂರ್ಯನಿಂದ ಪ್ರಬಲ ಸೌರಗಾಳಿ ಬಿಡುಗಡೆಯಾಗಿದ್ದು, ಇನ್ನೆರಡು ದಿನ (ಮಂಗಳವಾರ, ಬುಧವಾರ) ಇದರ ಪರಿಣಾಮ ಭೂಮಿಯ ಮೇಲಾಗಲಿದೆ. ಪ್ರಬಲ ಸೌರಗಾಳಿ ಅಪ್ಪಳಿಸುವ ಕಾರಣ ಭೂಮಿಯ ಕಾಂತಶಕ್ತಿಯ ಮೇಲೆ ಪರಿಣಾಮ ಬೀರಲಿದ್ದು, ಇನ್ನೆರಡು ದಿನಗಳಲ್ಲಿ ಭೂಮಿಯ ಉತ್ತರ ಪ್ರದೇಶಗಳಲ್ಲಿ ಇದರ ಎಫೆಕ್ಟ್ ಕಾಣಿಸಿಕೊಳ್ಳಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಸೌರ ಜ್ವಾಲೆಯಿಂದಾಗಿ ಭೂಮಿಯ ಕಾಂತಕ್ಷೇತ್ರಕ್ಕೆ ಪರಿಣಾಮ ಎದುರಾಗಲಿದೆ. ಇದರಿಂದ ಪ್ರಮುಖವಾಗಿ ಭೂಮಿಯಿಂದ ನೇರ ಸಂಪರ್ಕ ಹೊಂದಿರುವ ಸ್ಯಾಟಲೈಟ್ ಆಪರೇಟಿಂಗ್ ಸಿಸ್ಟಂಗೆ ಪೆಟ್ಟು ಬೀಳಲಿದೆ. ಜಿಪಿಎಸ್ ನೇವಿಗೇಶನ್, ಮೊಬೈಲ್ ಫೋನ್ ಸಿಗ್ನಲ್, ಸ್ಯಾಟಲೈಟ್ ಟಿವಿ, ವಿದ್ಯುತ್ ಗ್ರಿಡ್ ಗಳಲ್ಲಿ ವೈಪರೀತ್ಯ ಕಾಣಿಸಿಕೊಳ್ಳಲಿದೆ ಎನ್ನಲಾಗುತ್ತಿದೆ. ಅಲ್ಲದೆ, ಭೂಮಿಯ ಕಾಂತಕ್ಷೇತ್ರದ ವ್ಯಾಪ್ತಿಯಲ್ಲಿ ಭಾರೀ ವೇಗದಲ್ಲಿ ಗಾಳಿ ಬೀಸಲಿದ್ದು, ಬಿರುಗಾಳಿ ರೂಪ ಪಡೆಯುವ ಸಾಧ್ಯತೆಯಿದೆ ಎಂದಿದ್ದಾರೆ.
ಪ್ರಬಲ ಸೌರ ಗಾಳಿಯಿಂದಾಗಿ ಅಂತರಿಕ್ಷದಲ್ಲಿ ಜಿಯೋ ಮ್ಯಾಗ್ನಿಟಿಕ್ ಸ್ಟಾರ್ಮ್ (ಕಾಂತ ಮಾರುತ) ಉಂಟಾಗಲಿದ್ದು, ಇದು ಭೂಮಿಯ ಕಾಂತ ಶಕ್ತಿಯ ಮೇಲೆ ಪ್ರಭಾವ ಬೀರಲಿದೆ ಎನ್ನಲಾಗಿದೆ. ಅಂತರಿಕ್ಷದಲ್ಲಿ ಸೂರ್ಯನ ಜ್ವಾಲೆಯಿಂದಾಗಿ ಅಪಾರ ವಿದ್ಯುತ್ ಅಯಸ್ಕಾಂತೀಯ ಶಕ್ತಿ ಮತ್ತು ಪ್ಲಾಸ್ಮಾ ಉತ್ಪತ್ತಿಯಾಗಲಿದ್ದು, ಇದರ ಪರಿಣಾಮ ಕಾಂತಶಕ್ತಿ ಪ್ರೇರಕಗೊಂಡು ಸೌರ ಬಿರುಗಾಳಿ ಏಳಲಿದೆ. ಇದು ಭೂಮಿಯ ಅಯಸ್ಕಾಂತ ಪ್ರಭಾ ವಲಯಕ್ಕೆ ಧಕ್ಕೆ ಮಾಡಲಿದೆ ಎಂದು ವಿಜ್ಞಾನಿಗಳು ವಿಶ್ಲೇಷಿಸಿದ್ದಾರೆ.


ಏನಿದು ಸೌರಜ್ವಾಲೆ, ಸೌರ ಬಿರುಗಾಳಿ ?
ಸೂರ್ಯನಲ್ಲಿ ಅಡಕವಾಗಿರುವ ಅಪಾರ ಪ್ರಮಾಣದ ದ್ರವ್ಯರಾಶಿ ಒಮ್ಮೆಲೇ ಸ್ಫೋಟಗೊಂಡು ಈ ರೀತಿಯ ಸೌರ ಬಿರುಗಾಳಿ ಏಳುತ್ತದೆ. ಇದರಲ್ಲಿ ಅಪಾರ ಪ್ರಮಾಣದ ಕಾಂತಶಕ್ತಿಯ ಬಲ ಮತ್ತು ರೇಡಿಯೇಶನ್ ಕೂಡ ಏಕಕಾಲದಲ್ಲಿ ಬಿಡುಗಡೆಯಾಗುತ್ತದೆ. ಎಕ್ಸ್ ರೇ ಮತ್ತು ಗಾಮಾ ಕಿರಣಗಳ ಜೊತೆಗೆ ವಿಭಿನ್ನ ರೀತಿಯ ವಿಕಿರಣಗಳು ಹೊರ ಸೂಸಲಿದ್ದು ಇದು ಸೌರ ಮಂಡಲಕ್ಕೆ ಬಿಡುಗಡೆಯಾಗಿ ಬೇರೆ ಬೇರೆ ರೀತಿಯ ಪರಿಣಾಮಕ್ಕೆ ಕಾರಣವಾಗಲಿದೆ.
ಈ ರೀತಿಯ ಸೌರಜ್ವಾಲೆ ಸೂರ್ಯನಿಂದ ಕೆಲವೊಮ್ಮೆ ಬಿಡುಗಡೆಯಾಗುತ್ತಿದ್ದು ವಿಜ್ಞಾನಿಗಳು ಇದರ ಪರಿಣಾಮದ ಬಗ್ಗೆ ಅಧ್ಯಯನ ಮಾಡುತ್ತಿದ್ದಾರೆ. ಇಸ್ರೋ ವಿಜ್ಞಾನಿಗಳು ಇತ್ತೀಚೆಗೆ ಸೂರ್ಯನಿಂದ ಬಿಡುಗಡೆಯಾಗಿರುವ ನೂರು ರೀತಿಯ ಸೌರಜ್ವಾಲೆಯನ್ನು ಗುರುತಿಸಿದ್ದಾರೆ.
The massive solar flare is expected to hit satellites operating in the Earth’s upper atmosphere, impact GPS navigation, mobile phone signal, and satellite TV.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm