ಬ್ರೇಕಿಂಗ್ ನ್ಯೂಸ್
13-07-21 02:50 pm Headline Karnataka News Network ದೇಶ - ವಿದೇಶ
ಜೈಪುರ, ಜುಲೈ 13: ಧರ್ಮವನ್ನು ಹೊರತುಪಡಿಸಿ ಭಾರತೀಯರೆಲ್ಲರ ಡಿಎನ್ಎ ಒಂದೇ. ಆಚರಣೆಯ ಆಧಾರದಲ್ಲಿ ಅವರನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದನ್ನು ಆಕ್ಷೇಪಿಸಿ ಪ್ರತಿಕ್ರಿಯೆ ನೀಡಿರುವ ವಿಶ್ವ ಹಿಂದು ಪರಿಷತ್ ನಾಯಕಿ ಸಾಧ್ವಿ ಪ್ರಾಚಿ, ಗೋಮಾಂಸ ತಿನ್ನುವವರ ಡಿಎನ್ಎ ಹಿಂದೂಗಳಲ್ಲಿ ಎಂದಿಗೂ ಕಂಡುಬರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ರಾಜಸ್ಥಾನದ ದೌಸಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಧ್ವಿ , ಎಲ್ಲ ಭಾರತೀಯರು ಒಂದೇ ಡಿಎನ್ಎ ಹಂಚಿಕೊಂಡಿರಬಹುದು. ಆದರೆ, ಗೋಮಾಂಸ ತಿನ್ನುವವರ ಡಿಎನ್ಎ ನಮ್ಮವರ ನಡುವೆ ಕಂಡುಬರಲು ಸಾಧ್ಯವಿಲ್ಲ ಎಂದಿದ್ದಾರೆ.

ಇದೇ ವೇಳೆ ಸಾಧ್ವಿ ಜನಸಂಖ್ಯೆ ನಿಯಂತ್ರಣ ಕ್ರಮಕ್ಕೂ ಒತ್ತಾಯಿಸಿದ್ದಾರೆ. 'ದೇಶದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಕಾನೂನು ಜಾರಿಯಾಗಬೇಕು. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಂದ ಮತ ಚಲಾಯಿಸುವ ಹಕ್ಕೂ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಹಿಂಪಡೆಯ ಬೇಕು' ಎಂದು ಆಗ್ರಹಿಸಿದ್ದಾರೆ.
'ನೀವು ಎಷ್ಟು ಪತ್ನಿಯರನ್ನು ಹೊಂದಿದ್ದೀರಿ ಎಂಬುದು ಮುಖ್ಯವಲ್ಲ, ಆದರೆ, ಇಬ್ಬರೇ ಮಕ್ಕಳಿರಬೇಕು ಎಂದು ಸಾಧ್ವಿ ಹೇಳಿದ್ದಾರೆ. ಲವ್ ಜಿಹಾದ್ ಬಗ್ಗೆಯೂ ಮಾತನಾಡಿದ ಅವರು, 'ರಾಜಸ್ಥಾನದಲ್ಲಿ ಪ್ರೇಮದ ಹೆಸರಿನಲ್ಲಿ ಲವ್ ಜಿಹಾದ್ ಮಾಡಲಾಗುತ್ತಿದ್ದು, ಹೆಣ್ಣು ಮಕ್ಕಳನ್ನು ಮೋಸ ಹಾಗೂ ಮತಾಂತರ ಮಾಡಲಾಗುತ್ತಿದೆ' ಎಂದು ಆರೋಪಿಸಿದ್ದಾರೆ.
'ಮತ ರಾಜಕೀಯವನ್ನು ಪಕ್ಕಕ್ಕಿಡಿ ಮತ್ತು ಹಿಂದು ಹೆಣ್ಣು ಮಕ್ಕಳ ರಕ್ಷಣೆಯತ್ತ ಗಮನಹರಿಸಿ' ಎನ್ನುವ ಮೂಲಕ ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
Vishwa Hindu Parishad (VHP) leader Sadhvi Prachi is often in news for making statements. In a recent development, she has replied to Rashtriya Swayamsevak Sangh (RSS) chief Mohan Bhagwat's recent remark on DNA.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm