ಬ್ರೇಕಿಂಗ್ ನ್ಯೂಸ್
13-07-21 02:50 pm Headline Karnataka News Network ದೇಶ - ವಿದೇಶ
ಜೈಪುರ, ಜುಲೈ 13: ಧರ್ಮವನ್ನು ಹೊರತುಪಡಿಸಿ ಭಾರತೀಯರೆಲ್ಲರ ಡಿಎನ್ಎ ಒಂದೇ. ಆಚರಣೆಯ ಆಧಾರದಲ್ಲಿ ಅವರನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದನ್ನು ಆಕ್ಷೇಪಿಸಿ ಪ್ರತಿಕ್ರಿಯೆ ನೀಡಿರುವ ವಿಶ್ವ ಹಿಂದು ಪರಿಷತ್ ನಾಯಕಿ ಸಾಧ್ವಿ ಪ್ರಾಚಿ, ಗೋಮಾಂಸ ತಿನ್ನುವವರ ಡಿಎನ್ಎ ಹಿಂದೂಗಳಲ್ಲಿ ಎಂದಿಗೂ ಕಂಡುಬರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ರಾಜಸ್ಥಾನದ ದೌಸಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಧ್ವಿ , ಎಲ್ಲ ಭಾರತೀಯರು ಒಂದೇ ಡಿಎನ್ಎ ಹಂಚಿಕೊಂಡಿರಬಹುದು. ಆದರೆ, ಗೋಮಾಂಸ ತಿನ್ನುವವರ ಡಿಎನ್ಎ ನಮ್ಮವರ ನಡುವೆ ಕಂಡುಬರಲು ಸಾಧ್ಯವಿಲ್ಲ ಎಂದಿದ್ದಾರೆ.

ಇದೇ ವೇಳೆ ಸಾಧ್ವಿ ಜನಸಂಖ್ಯೆ ನಿಯಂತ್ರಣ ಕ್ರಮಕ್ಕೂ ಒತ್ತಾಯಿಸಿದ್ದಾರೆ. 'ದೇಶದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಕಾನೂನು ಜಾರಿಯಾಗಬೇಕು. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಂದ ಮತ ಚಲಾಯಿಸುವ ಹಕ್ಕೂ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಹಿಂಪಡೆಯ ಬೇಕು' ಎಂದು ಆಗ್ರಹಿಸಿದ್ದಾರೆ.
'ನೀವು ಎಷ್ಟು ಪತ್ನಿಯರನ್ನು ಹೊಂದಿದ್ದೀರಿ ಎಂಬುದು ಮುಖ್ಯವಲ್ಲ, ಆದರೆ, ಇಬ್ಬರೇ ಮಕ್ಕಳಿರಬೇಕು ಎಂದು ಸಾಧ್ವಿ ಹೇಳಿದ್ದಾರೆ. ಲವ್ ಜಿಹಾದ್ ಬಗ್ಗೆಯೂ ಮಾತನಾಡಿದ ಅವರು, 'ರಾಜಸ್ಥಾನದಲ್ಲಿ ಪ್ರೇಮದ ಹೆಸರಿನಲ್ಲಿ ಲವ್ ಜಿಹಾದ್ ಮಾಡಲಾಗುತ್ತಿದ್ದು, ಹೆಣ್ಣು ಮಕ್ಕಳನ್ನು ಮೋಸ ಹಾಗೂ ಮತಾಂತರ ಮಾಡಲಾಗುತ್ತಿದೆ' ಎಂದು ಆರೋಪಿಸಿದ್ದಾರೆ.
'ಮತ ರಾಜಕೀಯವನ್ನು ಪಕ್ಕಕ್ಕಿಡಿ ಮತ್ತು ಹಿಂದು ಹೆಣ್ಣು ಮಕ್ಕಳ ರಕ್ಷಣೆಯತ್ತ ಗಮನಹರಿಸಿ' ಎನ್ನುವ ಮೂಲಕ ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
Vishwa Hindu Parishad (VHP) leader Sadhvi Prachi is often in news for making statements. In a recent development, she has replied to Rashtriya Swayamsevak Sangh (RSS) chief Mohan Bhagwat's recent remark on DNA.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 07:57 pm
HK News Staffer
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm