ಬ್ರೇಕಿಂಗ್ ನ್ಯೂಸ್
03-09-20 04:56 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್ 3: ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದಕ್ಕಾಗಿ ತೆಲಂಗಾಣದ ಬಿಜೆಪಿ ಶಾಸಕನೊಬ್ಬನ ಫೇಸ್ಬುಕ್ ಖಾತೆಯನ್ನು ಫೇಸ್ಬುಕ್ ಕಂಪೆನಿಯೇ ಬ್ಯಾನ್ ಮಾಡಿದೆ. ತೆಲಂಗಾಣ ರಾಜ್ಯದ ಏಕೈಕ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ವಿರುದ್ಧ ಫೇಸ್ಬುಕ್ ನಿಂದಲೇ ಬ್ಯಾನ್ ಮಾಡೋದಾಗಿ ಹೇಳಿದೆ. ಇದೇ ವೇಳೆ, ಇನ್ ಸ್ಟಾ ಗ್ರಾಮ್ ಕೂಡ ರಾಜಾ ಸಿಂಗ್ ಮೇಲೆ ನಿಷೇಧ ಹಾಕಿದೆ.
ರಾಜಾ ಸಿಂಗ್ ಅವರನ್ನು ನಾವು ಫೇಸ್ಬುಕ್ ಬಳಕೆಯಿಂದ ಹೊರಗಿಡುತ್ತಿದ್ದೇವೆ. ಅವರು ನಮ್ಮ ಫೇಸ್ಬುಕ್ ನಿಯಮವನ್ನು ಉಲ್ಲಂಘಿಸಿ, ಹಿಂಸೆ, ಪ್ರಚೋದನೆಗೆ ಕಾರಣವಾಗುವ ಅಂಶಗಳನ್ನು ಪೋಸ್ಟ್ ಮಾಡುತ್ತಿದ್ದರು. ಅದಕ್ಕೆ ಫೇಸ್ಬುಕ್ ವೇದಿಕೆ ಆಗಬಾರದೆಂಬ ನೆಲೆಯಲ್ಲಿ ಅವರನ್ನು ಫೇಸ್ಬುಕ್ಕಿಂದ ನಿಷೇಧ ವಿಧಿಸುತ್ತಿದ್ದೇವೆ ಎಂದು ಫೇಸ್ಬುಕ್ ಹೇಳಿಕೆಯಲ್ಲಿ ತಿಳಿಸಿದೆ.
ಇದೇ ವೇಳೆ, ರಾಜಾ ಸಿಂಗ್ ಹೇಳಿಕೆಯ ವಿಡಿಯೋ ಬಿಡುಗಡೆ ಮಾಡಿದ್ದು ನಾನು 2019ರಿಂದಲೇ ಫೇಸ್ಬುಕ್ ಬಳಕೆ ಮಾಡುತ್ತಿಲ್ಲ. 2018ರಲ್ಲಿ ನನ್ನ ಖಾತೆ ಹ್ಯಾಕ್ ಆಗಿತ್ತು. ಈ ಬಗ್ಗೆ ಪೊಲೀಸ್ ದೂರು ದಾಖಲಿಸಿದ್ದೆ. ಈಗ ಮತ್ತೆ ಹೊಸ ಖಾತೆ ತೆರೆಯಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮೊನ್ನೆ ಸೆಪ್ಟೆಂಬರ್ 1ರಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ ಬರ್ಗ್ ಗೆ ಭಾರತದಲ್ಲಿ ಫೇಸ್ಬುಕ್ ರಾಜಕೀಯಕ್ಕೆ ಬಳಕೆಯಾಗುತ್ತಿರುವ ಬಗ್ಗೆ ಪತ್ರ ಬರೆದಿದ್ದರು. ಪತ್ರ ಬರೆದ ಎರಡೇ ದಿನದಲ್ಲಿ ಫೇಸ್ಬುಕ್ ಬಿಜೆಪಿ ಶಾಸಕನನ್ನೇ ಫೇಸ್ಬುಕ್ಕಿಂದ ಬ್ಯಾನ್ ಮಾಡಿದ್ದು ಕಾಕತಾಳೀಯ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm