ಬ್ರೇಕಿಂಗ್ ನ್ಯೂಸ್
03-09-20 04:56 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್ 3: ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದಕ್ಕಾಗಿ ತೆಲಂಗಾಣದ ಬಿಜೆಪಿ ಶಾಸಕನೊಬ್ಬನ ಫೇಸ್ಬುಕ್ ಖಾತೆಯನ್ನು ಫೇಸ್ಬುಕ್ ಕಂಪೆನಿಯೇ ಬ್ಯಾನ್ ಮಾಡಿದೆ. ತೆಲಂಗಾಣ ರಾಜ್ಯದ ಏಕೈಕ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ವಿರುದ್ಧ ಫೇಸ್ಬುಕ್ ನಿಂದಲೇ ಬ್ಯಾನ್ ಮಾಡೋದಾಗಿ ಹೇಳಿದೆ. ಇದೇ ವೇಳೆ, ಇನ್ ಸ್ಟಾ ಗ್ರಾಮ್ ಕೂಡ ರಾಜಾ ಸಿಂಗ್ ಮೇಲೆ ನಿಷೇಧ ಹಾಕಿದೆ.
ರಾಜಾ ಸಿಂಗ್ ಅವರನ್ನು ನಾವು ಫೇಸ್ಬುಕ್ ಬಳಕೆಯಿಂದ ಹೊರಗಿಡುತ್ತಿದ್ದೇವೆ. ಅವರು ನಮ್ಮ ಫೇಸ್ಬುಕ್ ನಿಯಮವನ್ನು ಉಲ್ಲಂಘಿಸಿ, ಹಿಂಸೆ, ಪ್ರಚೋದನೆಗೆ ಕಾರಣವಾಗುವ ಅಂಶಗಳನ್ನು ಪೋಸ್ಟ್ ಮಾಡುತ್ತಿದ್ದರು. ಅದಕ್ಕೆ ಫೇಸ್ಬುಕ್ ವೇದಿಕೆ ಆಗಬಾರದೆಂಬ ನೆಲೆಯಲ್ಲಿ ಅವರನ್ನು ಫೇಸ್ಬುಕ್ಕಿಂದ ನಿಷೇಧ ವಿಧಿಸುತ್ತಿದ್ದೇವೆ ಎಂದು ಫೇಸ್ಬುಕ್ ಹೇಳಿಕೆಯಲ್ಲಿ ತಿಳಿಸಿದೆ.
ಇದೇ ವೇಳೆ, ರಾಜಾ ಸಿಂಗ್ ಹೇಳಿಕೆಯ ವಿಡಿಯೋ ಬಿಡುಗಡೆ ಮಾಡಿದ್ದು ನಾನು 2019ರಿಂದಲೇ ಫೇಸ್ಬುಕ್ ಬಳಕೆ ಮಾಡುತ್ತಿಲ್ಲ. 2018ರಲ್ಲಿ ನನ್ನ ಖಾತೆ ಹ್ಯಾಕ್ ಆಗಿತ್ತು. ಈ ಬಗ್ಗೆ ಪೊಲೀಸ್ ದೂರು ದಾಖಲಿಸಿದ್ದೆ. ಈಗ ಮತ್ತೆ ಹೊಸ ಖಾತೆ ತೆರೆಯಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮೊನ್ನೆ ಸೆಪ್ಟೆಂಬರ್ 1ರಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ ಬರ್ಗ್ ಗೆ ಭಾರತದಲ್ಲಿ ಫೇಸ್ಬುಕ್ ರಾಜಕೀಯಕ್ಕೆ ಬಳಕೆಯಾಗುತ್ತಿರುವ ಬಗ್ಗೆ ಪತ್ರ ಬರೆದಿದ್ದರು. ಪತ್ರ ಬರೆದ ಎರಡೇ ದಿನದಲ್ಲಿ ಫೇಸ್ಬುಕ್ ಬಿಜೆಪಿ ಶಾಸಕನನ್ನೇ ಫೇಸ್ಬುಕ್ಕಿಂದ ಬ್ಯಾನ್ ಮಾಡಿದ್ದು ಕಾಕತಾಳೀಯ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm