ಬ್ರೇಕಿಂಗ್ ನ್ಯೂಸ್
22-07-21 11:27 am Headline Karnataka News Network ದೇಶ - ವಿದೇಶ
ಆಂಧ್ರಪ್ರದೇಶ, ಜುಲೈ 22: ಕೋವಿಡ್ನಿಂದ ಅದೇಷ್ಟೋ ಜನರು ತಮ್ಮ ಸಂಬಂಧಿಗಳು, ತಂದೆ-ತಾಯಿ ಕಳೆದುಕೊಂಡು ಸಂಕಷ್ಟಕ್ಕಿಡಾಗಿದ್ದಾರೆ. ಆದರೆ ಇಲ್ಲೊಬ್ಬ ಪ್ರೇಮಿ ತನ್ನ ಪ್ರಿಯತಮೆ ಕೋವಿಡ್ನಿಂದ ಮೃತಪಟ್ಟಿದ್ದಾಳೆಂದು ಆತ್ಮಹತ್ಯೆಗೆ ಶರಾಣಗಿರುವ ಘಟನೆ ಇಲ್ಲಿನ ಗಾಜುವಾಕ ಕಣಿತಿ ನಗರದಲ್ಲಿ ನಡೆದಿದೆ.
ಹೌದು, ತಾನು ಇಷ್ಟಪಟ್ಟಿದ್ದ ಯುವತಿ ಕೋವಿಡ್ ಸೊಂಕಿನಿಂದಾಗಿ ಕಳೆದ ಮೂರು ದಿನಗಳ ಹಿಂದೆ ಗುಂಟೂರಿನಲ್ಲಿ ಮೃತಪಟ್ಟಿದ್ದಾಳೆ. ಈ ವಿಷಯವನ್ನು ಜೀರ್ಣಿಸಿಕೊಳ್ಳದ ರೋಹಿತ್ ಕುಮಾರ್ (25) ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪರವಾಡ ತಾಲೂಕಿನ ದೇಶಪಾತ್ರುನಿಪಾಲೇ ಗ್ರಾಮದ ನಿವಾಸಿ ದಟ್ಟಿ ಕೃಷ್ಣಾರಾವು, ಶಾಂತಿ ದಂಪತಿ ಮಗ ರೋಹಿತ್ ಕುಮಾರ್ ಇಂಟರ್ ಮೀಡಿಯೆಟ್ ವರೆಗೆ ವ್ಯಾಸಂಗ ಮುಗಿಸಿದ್ದಾರೆ. ಹೋಟೆಲ್ ಆನ್ಲೈನ್ ಪಾರ್ಸಲ್ ಸರ್ವಿಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆರು ಸ್ನೇಹಿತರೊಡನೆ ಸೇರಿ ರೋಹಿತ್ ಕಣಿತಿ ರಸ್ತೆ ನಗರದಲ್ಲಿ ವಾಸಿಸುತ್ತಿದ್ದನು. ಮಧ್ಯಾಹ್ನದವರೆಗೆ ಪಾರ್ಸಲ್ ನೀಡಿ ಬಂದಿದ್ದಾರೆ. ಮಧ್ಯಾಹ್ನ 2.30ರ ಸಮಯಕ್ಕೆ ನೇರ ರೂಂಗೆ ತೆರಳಿ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಜೆ ಸ್ನೇಹಿತರೆಲ್ಲರೂ ಕಾರ್ಯ ಮುಗಿಸಿಕೊಂಡು ರೂಂಗೆ ಬಂದಾಗ ರೋಹಿತ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಈ ಸಂಗತಿಯನ್ನು ಮೃತ ರೋಹಿತ್ ಪೋಷಕರಿಗೆ ತಿಳಿಸಿದರು.
ಅನಕಾಪಲ್ಲಿಯ ಯುವತಿಯನ್ನು ರೋಹಿತ್ ಪ್ರೀತಿಸುತ್ತಿದ್ದನು. ಕಳೆದ ಮೂರು ದಿನಗಳ ಹಿಂದೆ ಆಕೆ ಕೋವಿಡ್ನಿಂದ ಮೃತಪಟ್ಟಿದ್ದಾಳೆ. ಬೇರೆ ಯುವತಿಯೊಂದಿಗೆ ಮದುವೆ ಮಾಡುವುದಾಗಿ ಹೇಳಿದ್ದೇವೆ. ಆದ್ರೆ ಇದನ್ನೇ ನೆನಪು ಮಾಡಿಕೊಂಡು ರೋಹಿತ್ ತನ್ನ ಪ್ರಾಣ ಕಳೆದುಕೊಳ್ಳುತ್ತಾನೆ ಎಂದು ತಿಳಿದಿರಲಿಲ್ಲ ಅಂತಾ ಮೃತ ರೋಹಿತ್ ತಂದೆ ಕೃಷ್ಣರಾವು ಕಣ್ಣೀರು ಹಾಕಿದ್ದಾರೆ.
ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಮೃತ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ರವಾನಿಸಿದರು. ಈ ಘಟನೆ ಕುರಿತು ಗಾಜುವಾಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm