ಬ್ರೇಕಿಂಗ್ ನ್ಯೂಸ್
22-07-21 11:27 am Headline Karnataka News Network ದೇಶ - ವಿದೇಶ
ಆಂಧ್ರಪ್ರದೇಶ, ಜುಲೈ 22: ಕೋವಿಡ್ನಿಂದ ಅದೇಷ್ಟೋ ಜನರು ತಮ್ಮ ಸಂಬಂಧಿಗಳು, ತಂದೆ-ತಾಯಿ ಕಳೆದುಕೊಂಡು ಸಂಕಷ್ಟಕ್ಕಿಡಾಗಿದ್ದಾರೆ. ಆದರೆ ಇಲ್ಲೊಬ್ಬ ಪ್ರೇಮಿ ತನ್ನ ಪ್ರಿಯತಮೆ ಕೋವಿಡ್ನಿಂದ ಮೃತಪಟ್ಟಿದ್ದಾಳೆಂದು ಆತ್ಮಹತ್ಯೆಗೆ ಶರಾಣಗಿರುವ ಘಟನೆ ಇಲ್ಲಿನ ಗಾಜುವಾಕ ಕಣಿತಿ ನಗರದಲ್ಲಿ ನಡೆದಿದೆ.
ಹೌದು, ತಾನು ಇಷ್ಟಪಟ್ಟಿದ್ದ ಯುವತಿ ಕೋವಿಡ್ ಸೊಂಕಿನಿಂದಾಗಿ ಕಳೆದ ಮೂರು ದಿನಗಳ ಹಿಂದೆ ಗುಂಟೂರಿನಲ್ಲಿ ಮೃತಪಟ್ಟಿದ್ದಾಳೆ. ಈ ವಿಷಯವನ್ನು ಜೀರ್ಣಿಸಿಕೊಳ್ಳದ ರೋಹಿತ್ ಕುಮಾರ್ (25) ಆತ್ಮಹತ್ಯೆಗೆ ಶರಣಾಗಿದ್ದಾನೆ.
ಪರವಾಡ ತಾಲೂಕಿನ ದೇಶಪಾತ್ರುನಿಪಾಲೇ ಗ್ರಾಮದ ನಿವಾಸಿ ದಟ್ಟಿ ಕೃಷ್ಣಾರಾವು, ಶಾಂತಿ ದಂಪತಿ ಮಗ ರೋಹಿತ್ ಕುಮಾರ್ ಇಂಟರ್ ಮೀಡಿಯೆಟ್ ವರೆಗೆ ವ್ಯಾಸಂಗ ಮುಗಿಸಿದ್ದಾರೆ. ಹೋಟೆಲ್ ಆನ್ಲೈನ್ ಪಾರ್ಸಲ್ ಸರ್ವಿಸ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆರು ಸ್ನೇಹಿತರೊಡನೆ ಸೇರಿ ರೋಹಿತ್ ಕಣಿತಿ ರಸ್ತೆ ನಗರದಲ್ಲಿ ವಾಸಿಸುತ್ತಿದ್ದನು. ಮಧ್ಯಾಹ್ನದವರೆಗೆ ಪಾರ್ಸಲ್ ನೀಡಿ ಬಂದಿದ್ದಾರೆ. ಮಧ್ಯಾಹ್ನ 2.30ರ ಸಮಯಕ್ಕೆ ನೇರ ರೂಂಗೆ ತೆರಳಿ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಜೆ ಸ್ನೇಹಿತರೆಲ್ಲರೂ ಕಾರ್ಯ ಮುಗಿಸಿಕೊಂಡು ರೂಂಗೆ ಬಂದಾಗ ರೋಹಿತ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಈ ಸಂಗತಿಯನ್ನು ಮೃತ ರೋಹಿತ್ ಪೋಷಕರಿಗೆ ತಿಳಿಸಿದರು.
ಅನಕಾಪಲ್ಲಿಯ ಯುವತಿಯನ್ನು ರೋಹಿತ್ ಪ್ರೀತಿಸುತ್ತಿದ್ದನು. ಕಳೆದ ಮೂರು ದಿನಗಳ ಹಿಂದೆ ಆಕೆ ಕೋವಿಡ್ನಿಂದ ಮೃತಪಟ್ಟಿದ್ದಾಳೆ. ಬೇರೆ ಯುವತಿಯೊಂದಿಗೆ ಮದುವೆ ಮಾಡುವುದಾಗಿ ಹೇಳಿದ್ದೇವೆ. ಆದ್ರೆ ಇದನ್ನೇ ನೆನಪು ಮಾಡಿಕೊಂಡು ರೋಹಿತ್ ತನ್ನ ಪ್ರಾಣ ಕಳೆದುಕೊಳ್ಳುತ್ತಾನೆ ಎಂದು ತಿಳಿದಿರಲಿಲ್ಲ ಅಂತಾ ಮೃತ ರೋಹಿತ್ ತಂದೆ ಕೃಷ್ಣರಾವು ಕಣ್ಣೀರು ಹಾಕಿದ್ದಾರೆ.
ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಮೃತ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ರವಾನಿಸಿದರು. ಈ ಘಟನೆ ಕುರಿತು ಗಾಜುವಾಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm