ಬ್ರೇಕಿಂಗ್ ನ್ಯೂಸ್
04-09-20 10:16 am Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್.3: ಚೀನಾ ಮೂಲದ ಪಬ್ ಜಿ ವಿಡಿಯೋ ಗೇಮ್ ಏಪ್ ಭಾರತದಲ್ಲಿ ನಿಷೇಧ ಆಗಿದ್ದು ಜಾಗತಿಕ ಷೇರು ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದೆ. ಪಬ್ ಜಿ ವಿಡಿಯೋ ಗೇಮ್ ಆವಿಷ್ಕರಿಸಿದ್ದ ಸೌತ್ ಕೊರಿಯಾ, ಆಬಳಿಕ ಅದನ್ನು ಟೆನ್ಸೆಂಟ್ ಕಂಪನಿಗೆ ಮಾರಿತ್ತು. ಈಗ ಅತಿ ಹೆಚ್ಚು ಗ್ರಾಹಕರನ್ನು ಹೊಂದಿದ್ದ ಭಾರತದಲ್ಲಿ ಪಬ್ ಜಿ ನಿಷೇಧ ಆಗಿದ್ದರಿಂದ ಕಂಪನಿಯ ಷೇರು ಮೌಲ್ಯ ಒಂದೇ ದಿನ ಇಳಿಕೆಯಾಗಿದ್ದು, ಇದರಿಂದ ಕಂಪನಿಗೆ ಒಂದೇ ದಿನದಲ್ಲಿ 14 ಬಿಲಿಯನ್ ಡಾಲರ್ ನಷ್ಟ ಆಗಿದ್ದಾಗಿ ಹೇಳಲಾಗುತ್ತಿದೆ.
ಪಬ್ ಜಿ ಏಪ್ ಗಳಿಗೆ ಭಾರತದಲ್ಲಿ ಅತಿ ಹೆಚ್ಚು ಗ್ರಾಹಕರಿದ್ದರು. ಅಂದಾಜು ಪ್ರಕಾರ, 20 ಕೋಟಿಗೂ ಹೆಚ್ಚು ಗ್ರಾಹಕರನ್ನು ಭಾರತ ಒಂದರಲ್ಲೇ ಪಬ್ ಜಿ ಹೊಂದಿತ್ತು ಎನ್ನಲಾಗುತ್ತಿದೆ. ಹೀಗಾಗಿ ಪಬ್ ಜಿ ಬ್ಯಾನ್ ಈಗಲೇ ಅನುಷ್ಠಾನಕ್ಕೆ ಬಂದಿರದಿದ್ದರೂ, ಭಾರತ ಸರಕಾರ ನಿಷೇಧ ವಿಧಿಸಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದೆ. ಇದರಿಂದಾಗಿ ಟೆನ್ಸೆಂಟ್ ಕಂಪನಿಯ ಷೇರುಗಳನ್ನು ಗ್ರಾಹಕರು ಮಾರತೊಡಗಿದ್ದಾರೆ. ಇದರಿಂದಾಗಿ ಕಂಪೆನಿಯ ಷೇರು ಮೌಲ್ಯ ಎರಡು ಶೇ. ಇಳಿಕೆಯಾಗಿದ್ದಲ್ಲದೆ, ಇದರಿಂದ ಕಂಪನಿಗೆ ಭಾರೀ ನಷ್ಟ ಆಗಿದ್ದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಚೀನಾ ಜೊತೆಗಿನ ಗಡಿ ಸಂಘರ್ಷದ ಬಳಿಕ ಭಾರತದಲ್ಲಿ ಮೊದಲಿಗೆ ಟಿಕ್ ಟಾಕ್, ಯುಸಿ ಬ್ರೌಸರ್ ಸೇರಿದಂತೆ 59 ಜನಪ್ರಿಯ ಏಪ್ ಗಳನ್ನು ನಿಷೇಧಿಸಲಾಗಿತ್ತು. ಎರಡನೇ ಲಿಸ್ಟ್ ನಲ್ಲಿ ಮತ್ತೆ 63 ಏಪ್ ನಿಷೇಧ ಆದಾಗಲೂ ಪಬ್ ಜಿ ನಿಷೇಧಿತ ಪಟ್ಟಿಯಲ್ಲಿ ಇಲ್ಲದೇ ಇದ್ದುದು ಕಂಪೆನಿಗೆ ಇನ್ನೇನು ಸಮಸ್ಯೆ ಇರಲ್ಲ ಎಂದುಕೊಂಡಿತ್ತು. ಈಗ ಮೂರನೇ ಪಟ್ಟಿಯಲ್ಲಿ 118 ಏಪ್ ಲಿಸ್ಟ್ ಮಾಡಿದ್ದು, ಅದರಲ್ಲಿ ಪಬ್ ಜಿಯನ್ನು ಸೇರಿಸಿದ್ದು ಚೀನಾಕ್ಕೆ ದುಬಾರಿಯಾಗಿ ಪರಿಣಮಿಸಿದೆ. ಚೀನಾ ವಿರುದ್ಧ ಭಾರತ ನಡೆಸುತ್ತಿರುವ ಡಿಜಿಟಲ್ ಸ್ಟ್ರೈಕ್ ನಿಂದಾಗಿ ಅಲ್ಲಿನ ಬಹುತೇಕ ಇಲೆಕ್ಟ್ರಾನಿಕ್ ಮತ್ತು ಸಾಫ್ಟ್ ವೇರ್ ಕಂಪನಿಗಳು ತತ್ತರಿಸಿ ಹೋಗಿವೆ. ಇದರಿಂದಾಗಿ ಅಲ್ಲಿನ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ವಿರುದ್ಧ ಕಂಪನಿಗಳು ಬಹಿರಂಗವಾಗೇ ಕಿಡಿಕಾರ ತೊಡಗಿವೆ
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm