ಬ್ರೇಕಿಂಗ್ ನ್ಯೂಸ್
23-07-21 09:59 pm Headline Karnataka News Network ದೇಶ - ವಿದೇಶ
ಬಾಲಾಸೋರ್, ಜುಲೈ 23: ಒಡಿಶಾ ರಾಜ್ಯದ ಬಾಲಾಸೋರ್ ಜಿಲ್ಲೆಯಲ್ಲಿ ಪೊಲೀಸರು ಮತ್ತು ಅಬಕಾರಿ ದಳ ಜಂಟಿ ಕಾರ್ಯಾಚರಣೆ ನಡೆಸಿದ್ದು ವಿವಿಧ ಕಡೆ ಅಕ್ರಮ ಸಾರಾಯಿ ಘಟಕಗಳನ್ನು ಪತ್ತೆ ಮಾಡಿದ್ದಾರೆ. ಅಲ್ಲದೆ, 85 ಸಾವಿರ ಲೀಟರ್ ಅಕ್ರಮ ಸಾರಾಯಿಯನ್ನು ವಶಕ್ಕೆ ಪಡೆದಿದ್ದಾರೆ.
ಬಾಲಾಸೋರ್ ಎಸ್ಪಿ ಸುಧಾಂಶು ಮಿಶ್ರಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಜಿಲ್ಲಾ ಕೇಂದ್ರದಿಂದ ಹೊರಭಾಗದ ಪುರುನಾ ಬಾಲಾಸೋರ್ ಎಂಬಲ್ಲಿ ಅಕ್ರಮ ಸಾರಾಯಿ ತಯಾರಿ ಘಟಕ ಪತ್ತೆ ಮಾಡಲಾಗಿತ್ತು. ಆ ಪ್ರದೇಶದಲ್ಲಿ ಮಾಹುಲಿ ಹೆಸರಿನಲ್ಲಿ ಕಂಟ್ರಿ ಲಿಕ್ಕರ್ ಸೇಲ್ ಮಾಡಲಾಗ್ತಿತ್ತು. ಈ ಭಾಗದ ಮೂರನೇ ಒಂದು ಭಾಗದಷ್ಟು ಮಂದಿ ಅಕ್ರಮ ಸಾರಾಯಿ ತಯಾರಿ ಅಥವಾ ಮಾರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಮನೆ ಆವರಣದ ಹೊಂಡಗಳಲ್ಲಿ ಬಚ್ಚಿಡಲಾಗಿದ್ದ ಸೀಲ್ ಹಾಕಿದ್ದ ಕಂಟ್ರಿ ಲಿಕ್ಕರ್ ಬಾಟಲಿಗಳು, ಕ್ಯಾನ್ ಗಳು ಪತ್ತೆಯಾಗಿವೆ.


ಪುರುನಾ ಏರಿಯಾ ಕಂಟ್ರಿ ಲಿಕ್ಕರ್ ಮಾರಾಟ ಮತ್ತು ತಯಾರಿಯಲ್ಲಿ ದೊಡ್ಡ ಇತಿಹಾಸ ಹೊಂದಿದೆ. ಲಾಕ್ಡೌನ್ ಸಂದರ್ಭದಲ್ಲಿ ಅತಿ ಹೆಚ್ಚು ಕ್ರೈಂ ಆಗಿದ್ದ ಈ ಏರಿಯಾದ ಬಗ್ಗೆ ಖಚಿತ ಮಾಹಿತಿ ಪಡೆದೇ ದಾಳಿ ನಡೆಸಲಾಗಿತ್ತು. ಪೊಲೀಸರ ಐದು ತುಕಡಿಗಳನ್ನು ಸೇರಿಸಿಕೊಂಡು ದಾಳಿ ಸಂಘಟಿಸಲಾಗಿತ್ತು. 70 ಸಾವಿರ ಲೀಟರ್ ಸಾರಾಯಿ ಮದ್ಯ ತಯಾರಿಸಲು ಬೇಕಾದ ಮಹುವಾ ಹೆಸರಿನ ಸ್ಪಿರಿಟನ್ನು ವಶಕ್ಕೆ ಪಡೆದು ಅದನ್ನು ನಾಶ ಪಡಿಸಲಾಗಿದೆ. ರೆಡಿ ಮಾಡಿದ್ದ 12 ಸಾವಿರ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಸುಧಾಂಶು ಮಾಹಿತಿ ನೀಡಿದ್ದಾರೆ.
ಕೆಲವು ದಿನಗಳ ಹಿಂದೆ ಇದೇ ಏರಿಯಾದಲ್ಲಿ ಪೊಲೀಸರು ದಾಳಿ ನಡೆಸಿ, 50 ಸಾವಿರ ಲೀಟರ್ ಕಂಟ್ರಿ ಮದ್ಯವನ್ನು ವಶಕ್ಕೆ ಪಡೆದಿದ್ದರು. ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದರು.
The Balasore Police in Odisha along with excise department officials launched an operation and raided several illegal country liquor manufacturing units on Tuesday. Acting on reliable information, the Balasore Police led by Superintendent of Police (SP) Sudhanshu Mishra and excise sleuths raided the units in Puruna Balasore area and confiscated more than 85,000 litres of country liquor. Two individuals were arrested.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm