ಬ್ರೇಕಿಂಗ್ ನ್ಯೂಸ್
28-07-21 03:25 pm Mangalore Correspondent ದೇಶ - ವಿದೇಶ
ಶ್ರೀನಗರ, ಜುಲೈ 28: ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, 4 ಮಂದಿ ಮೃತಪಟ್ಟಿದ್ದು 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಕಳೆದ ಒಂದು ವಾರದಿಂದ ಜಮ್ಮುವಿನ ಸುತ್ತ ಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರಗಳ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರಮುಖವಾಗಿ ನದಿ ಪಾತ್ರದ ಗ್ರಾಮಗಳು ಮತ್ತು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಅಪಾಯದಲ್ಲಿದ್ದು ಅವರನ್ನು ತುರ್ತಾಗಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.


ಜಮ್ಮು ಮತ್ತು ಕಾಶ್ಮೀರದ ಉಸ್ತುವಾರಿ ಮತ್ತು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ಕಣಿವೆ ರಾಜ್ಯಕ್ಕೆ ಅಗತ್ಯವಾದ ಎಲ್ಲ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲದೆ, ಅಗತ್ಯಬಿದ್ದರೆ ಸೇನಾ ಹೆಲಿಕಾಪ್ಟರ್ ಗಳನ್ನೂ ಕೂಡ ಕಾರ್ಯಾಚರಣೆಗೆ ಇಳಿಸಲಾಗುತ್ತದೆ. ಈ ಕುರಿತಂತೆ ಡಿಎಂ ಅಶೋಕ್ ಶರ್ಮಾ ಅವರೊಂದಿಗೆ ತಾವು ಮಾತನಾಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (NDRF) ಸಿಬ್ಬಂದಿಗಳು ಗ್ರಾಮಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ವೇಳೆ 4 ಮೃತದೇಹಳು ಪತ್ತೆಯಾಗಿದ್ದು, ಇನ್ನೂ 40ಕ್ಕೂ ಹೆಚ್ಚು ಗ್ರಾಮಸ್ಥರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ ವಾರ್ ಜಿಲ್ಲೆಯ ಡಚ್ಚನ್ ಟೆಹ್ಸೀಲ್ ಪ್ರಾಂತ್ಯದ ಹೊಂಝಾರ್ ಎಂಬ ಕುಗ್ರಾಮದಲ್ಲಿ ಮೇಘಸ್ಪೋಟ ಸಂಭವಿಸಿದ್ದು, ಪ್ರವಾಹದಲ್ಲಿ ಸಾಕಷ್ಟು ಮನೆಗಳು ಕೊಚ್ಚಿಹೋಗಿವೆ ಎಂದು ತಿಳಿದುಬಂದಿದೆ.
ನಾಪತ್ತೆಯಾಗಿರುವವರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ಮತ್ತು ಇಳಿಜಾರು ಪ್ರದೇಶಗಳಲ್ಲಿ ಎನ್ಡಿಆರ್ಎಫ್ ಸಿಬ್ಬಂದಿಗಳು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.
At least seven bodies were recovered and many reported to be missing after a cloud burst over Honjar village in Kishtwar district in Jammu region early Wednesday. Authorities said 17 persons have been rescued so far as the search operation continues.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm