ಬ್ರೇಕಿಂಗ್ ನ್ಯೂಸ್
31-07-21 02:17 pm Mangaluru Correspondent ದೇಶ - ವಿದೇಶ
ಮಂಗಳೂರು, ಜುಲೈ 31: ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಆ ರಾಜ್ಯಗಳಿಂದ ಕರ್ನಾಟಕ ಪ್ರವೇಶ ಮಾಡುವ ಜನರಿಗೆ ಹೆಚ್ಚುವರಿ ನಿರ್ಬಂಧ ವಿಧಿಸಲಾಗಿದೆ. ಕರ್ನಾಟಕಕ್ಕೆ ಗಡಿಭಾಗದಿಂದ ರಸ್ತೆ ಮೂಲಕ ಅಥವಾ ರೈಲು, ವಿಮಾನದಲ್ಲಿ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ 72 ಗಂಟೆಗಳ ಒಳಗೆ ಮಾಡಿರುವ ಆರ್ ಟಿಪಿಸಿಆರ್ ಪರೀಕ್ಷೆ ವರದಿಯನ್ನು ಹೊಂದಿರಬೇಕು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕಳೆದ ಬಾರಿ ಒಂದು ಡೋಸ್ ಪಡೆದಿದ್ದ ಪ್ರಯಾಣಿಕರಿಗೆ ರಿಯಾಯಿತಿ ಕೊಡಲಾಗಿತ್ತು. ಈ ಬಾರಿ ಎರಡು ಡೋಸ್ ಲಸಿಕೆ ಪಡೆದಿದ್ದರೂ, ಕೋವಿಡ್ ನೆಗೆಟಿವಿ ಪ್ರಮಾಣಪತ್ರ ಹೊಂದಿರುವುದನ್ನು ಕಡ್ಡಾಯ ಮಾಡಲಾಗಿದೆ. ರೈಲು ಮತ್ತು ವಿಮಾನದಲ್ಲಿ ಬರುವ ಪ್ರಯಾಣಿಕರಿಗೆ ಆಯಾ ಭಾಗದಲ್ಲಿ ಟಿಕೆಟ್ ದೃಢಪಡಿಸುವ ವೇಳೆಯಲ್ಲೇ ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರುವುದನ್ನು ದೃಢಪಡಿಸಿಕೊಳ್ಳಬೇಕು. ರೈಲಿನಲ್ಲಿ ಟಿಕೆಟ್ ಪಡೆದು ಪ್ರಯಾಣಿಸುವವರನ್ನು ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಇರುವುದನ್ನು ದೃಢೀಕರಿಸುವುದು ರೈಲ್ವೇ ಇಲಾಖೆಯ ಜವಾಬ್ದಾರಿಯಾಗಿರುತ್ತದೆ.
ಬಸ್ಸಿನಲ್ಲಿ ಪ್ರಯಾಣಿಸುವ ವೇಳೆ ಪ್ರಯಾಣಿಕರನ್ನು ನೆಗೆಟಿವ್ ರಿಪೋರ್ಟ್ ಹೊಂದಿದ್ದಾರೆಯೇ ಎಂಬುದನ್ನು ಆಯಾ ಬಸ್ಸಿನ ನಿರ್ವಾಹಕರೇ ಖಚಿತಪಡಿಸಿಕೊಳ್ಳಬೇಕು. ಕೇರಳದಿಂದ ಶಿಕ್ಷಣ, ಉದ್ಯೋಗ ಇನ್ನಿತರ ಕೆಲಸಗಳಿಗಾಗಿ ಕರ್ನಾಟಕ ಪ್ರವೇಶ ಮಾಡುವವರು 15 ದಿನಗಳಿಗೊಮ್ಮೆ ಆರ್ ಟಿಪಿ ಸಿಆರ್ ಟೆಸ್ಟ್ ಮಾಡಿಕೊಳ್ಳಬೇಕು. ಕೇರಳಕ್ಕೆ ಹೊಂದಿಕೊಂಡಿರುವ ಗಡಿಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರಿನಲ್ಲಿ ಆಯಾ ಭಾಗದಲ್ಲಿ ಚೆಕ್ ಪೋಸ್ಟ್ ಮೂಲಕ ಪೊಲೀಸರು ಪ್ರಯಾಣಿಕರು ಮತ್ತು ಖಾಸಗಿ ವಾಹನಗಳ ಚಾಲಕರ ಮೇಲೆ ನಿಗಾ ಇಡಬೇಕು. ಈ ಜವಾಬ್ದಾರಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಇರುತ್ತದೆ.
ಉಳಿದಂತೆ, ಸಾಂವಿಧಾನಿಕ ಕರ್ತವದಲ್ಲಿ ತೊಡಗಿರುವ ಅಧಿಕಾರಿಗಳು, ವೈದ್ಯಕೀಯ ಸಿಬಂದಿಗಳು, ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಕುಟುಂಬಸ್ಥರ ಮರಣ, ವೈದ್ಯಕೀಯ ಚಿಕಿತ್ಸೆ ಇತ್ಯಾದಿ ತುರ್ತು ಕಾರಣಗಳಿಗೆ ಪ್ರಯಾಣಿಸುವವರಿಗೆ ಕೋವಿಡ್ ನೆಗೆಟಿವ್ ನಿರ್ಬಂಧ ಇರುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
COVID-19 negative certificate from an RT-PCR test will be made mandatory for people coming from Kasaragod in Kerala into Dakshina Kannada orders DC of Mangalore Dr Rajendra Kumar. Following an alarming surge in daily COVID-19 cases, the Kerala government on Thursday (July 29, 2021) announced that it will impose a complete weekend lockdown on July 31, 2021 and August 1, 2021. Some of the worst affected districts in Kerala are Malappuram, Thrissur, Kozhikode, Ernakulam, Palakkad, Kollam, Alappuzha, Kannur, Thiruvananthapuram and Kottayam.
15-04-25 08:44 pm
Bangalore Correspondent
Kannada Journalist S K Shyamsundar Death: ಹಿರ...
15-04-25 12:51 pm
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
16-04-25 02:02 pm
Mangalore Correspondent
Panambur Bike Accident, Mangalore: ಪಣಂಬೂರಿನಲ್...
16-04-25 01:29 pm
NIA, Praveen Nettaru: ಪ್ರವೀಣ್ ನೆಟ್ಟಾರು ಕೊಲೆ ಪ...
15-04-25 09:57 pm
Drowning, Surathkal Beach, Mangalore, News: ಮ...
15-04-25 09:21 pm
ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ...
14-04-25 09:20 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm