ಬ್ರೇಕಿಂಗ್ ನ್ಯೂಸ್
05-09-20 10:57 am Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.5: ಭಾರತದಲ್ಲಿ 30 ಲಕ್ಷ ಕೊರೋನ ವೈರಸ್ ಸೋಂಕು ಪ್ರಕರಣಗಳು ದಾಖಲಾದ ಕೇವಲ 13 ದಿನಗಳಲ್ಲಿ ಮತ್ತೆ 10 ಲಕ್ಷ ಪ್ರಕರಣಗಳು ಸೇರ್ಪಡೆಯಾಗಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 40 ಲಕ್ಷದ ಗಡಿ ದಾಟಿದೆ.
ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಶುಕ್ರವಾರ ಮತ್ತೊಂದು ದಾಖಲೆ ನಿರ್ಮಾಣವಾಗಿದ್ದು, ಇದುವರೆಗಿನ ಗರಿಷ್ಠ ಅಂದರೆ 87,800 ಪ್ರಕರಣಗಳು ಶುಕ್ರವಾರ ಸೇರ್ಪಡೆಯಾಗಿವೆ. ಸತತ ಮೂರನೇ ದಿನ ದೇಶದಲ್ಲಿ ಗರಿಷ್ಠ ಪ್ರಕರಣಗಳು ದಾಖಲಾಗಿವೆ.
ಅಮೆರಿಕ ಹಾಗೂ ಬ್ರೆಝಿಲ್ ದೇಶಗಳನ್ನು ಹೊರತುಪಡಿಸಿದರೆ 40 ಲಕ್ಷ ಪ್ರಕರಣಗಳು ವರದಿಯಾದ ಮೂರನೇ ದೇಶವಾಗಿ ಭಾರತ ಸೇರ್ಪಡೆಯಾಗಿದೆ. ಭಾರತದಲ್ಲಿ ಮೊದಲ 10 ಲಕ್ಷ ಪ್ರಕರಣಗಳು ದಾಖಲಾಗಲು ಸುಧೀರ್ಘ ಅವಧಿ (168 ದಿನ) ತೆಗೆದುಕೊಂಡಿದ್ದು, ಬಳಿಕ ಪ್ರಕರಣಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ.
ದೇಶದಲ್ಲಿ 10 ಲಕ್ಷ ಇದ್ದ ಪ್ರಕರಣಗಳು ಕೇವಲ 50 ದಿನಗಳಲ್ಲಿ 40 ಲಕ್ಷಕ್ಕೆ ಬೆಳೆದಿವೆ. ಬ್ರೆಝಿಲ್ನಲ್ಲಿ ಈ ಪ್ರಮಾಣದ ಬೆಳವಣಿಗೆಗೆ 75 ದಿನ ತೆಗೆದುಕೊಂಡಿದ್ದರೆ, ಅಮೆರಿಕದಲ್ಲಿ 86 ದಿನಗಳಲ್ಲಿ ಪ್ರಕರಣಗಳ ಸಂಖ್ಯೆ 10 ಲಕ್ಷದಿಂದ 40 ಲಕ್ಷಕ್ಕೇರಿತ್ತು. ಕೊನೆಯ 10 ಲಕ್ಷ ಪ್ರಕರಣಗಳು ಅತ್ಯಂತ ಕ್ಷಿಪ್ರ ಅವಧಿಯಲ್ಲಿ ವರದಿಯಾಗಿದ್ದು, ಕೇವಲ 13 ದಿನಗಳಲ್ಲಿ 10 ಲಕ್ಷ ಪ್ರಕರಣ ದಾಖಲಾಗಿದೆ. ಇದುವರೆಗಿನ ದಾಖಲೆ ಅಮೆರಿಕ ಹಾಗೂ ಭಾರತದ ಜಂಟಿ ಹೆಸರಿನಲ್ಲಿದ್ದು, 16 ದಿನಗಳಲ್ಲಿ 10 ಲಕ್ಷ ಪ್ರಕರಣಗಳು ದಾಖಲಾಗಿದ್ದವು.

ಆದಾಗ್ಯೂ ಸೋಂಕಿತರ ಪೈಕಿ ಮೃತಪಟ್ಟವರ ದರ ಈ ಮೂರು ದೇಶಗಳ ಪೈಕಿ ಭಾರತದಲ್ಲೇ ಕನಿಷ್ಠ. 40 ಲಕ್ಷ ಒಟ್ಟು ಸೋಂಕಿತರ ಪೈಕಿ ಭಾರತದಲ್ಲಿ ಮೃತಪಟ್ಟವರು 69,552. ಇದೇ ಹಂತದಲ್ಲಿ ಅಮೆರಿಕದಲ್ಲಿ 1.4 ಲಕ್ಷ ಮಂದಿ ಹಾಗೂ ಬ್ರೆಝಿಲ್ನಲ್ಲಿ 1.2 ಲಕ್ಷ ಮಂದಿ ಸೋಂಕಿಗೆ ಬಲಿಯಾಗಿದ್ದರು.
ಶುಕ್ರವಾರ ದೇಶದಲ್ಲಿ 87,852 ಹೊಸ ಪ್ರಕರಣಗಳು ದಾಖಲಾಗಿದ್ದು, ಮಹಾರಾಷ್ಟ್ರದಲ್ಲಿ ಗರಿಷ್ಠ ಅಂದರೆ 19,218 ಪ್ರಕರಣಗಳು ವರದಿಯಾಗಿವೆ ಎಂದು ರಾಜ್ಯ ಸರ್ಕಾರಗಳಿಂದ ಸಂಗ್ರಹಿಸಿದ ಅಂಕಿ ಅಂಶಗಳಿಂದ ತಿಳಿದುಬಂದಿದೆ. 1062 ಮಂದಿ ಶುಕ್ರವಾರ ಸೋಂಕಿನಿಂದ ಮೃತಪಟ್ಟಿದ್ದಾರೆ. ಸತತ ನಾಲ್ಕನೇ ದಿನ ದೇಶದಲ್ಲಿ ಸಾವಿರಕ್ಕೂ ಅಧಿಕ ಮಂದಿ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 17 ಸಾವಿರದಷ್ಟು ಹೆಚ್ಚಿ 8.5 ಲಕ್ಷದ ಸನಿಹಕ್ಕೆ ಬಂದಿದೆ.
ಇನ್ನು ಸಮಾಧಾನಕರ ವಿಷಯವೇನೆಂದರೆ ಇಲ್ಲಿಯವರೆಗೂ ದೇಶದಲ್ಲಿ ಸುಮಾರು 31 ಲಕ್ಷ ರೋಗಿಗಳು ಸೋಂಕಿನಿಂದ ಚೇತರಿಸಿಕೊಂಡಿದ್ದು, ಚೇತರಿಕೆಯ ಪ್ರಮಾಣವು ಶೇಕಡಾ 77.2 ಕ್ಕೆ ಏರಿಕೆಯಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm