ಬ್ರೇಕಿಂಗ್ ನ್ಯೂಸ್
10-08-21 12:17 pm Headline Karnataka News Network ದೇಶ - ವಿದೇಶ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ಸೋಮವಾರ ಆಯೋಜಿಸಿದ್ದ ಜಾಥಾದಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಕೀಲ ಮತ್ತು ಬಿಜೆಪಿ ಮಾಜಿ ವಕ್ತಾರ ಅಶ್ವನಿ ಉಪಾಧ್ಯಾಯ ಸೇರಿದಂತೆ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಅಶ್ವಿನಿ ಉಪಾಧ್ಯಾಯ, ವಿನೋದ್ ಶರ್ಮಾ, ದೀಪಕ್ ಸಿಂಗ್, ವಿನೀತ್ ಕ್ರಾಂತ್, ಪ್ರೀತ್ ಸಿಂಗ್ ಹಾಗೂ ದೀಪಕ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆಗೊಳಪಡಿಸಿದ್ದಾರೆಂದು ತಿಳಿದುಬಂದಿದೆ. ವಿಚಾರಣೆ ಬಳಿಕ ಆರು ಮಂದಿಯನ್ನೂ ಬಂಧನಕ್ಕೊಳಪಡಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ದೇಶದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ವಸಾಹತು ಕಾಲದ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನಾ ಮೆರವಣಿಗೆ ವೇಳೆ ಪ್ರಚೋದನಾಕಾರಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರೋಪಿಸಲಾಗಿದೆ. ಇದರಂತೆ ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 153-ಎ (ವಿಭಿನ್ನ ಗುಂಪುಗಳ ನಡುವೆ ವೈರತ್ವ ಪ್ರಚೋದಿಸುವುದು) ಅಡಿ ಎಫ್ಐಆರ್ಗಳನ್ನು ದಾಖಲಿಸಲಾಗಿತ್ತು.
ಅಲ್ಲದೆ, ಅವರು ಮೆರವಣಿಗೆಗೆ ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ ಹಾಗೂ ಸೆಕ್ಷನ್ 188 (ಸಾರ್ವಜನಿಕ ಸೇವಕರು ಜಾರಿಗೊಳಿಸಿದ ಆದೇಶಗಳನ್ನು ಪಾಲಿಸದೆ ಇರುವುದು) ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ನಿರ್ಲಕ್ಷಿಸುವ ಡಿಡಿಎಂಎ ಕಾಯ್ದೆಯ ಸೆಕ್ಷನ್ 51ರ ಅಡಿ ಕೂಡ ಪ್ರಕರಣಗಳನ್ನು ದಾಖಲಿಸಲಾಗಿದೆ.
ಅನುಮತಿ ಪಡೆಯದೆಯೇ ರ್ಯಾಲಿ ನಡೆಸಿದ್ದ ಹಿನ್ನೆಲೆಯಲ್ಲಿ ಈ ಸಂದರ್ಭದಲ್ಲಿ ಯಾವುದೇ ಪೊಲೀಸರು ಸ್ಥಳದಲ್ಲಿ ಹಾಜರಿರಲಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಮೆರವಣಿಗೆಗೆ ಅನುಮತಿ ನಿರಾಕರಿಸಲಾಗಿತ್ತು. ಆದರೂ ಜನರು ಗುಂಪುಗೂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ashwani upadhyay and others involved in yesterdays incident to be arrested delhi police
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm