ಬ್ರೇಕಿಂಗ್ ನ್ಯೂಸ್
16-08-21 10:50 am Headline Karnataka News Network ದೇಶ - ವಿದೇಶ
ಹೈಟಿ, ಆಗಸ್ಟ್ 16: ಕೆರೆಬಿಯನ್ ರಾಷ್ಟ್ರ ಹೈಟಿಯಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಸಾವಿರ ದಾಟಿದೆ. ಶನಿವಾರ ಸಂಭವಿಸಿದ ಭೂಕಂಪದಲ್ಲಿ ಇದುವರೆಗೂ 1297 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೈಟಿ ಸಿವಿಲ್ ಪ್ರೊಟೆಕ್ಷನ್ ಏಜೆನ್ಸಿ ಮುಖ್ಯಸ್ಥ ಜೆರ್ರಿ ಚ್ಯಾಂಡ್ಲರ್ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ 2800ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ಸಿಎನ್ಎನ್ ವರದಿ ಮಾಡಿದೆ.
ದೇಶದ ದಕ್ಷಿಣ ಭಾಗದಲ್ಲಿ ಗರಿಷ್ಠ ಪ್ರಮಾಣದಲ್ಲಿ ಸಾವು ಸಂಭವಿಸಿದೆ. ದಕ್ಷಿಣ ಭಾಗವೊಂದರಲ್ಲೇ ಸುಮಾರು ಐನೂರು ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಭೂಕಂಪದಿಂದಾಗಿ 2868 ಮನೆಗಳು ಸಂಪೂರ್ಣ ನಾಶವಾಗಿದ್ದು, 5410 ಮನೆಗಳಿಗೆ ಹಾನಿಯಾಗಿದೆ.






ಹಾನಿಯಾಗಿರುವ ಕಡೆಗಳೆಲ್ಲೆಲ್ಲಾ ವೈದ್ಯಕೀಯ ನೆರವನ್ನು ತ್ವರಿತಗತಿಯಲ್ಲಿ ಪೂರೈಸುತ್ತಿದ್ದೇವೆ ಎಂದು ಪ್ರಧಾನಿ ಏರಿಯಲ್ ಹೆನ್ರಿ ತಿಳಿಸಿದ್ದಾರೆ. ತುರ್ತು ವೈದ್ಯಕೀಯ ಸೇವೆ ಅಗತ್ಯವಿರುವವರಿಗೆ ವಿಶೇಷ ವ್ಯವಸ್ಥೆ ಮೂಲಕ ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ. ಭೂಕಂಪದಿಂದ ಬಾಧಿತವಾಗಿರುವ ನಗರ ಹಾಗೂ ಪಟ್ಟಣಗಳಿಗೆ ಎಲ್ಲಾ ರೀತಿಯ ನೆರವು ನೀಡಲಾಗುತ್ತಿದ್ದು, ಆಸ್ಪತ್ರೆಗಳು ಗಾಯಾಳುಗಳಿಂದ ತುಂಬಿ ತುಳುಕುತ್ತಿವೆ ಎಂದು ಅವರು ಹೇಳಿದ್ದಾರೆ.
ಶನಿವಾರ ಹೈಟಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.2ರಷ್ಟು ತೀವ್ರತೆ ದಾಖಲಾಗಿದ್ದು, ಭೂಕಂಪದಲ್ಲಿ ನೂರಾರು ಕಟ್ಟಡಗಳು ಧರೆಗುರುಳಿವೆ.
ಹೈಟಿ ರಾಜಧಾನಿ ಪೋರ್ಟ್-ಔ-ಪ್ರಿನ್ಸ್ ನಿಂದ 160 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ. ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಇದುವರೆಗೂ 1297 ಮಂದಿ ಸಾವನ್ನಪ್ಪಿದ್ದಾರೆ. ಹಲವರು ತೀವ್ರ ಗಾಯಗೊಂಡಿದ್ದಾರೆ.






ಭೂಕಂಪದಿಂದಾಗಿ ಹೈಟಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಭೂಕಂಪದಿಂದ ಸಾಕಷ್ಟು ಅನಾಹುತ ಸಂಭವಿಸಿದ್ದು ಹೈಟಿಯಲ್ಲಿ ಒಂದು ತಿಂಗಳು ತುರ್ತು ಪರಿಸ್ಥಿತಿ ಹೇರುತ್ತಿರುವುದಾಗಿ ಅಲ್ಲಿನ ಪ್ರಧಾನಿ ಏರಿಯಲ್ ಹೆನ್ರಿ ಭಾನುವಾರ ಘೋಷಿಸಿದ್ದಾರೆ.
ಅನೇಕ ಪ್ರದೇಶಗಳು ತೀವ್ರ ಸ್ವರೂಪದಲ್ಲಿ ಹಾನಿಗೊಂಡಿದ್ದು ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಕಂಪನದ ಕೇಂದ್ರ ಬಿಂದು ಪೋರ್ಟ್-ಔ-ಪ್ರಿನ್ಸ್ ನಗರದಿಂದ ಪಶ್ಚಿಮ ಭಾಗದ 125 ಕಿಲೋಮೀಟರ್ (78 ಮೈಲಿ) ದೂರದಲ್ಲಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೇ ತಿಳಿಸಿದೆ.
2010ರಲ್ಲಿ ಕೂಡ ಹೈಟಿಯಲ್ಲಿ ಇಂಥದ್ದೇ ತೀವ್ರತರ ಭೂಕಂಪ ಸಂಭವಿಸಿತ್ತು. 7.0 ತೀವ್ರತೆಯ ಭೂಕಂಪ ದಾಖಲಾಗಿದ್ದು, ಲಕ್ಷಾಂತರ ಮಂದಿ ಭೂಕಂಪದಿಂದ ಸಾವನ್ನಪ್ಪಿದ್ದರು. ಇದೀಗ ಮತ್ತೆ ಅಂಥದ್ದೇ ಘಟನೆ ಮರುಕಳಿಸಿದೆ.
The death toll from the 7.2-magnitude earthquake that struck Haiti on Saturday rose to 1,297, the country's civil protection agency reported on Sunday.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm