ಬ್ರೇಕಿಂಗ್ ನ್ಯೂಸ್
01-08-20 11:53 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ (ಆ. 01): ವಿಶಾಖಪಟ್ಟಣಂನಲ್ಲಿರುವ ಹಿಂದೂಸ್ತಾನ್ ಶಿಪ್ಯಾರ್ಡ್ ಬಳಿ ಬೃಹತ್ ಕ್ರೇನ್ವೊಂದನ್ನು ಸ್ಥಾಪಿಸುವ ವೇಳೆ ಅದು ಕುಸಿದುಬಿದ್ದು ಹನ್ನೊಂದು ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ
ದುರಂತ ನಡೆದ ಕೆಲವೇ ಹೊತ್ತಲ್ಲಿ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಗಳನ್ನ ಕೈಗೊಂಡರೆನ್ನಲಾಗಿದೆ. ನಾಲ್ಕು ಮೃತ ದೇಹಗಳನ್ನ ಸದ್ಯ ಹೊರತೆಗೆಯಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ವಿಶಾಖಪಟ್ಟಣಂನ ಬಂದರಿನಲ್ಲಿರುವ ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಹಡಗುದಾಣದಲ್ಲಿ ನೂತನ ಕ್ರೇನ್ ಅನ್ನು ಇನ್ಸ್ಟಾಲ್ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಅನುಪಮ್ ಹೆಸರಿನ ಈ ಕ್ರೇನ್ ಬರೋಬ್ಬರಿ 70 ಟನ್ ತೂಕ ಇದೆ. ಇದರ ಸಂಯೋಜನೆ ಎಲ್ಲವೂ ಆಗಿ ಪೂರ್ಣಪ್ರಮಾಣದ ಕಾರ್ಯಾಚರಣೆಗೆ ಇಳಿಸುವ ಮುನ್ನ ಟ್ರಯಲ್ ರನ್ ಮಾಡಲಾಗುತ್ತಿತ್ತು.
ಮೃತಪಟ್ಟವರಲ್ಲಿ ನಾಲ್ವರು ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಉದ್ಯೋಗಿಗಳಾಗಿದ್ದಾರೆ. ಇನ್ನುಳಿದವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದಾರೆ.
ಶಿಪ್ಯಾರ್ಡ್ ಸಂಸ್ಥೆ ಮತ್ತು ಜಿಲ್ಲಾಡಳಿತದಿಂದ ತನಿಖೆಗಳು ನಡೆಯುತ್ತವೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿನಯ್ ಚಂದ್ ಹೇಳಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ಘಟನೆಯ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವಂತೆ ಡಿಸಿ ಮತ್ತು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm