ಬ್ರೇಕಿಂಗ್ ನ್ಯೂಸ್
01-08-20 11:53 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ (ಆ. 01): ವಿಶಾಖಪಟ್ಟಣಂನಲ್ಲಿರುವ ಹಿಂದೂಸ್ತಾನ್ ಶಿಪ್ಯಾರ್ಡ್ ಬಳಿ ಬೃಹತ್ ಕ್ರೇನ್ವೊಂದನ್ನು ಸ್ಥಾಪಿಸುವ ವೇಳೆ ಅದು ಕುಸಿದುಬಿದ್ದು ಹನ್ನೊಂದು ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ
ದುರಂತ ನಡೆದ ಕೆಲವೇ ಹೊತ್ತಲ್ಲಿ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಗಳನ್ನ ಕೈಗೊಂಡರೆನ್ನಲಾಗಿದೆ. ನಾಲ್ಕು ಮೃತ ದೇಹಗಳನ್ನ ಸದ್ಯ ಹೊರತೆಗೆಯಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ವಿಶಾಖಪಟ್ಟಣಂನ ಬಂದರಿನಲ್ಲಿರುವ ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಹಡಗುದಾಣದಲ್ಲಿ ನೂತನ ಕ್ರೇನ್ ಅನ್ನು ಇನ್ಸ್ಟಾಲ್ ಮಾಡಲಾಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಅನುಪಮ್ ಹೆಸರಿನ ಈ ಕ್ರೇನ್ ಬರೋಬ್ಬರಿ 70 ಟನ್ ತೂಕ ಇದೆ. ಇದರ ಸಂಯೋಜನೆ ಎಲ್ಲವೂ ಆಗಿ ಪೂರ್ಣಪ್ರಮಾಣದ ಕಾರ್ಯಾಚರಣೆಗೆ ಇಳಿಸುವ ಮುನ್ನ ಟ್ರಯಲ್ ರನ್ ಮಾಡಲಾಗುತ್ತಿತ್ತು.
ಮೃತಪಟ್ಟವರಲ್ಲಿ ನಾಲ್ವರು ಹಿಂದೂಸ್ಥಾನ್ ಶಿಪ್ಯಾರ್ಡ್ ಸಂಸ್ಥೆಯ ಉದ್ಯೋಗಿಗಳಾಗಿದ್ದಾರೆ. ಇನ್ನುಳಿದವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದಾರೆ.
ಶಿಪ್ಯಾರ್ಡ್ ಸಂಸ್ಥೆ ಮತ್ತು ಜಿಲ್ಲಾಡಳಿತದಿಂದ ತನಿಖೆಗಳು ನಡೆಯುತ್ತವೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿನಯ್ ಚಂದ್ ಹೇಳಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ಘಟನೆಯ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವಂತೆ ಡಿಸಿ ಮತ್ತು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
07-05-25 12:20 pm
HK News Desk
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm