ಬ್ರೇಕಿಂಗ್ ನ್ಯೂಸ್
16-08-21 12:40 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 16: ತಾಲಿಬಾನ್ ಉಗ್ರರು ಅಫ್ಘಾನಿಸ್ತಾನದಲ್ಲಿ ಆಡಳಿತವನ್ನು ತಮ್ಮ ತೆಕ್ಕೆಗೆ ಪಡೆದುಕೊಂಡಿದ್ದು ಕಮಾಂಡರ್ ಮುಲ್ಲಾ ಅಬ್ದುಲ್ ಘನಿ ಅಫ್ಘಾನಿಸ್ತಾನದ ನೂತನ ಅಧ್ಯಕ್ಷರಾಗಲಿದ್ದಾರೆ ಎನ್ನಲಾಗುತ್ತಿದೆ. ಅಫ್ಘಾನಿಸ್ತಾನದ ಅಧ್ಯಕ್ಷರಾಗಿದ್ದ ಅಶ್ರಫ್ ಘನಿ, ಭಾನುವಾರ ರಾಜಧಾನಿ ಕಾಬೂಲನ್ನು ನಾಲ್ಕು ಸುತ್ತಲಿಂದಲೂ ತಾಲಿಬಾನ್ ಉಗ್ರರು ಆಕ್ರಮಿಸುತ್ತಿದ್ದಂತೆ ಅಧಿಕಾರ ತ್ಯಜಿಸಿ ಪರಾರಿಯಾಗಿದ್ದರು.
ಇದೇ ವೇಳೆ ಶಸ್ತ್ರಸಜ್ಜಿತ ತಾಲಿಬಾನ್ ಬಂಡುಕೋರರು ರಾಜಧಾನಿ ಕಾಬೂಲ್ ಪೂರ್ತಿಯಾಗಿ ಆಕ್ರಮಿಸಿಕೊಂಡಿದ್ದಾರೆ. ಆದರೆ ತಾಲಿಬಾನಿ ವಕ್ತಾರರು, ಬಂಡುಕೋರರು ಕಾಬೂಲ್ ನಗರವನ್ನು ಶಾಂತಿಯುತವಾಗಿ ಪ್ರವೇಶ ಮಾಡಿದ್ದಾರೆ. ನಾಗರಿಕರ ಮೇಲಾಗಲೀ, ಸೈನಿಕರ ಮೇಲಾಗಲೀ ದಾಳಿ ನಡೆಸಿಲ್ಲ ಎಂದು ತಿಳಿಸಿದ್ದಾರೆ.
ಅಫ್ಘಾನಿಸ್ತಾನದ ಗೃಹಸಚಿವ ಅಬ್ದುಲ್ ಸತ್ತಾರ್ ಅವರು ತಾಲಿಬಾನ್ ಗೆ ಶಾಂತಿಯುತವಾಗಿ ಅಧಿಕಾರ ಹಸ್ತಾಂತರ ಮಾಡುವುದಾಗಿ ತಿಳಿಸಿದ್ದಾರೆ. ತಾಲಿಬಾನ್ ಬಂಡುಕೋರರು ಅಫ್ಘಾನಿಸ್ತಾನ ರಾಜಧಾನಿ ಕಾಬೂಲಿಗೆ ನುಗ್ಗಿ ದಾಳಿ ನಡೆಸುವರೆಂಬ ಭೀತಿ ಎದುರಾಗಿತ್ತು. ಆ ಹಿನ್ನೆಲೆಯಲ್ಲಿ ಅಲ್ಲಿನ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಅದನ್ನು ಮನಗಂಡು ಅಬ್ದುಲ್ ಸತ್ತಾರ್ ಅವರು ತಾಲಿಬಾನ್ ಕಾಬೂಲ್ ಪ್ರವೇಶಿಸಿದಲ್ಲಿ ಆಫ್ಘನ್ ಭದ್ರತಾ ಪಡೆಗಳು ಕಾದಾಟ ನಡೆಸುವುದಿಲ್ಲ ಎನ್ನುವ ಸುಳಿವನ್ನು ನೀಡಿದ್ದರು.
ಇದೇ ವೇಳೆ, ದೇಶದ ಚುಕ್ಕಾಣಿ ಹಿಡಿಯಲು ತಾಲಿಬಾನ್ ಸಂಧಾನಕಾರರು ಮತ್ತು ಅಲ್ಲಿನ ಸರಕಾರದ ನಾಯಕರು ಅಧ್ಯಕ್ಷರ ನಿವಾಸದಲ್ಲಿ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಅಮೆರಿಕ ತನ್ನ ರಾಜತಾಂತ್ರಿಕ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕಾಬೂಲಿನಿಂದ ಹಿಂದಕ್ಕೆ ಕರೆಸಿಕೊಂಡಿದೆ. ಆದರೆ, ರಷ್ಯಾ ಮತ್ತು ಚೀನಾ ಕಾಬೂಲಿನಲ್ಲಿನ ತನ್ನ ರಾಜತಾಂತ್ರಿಕ ಅಧಿಕಾರಿಗಳನ್ನು ಹಿಂದಕ್ಕೆ ಕರೆಸಿಕೊಳ್ಳುವುದಿಲ್ಲ ಎಂದು ತಿಳಿಸಿದೆ.
With Taliban seizing control of Kabul and all top provincial capitals of Afghanistan, its top leader Mullah Abdul Ghani Baradar is most likely to become the next President of the war-ravaged nation.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm