ಬ್ರೇಕಿಂಗ್ ನ್ಯೂಸ್
16-08-21 12:40 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 16: ತಾಲಿಬಾನ್ ಉಗ್ರರು ಅಫ್ಘಾನಿಸ್ತಾನದಲ್ಲಿ ಆಡಳಿತವನ್ನು ತಮ್ಮ ತೆಕ್ಕೆಗೆ ಪಡೆದುಕೊಂಡಿದ್ದು ಕಮಾಂಡರ್ ಮುಲ್ಲಾ ಅಬ್ದುಲ್ ಘನಿ ಅಫ್ಘಾನಿಸ್ತಾನದ ನೂತನ ಅಧ್ಯಕ್ಷರಾಗಲಿದ್ದಾರೆ ಎನ್ನಲಾಗುತ್ತಿದೆ. ಅಫ್ಘಾನಿಸ್ತಾನದ ಅಧ್ಯಕ್ಷರಾಗಿದ್ದ ಅಶ್ರಫ್ ಘನಿ, ಭಾನುವಾರ ರಾಜಧಾನಿ ಕಾಬೂಲನ್ನು ನಾಲ್ಕು ಸುತ್ತಲಿಂದಲೂ ತಾಲಿಬಾನ್ ಉಗ್ರರು ಆಕ್ರಮಿಸುತ್ತಿದ್ದಂತೆ ಅಧಿಕಾರ ತ್ಯಜಿಸಿ ಪರಾರಿಯಾಗಿದ್ದರು.
ಇದೇ ವೇಳೆ ಶಸ್ತ್ರಸಜ್ಜಿತ ತಾಲಿಬಾನ್ ಬಂಡುಕೋರರು ರಾಜಧಾನಿ ಕಾಬೂಲ್ ಪೂರ್ತಿಯಾಗಿ ಆಕ್ರಮಿಸಿಕೊಂಡಿದ್ದಾರೆ. ಆದರೆ ತಾಲಿಬಾನಿ ವಕ್ತಾರರು, ಬಂಡುಕೋರರು ಕಾಬೂಲ್ ನಗರವನ್ನು ಶಾಂತಿಯುತವಾಗಿ ಪ್ರವೇಶ ಮಾಡಿದ್ದಾರೆ. ನಾಗರಿಕರ ಮೇಲಾಗಲೀ, ಸೈನಿಕರ ಮೇಲಾಗಲೀ ದಾಳಿ ನಡೆಸಿಲ್ಲ ಎಂದು ತಿಳಿಸಿದ್ದಾರೆ.
ಅಫ್ಘಾನಿಸ್ತಾನದ ಗೃಹಸಚಿವ ಅಬ್ದುಲ್ ಸತ್ತಾರ್ ಅವರು ತಾಲಿಬಾನ್ ಗೆ ಶಾಂತಿಯುತವಾಗಿ ಅಧಿಕಾರ ಹಸ್ತಾಂತರ ಮಾಡುವುದಾಗಿ ತಿಳಿಸಿದ್ದಾರೆ. ತಾಲಿಬಾನ್ ಬಂಡುಕೋರರು ಅಫ್ಘಾನಿಸ್ತಾನ ರಾಜಧಾನಿ ಕಾಬೂಲಿಗೆ ನುಗ್ಗಿ ದಾಳಿ ನಡೆಸುವರೆಂಬ ಭೀತಿ ಎದುರಾಗಿತ್ತು. ಆ ಹಿನ್ನೆಲೆಯಲ್ಲಿ ಅಲ್ಲಿನ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಅದನ್ನು ಮನಗಂಡು ಅಬ್ದುಲ್ ಸತ್ತಾರ್ ಅವರು ತಾಲಿಬಾನ್ ಕಾಬೂಲ್ ಪ್ರವೇಶಿಸಿದಲ್ಲಿ ಆಫ್ಘನ್ ಭದ್ರತಾ ಪಡೆಗಳು ಕಾದಾಟ ನಡೆಸುವುದಿಲ್ಲ ಎನ್ನುವ ಸುಳಿವನ್ನು ನೀಡಿದ್ದರು.
ಇದೇ ವೇಳೆ, ದೇಶದ ಚುಕ್ಕಾಣಿ ಹಿಡಿಯಲು ತಾಲಿಬಾನ್ ಸಂಧಾನಕಾರರು ಮತ್ತು ಅಲ್ಲಿನ ಸರಕಾರದ ನಾಯಕರು ಅಧ್ಯಕ್ಷರ ನಿವಾಸದಲ್ಲಿ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಅಮೆರಿಕ ತನ್ನ ರಾಜತಾಂತ್ರಿಕ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕಾಬೂಲಿನಿಂದ ಹಿಂದಕ್ಕೆ ಕರೆಸಿಕೊಂಡಿದೆ. ಆದರೆ, ರಷ್ಯಾ ಮತ್ತು ಚೀನಾ ಕಾಬೂಲಿನಲ್ಲಿನ ತನ್ನ ರಾಜತಾಂತ್ರಿಕ ಅಧಿಕಾರಿಗಳನ್ನು ಹಿಂದಕ್ಕೆ ಕರೆಸಿಕೊಳ್ಳುವುದಿಲ್ಲ ಎಂದು ತಿಳಿಸಿದೆ.
With Taliban seizing control of Kabul and all top provincial capitals of Afghanistan, its top leader Mullah Abdul Ghani Baradar is most likely to become the next President of the war-ravaged nation.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm