ಬ್ರೇಕಿಂಗ್ ನ್ಯೂಸ್
17-08-21 10:29 pm Headline Karnataka Newz ದೇಶ - ವಿದೇಶ
ನವದೆಹಲಿ, ಆ.17: ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸದ ಮಧ್ಯೆ ಜನರು ದೇಶ ಬಿಟ್ಟು ಓಡಿ ಹೋಗುತ್ತಿದ್ದಾರೆ. ಅಲ್ಲಿನ ಮೂಲ ನಿವಾಸಿಗಳು ಸೇರಿ ಮುಸ್ಲಿಮರು, ಇತರ ಧರ್ಮೀಯರು ಮತ ಭೇದ ಇಲ್ಲದೆ ದೇಶ ಬಿಟ್ಟು ಹೋಗಲು ತುದಿಗಾಲಲ್ಲಿ ನಿಂತಿದ್ದಾರೆ. ಈ ನಡುವೆ, ರಾಜಧಾನಿ ಕಾಬೂಲ್ನಲ್ಲಿರುವ ಹಿಂದು ದೇವಾಲಯದ ಅರ್ಚಕರೊಬ್ಬರು ಮಾತ್ರ ಏನೇ ಆದ್ರೂ ದೇವಸ್ಥಾನ ಬಿಟ್ಟು ಹೋಗುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.
ರತನ್ ನಾಥ್ ಎಂಬ ದೇವಸ್ಥಾನದ ಈ ಅರ್ಚಕನ ಹೆಸರು ಪಂಡಿತ್ ರಾಜೇಶ್ ಕುಮಾರ್. ಭಾರತಕ್ಕೆ ಹೋಗಿ ನೆಲಸುವಂತೆ ಹೇಳಿ, ಎಲ್ಲಾ ಖರ್ಚುಗಳನ್ನ ನೋಡಿಕೊಳ್ಳುವುದಾಗಿ ಸ್ನೇಹಿತರು ಹೇಳಿದರೂ ಇವರು ಮಾತ್ರ ತಾನು ಎಲ್ಲಿಯೂ ಹೋಗುವುದಿಲ್ಲ ಎನ್ನುತ್ತಿದ್ದಾರೆ.
ನನ್ನ ಪೂರ್ವಜರ ಕಾಲದಿಂದ ನೂರಾರು ವರ್ಷಗಳಿಂದ ಇದೇ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ತಾಲಿಬಾನಿಗರು ನನ್ನನ್ನು ಕೊಂದರೂ, ಅದನ್ನ ಸೇವೆ ಎಂದೇ ಪರಿಗಣಿಸುತ್ತೇನೆ. ನಾನು ಈ ದೇವಸ್ಥಾನವನ್ನು ಬಿಟ್ಟು ಬರುವುದಿಲ್ಲ ಎಂದು ಪಂಡಿತ್ ರಾಜೇಶ್ ಕುಮಾರ್ ಹೇಳಿದ್ದಾಗಿ ಭಾರದ್ವಜ್ ಎಂಬವರು ಟ್ವೀಟ್ ಮಾಡಿದ್ದಾರೆ.
ರಾಜೇಶ್ ಕುಮಾರ್ ಆಫ್ಘಾನಿಸ್ತಾನದಲ್ಲಿರುವ ಏಕೈಕ ಹಿಂದೂ ಮಂದಿರದ ಅರ್ಚಕ. ತಾಲಿಬಾನ್ ಅಧಿಕಾರಕ್ಕೆ ಬಂದ ನಂತರ ಆಫ್ಘಾನಿಸ್ತಾನದಲ್ಲಿ ಅಲ್ಪಸಂಖ್ಯಾತರಾದು ಸಿಖ್ ಮತ್ತು ಹಿಂದುಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಆಫ್ಘಾನಿಸ್ತಾನದಲ್ಲಿ ಸಿಖ್ ಮತ್ತು ಹಿಂದುಗಳು ಕಡಿಮೆ ಸಂಖ್ಯೆಯಲ್ಲಿದ್ದಾರೆ. ಇವರಿಗೆ ಸಹಾಯ ಮಾಡಲು ಭಾರತ ಸರ್ಕಾರ ಮುಂದಾಗಿದೆ. ಆಫ್ಘಾನ್ನಿಂದ ಹೊರಬರಲು ಬಯಸುವ ಜನರಿಗೆ ಸೂಕ್ತ ನೆರವು ನೀಡಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಹೇಳಿದ್ದಾರೆ.
ಆಫ್ಘಾನಿಸ್ತಾನದಲ್ಲಿ ಉಳಿದುಕೊಂಡಿರುವ ಸಿಖ್ ಮತ್ತು ಹಿಂದು ಸಮುದಾಯದ ಹೆಚ್ಚಿನ ಮಂದಿ ಕಾಬೂಲ್ ನಗರದಲ್ಲಿದ್ದಾರೆ. ಕಾಬೂಲ್ ನಗರ ತಾಲಿಬಾನ್ ವಶವಾಗುತ್ತಿದ್ದಂತೆ ಈ ಪೈಕಿ ಅನೇಕರು ಸಿಖ್ ಗುರುದ್ವಾರ ಒಂದರಲ್ಲಿ ಆಶ್ರಯ ಪಡೆದಿದ್ದಾರೆ. ಅಲ್ಲಿ 320 ಮಂದಿ ಇದ್ದಾರೆಂದು ಹೇಳಲಾಗುತ್ತಿದೆ.
With chaos unfolding in Kabul, thousands of people are fleeing Afghanistan, fearful of what lies ahead in the second Taliban regime. Heart-wrenching visuals from the airport in the capital city show people crowding airplanes leaving the war-torn country. While many minorities are fleeing Afghanistan fearing atrocities by the incoming Taliban regime, few are choosing to stay and face whatever fate comes their way. One such person is the last Hindu priest in the country, Pt. Rajesh Kumar of the Rattan Nath temple in Kabul. Several of his Hindu acquaintances have reportedly offered to arrange for Pandit Kumar to leave Afghanistan. But the loyal priest is preferring to stay put and keep the prayer bells in his temple ringing for as long as possible.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm