ಬ್ರೇಕಿಂಗ್ ನ್ಯೂಸ್
06-09-20 02:38 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.6 :ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಭಾರತದಲ್ಲಿ ಶನಿವಾರ ಒಂದೇ ದಿನ 90 ಸಾವಿರಕ್ಕೂ ಅಧಿಕ ಕೊರೋನ ಪ್ರಕರಣಗಳು ವರದಿಯಾಗಿದ್ದು, ವಿಶ್ವದಲ್ಲಿ ಗರಿಷ್ಠ ಸೋಂಕು ದಾಖಲಾದ ದೇಶಗಳ ಪೈಕಿ ಭಾರತ ಬ್ರೆಝಿಲ್ ದೇಶವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದೆ. ಇದೀಗ ಅಮೆರಿಕದಲ್ಲಿ ಮಾತ್ರ ಭಾರತಕ್ಕಿಂತ ಹೆಚ್ಚು ಕೊರೋನ ವೈರಸ್ ಪ್ರಕರಣಗಳು ವರದಿಯಾಗಿವೆ.
ದೇಶದ ಒಟ್ಟು ಪ್ರಕರಣಗಳ ಪೈಕಿ ಶೇಕಡ 46ರಷ್ಟು ಹಾಗೂ ಒಟ್ಟು ಸಾವಿನ ಪೈಕಿ ಶೇಕಡ 52ರಷ್ಟು ಪಾಲು ಹೊಂದಿರುವ ಮಹಾರಾಷ್ಟ್ರ, ಆಂಧ್ರ ಪ್ರದೇಶ ಹಾಗೂ ಕರ್ನಾಟಕ, ಸಾಂಕ್ರಾಮಿಕ ಹರಡುವಿಕೆ ತಡೆಯಲು ಮತ್ತು ಸಾವಿನ ದರವನ್ನು ಶೇಕಡ 1ಕ್ಕಿಂತ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
ದೇಶದಲ್ಲಿ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 70 ಸಾವಿರ ದಾಟಿದ್ದು, ಕಳೆದ 10 ದಿನಗಳಲ್ಲಿ 10 ಸಾವಿರ ಸಾವು ಸಂಭವಿಸಿದೆ. ಶನಿವಾರ ರಾತ್ರಿ ವೇಳೆಗೆ ಒಟ್ಟು ಸೋಂಕಿತರ ಸಂಖ್ಯೆ 41 ಲಕ್ಷ ದಾಟಿದ್ದು, ಬ್ರೆಝಿಲ್ 40,93,586 ಪ್ರಕರಣಗಳೊಂದಿಗೆ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ ಎಂದು ವರ್ಲ್ಡೋಮೀಟರ್ಸ್.ಇನ್ಫೋ ಅಂಕಿ ಅಂಶ ಹೇಳಿದೆ.

ಬಿಹಾರದಲ್ಲಿ ಒಂಭತ್ತು ಮಂದಿ ಪ್ರಾಣ ಕಳೆದುಕೊಂಡಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 750ಕ್ಕೇರಿದೆ. ರಾಜ್ಯದಲ್ಲಿ 1,727 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,45,860ಕ್ಕೇರಿದೆ. ಅಸ್ಸಾಂನಲ್ಲಿ 2,698 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,23,922ಕ್ಕೇರಿದೆ. ರಾಜ್ಯದಲ್ಲಿ ಒಟ್ಟು 352 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಹಿಮಾಂತ ಬಿಸ್ವ ಶರ್ಮಾ ಪ್ರಕಟಿಸಿದ್ದಾರೆ. ಈ ಮಧ್ಯೆ ವಿಶ್ವಾದ್ಯಂತ 26.75 ದಶಲಕ್ಷ ಮಂದಿಗೆ ಸೋಂಕು ತಗಲಿದ್ದು, 8,75,419 ಮಂದಿ ಮೃತಪಟ್ಟಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm