ಬ್ರೇಕಿಂಗ್ ನ್ಯೂಸ್
06-09-20 02:38 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.6 :ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಭಾರತದಲ್ಲಿ ಶನಿವಾರ ಒಂದೇ ದಿನ 90 ಸಾವಿರಕ್ಕೂ ಅಧಿಕ ಕೊರೋನ ಪ್ರಕರಣಗಳು ವರದಿಯಾಗಿದ್ದು, ವಿಶ್ವದಲ್ಲಿ ಗರಿಷ್ಠ ಸೋಂಕು ದಾಖಲಾದ ದೇಶಗಳ ಪೈಕಿ ಭಾರತ ಬ್ರೆಝಿಲ್ ದೇಶವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದೆ. ಇದೀಗ ಅಮೆರಿಕದಲ್ಲಿ ಮಾತ್ರ ಭಾರತಕ್ಕಿಂತ ಹೆಚ್ಚು ಕೊರೋನ ವೈರಸ್ ಪ್ರಕರಣಗಳು ವರದಿಯಾಗಿವೆ.
ದೇಶದ ಒಟ್ಟು ಪ್ರಕರಣಗಳ ಪೈಕಿ ಶೇಕಡ 46ರಷ್ಟು ಹಾಗೂ ಒಟ್ಟು ಸಾವಿನ ಪೈಕಿ ಶೇಕಡ 52ರಷ್ಟು ಪಾಲು ಹೊಂದಿರುವ ಮಹಾರಾಷ್ಟ್ರ, ಆಂಧ್ರ ಪ್ರದೇಶ ಹಾಗೂ ಕರ್ನಾಟಕ, ಸಾಂಕ್ರಾಮಿಕ ಹರಡುವಿಕೆ ತಡೆಯಲು ಮತ್ತು ಸಾವಿನ ದರವನ್ನು ಶೇಕಡ 1ಕ್ಕಿಂತ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
ದೇಶದಲ್ಲಿ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 70 ಸಾವಿರ ದಾಟಿದ್ದು, ಕಳೆದ 10 ದಿನಗಳಲ್ಲಿ 10 ಸಾವಿರ ಸಾವು ಸಂಭವಿಸಿದೆ. ಶನಿವಾರ ರಾತ್ರಿ ವೇಳೆಗೆ ಒಟ್ಟು ಸೋಂಕಿತರ ಸಂಖ್ಯೆ 41 ಲಕ್ಷ ದಾಟಿದ್ದು, ಬ್ರೆಝಿಲ್ 40,93,586 ಪ್ರಕರಣಗಳೊಂದಿಗೆ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ ಎಂದು ವರ್ಲ್ಡೋಮೀಟರ್ಸ್.ಇನ್ಫೋ ಅಂಕಿ ಅಂಶ ಹೇಳಿದೆ.

ಬಿಹಾರದಲ್ಲಿ ಒಂಭತ್ತು ಮಂದಿ ಪ್ರಾಣ ಕಳೆದುಕೊಂಡಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 750ಕ್ಕೇರಿದೆ. ರಾಜ್ಯದಲ್ಲಿ 1,727 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,45,860ಕ್ಕೇರಿದೆ. ಅಸ್ಸಾಂನಲ್ಲಿ 2,698 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,23,922ಕ್ಕೇರಿದೆ. ರಾಜ್ಯದಲ್ಲಿ ಒಟ್ಟು 352 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಹಿಮಾಂತ ಬಿಸ್ವ ಶರ್ಮಾ ಪ್ರಕಟಿಸಿದ್ದಾರೆ. ಈ ಮಧ್ಯೆ ವಿಶ್ವಾದ್ಯಂತ 26.75 ದಶಲಕ್ಷ ಮಂದಿಗೆ ಸೋಂಕು ತಗಲಿದ್ದು, 8,75,419 ಮಂದಿ ಮೃತಪಟ್ಟಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm